ಶಾಸಕ ಸ್ಥಾನಕ್ಕೆ ಕೆ ಎಲ್ ಶಿವಲಿಂಗೇಗೌಡ ರಾಜೀನಾಮೆ

Date:

Advertisements
  • ರಾಮಸ್ವಾಮಿ ಬೆನ್ನಲ್ಲೇ ಶಿವಲಿಂಗೇಗೌಡರ ರಾಜೀನಾಮೆ
  • ಹಾಸನದಲ್ಲಿ ಜೆಡಿಎಸ್‌ನ ಎರಡು ವಿಕೆಟ್‌ಗಳ ಪತನ

ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ ಎಲ್‌ ಶಿವಲಿಂಗೇಗೌಡ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸುವ ಮೂಲಕ ಶಿವಲಿಂಗೇಗೌಡ ಅವರು ಕಾಂಗ್ರೆಸ್ ಸೇರುವ ಹಾದಿಯನ್ನು ಸುಲಭ ಮಾಡಿಕೊಂಡಿದ್ದಾರೆ. ಈ ಹಿಂದೆ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷ ಸೇರುವುದಾಗಿ ಘೋಷಿಸಿದ್ದರು.

ಜೆಡಿಎಸ್‌ನ ಅರಕಲಗೂಡು ಮಾಜಿ ಶಾಸಕ ಎ ಟಿ ರಾಮಸ್ವಾಮಿ ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಶಿವಲಿಂಗೇಗೌಡ ಅವರು ಜೆಡಿಎಸ್‌ಗೆ ವಿದಾಯ ಹೇಳಿದ್ದಾರೆ. ಈ ಮೂಲಕ ಹಾಸನ ಜೆಡಿಎಸ್‌ನ ಎರಡು ವಿಕೆಟ್‌ಗಳ ಪತನವಾಗಿದೆ.

Advertisements

ಶಿವಲಿಂಗೇಗೌಡರು ರಾಜೀನಾಮೆ ಸಲ್ಲಿಸಲು ಸುಮಾರು 300ಕ್ಕೂ ಅಧಿಕ ಬೆಂಬಲಿಗರೊಂದಿಗೆ ಆಗಮಿಸಿದ್ದರು. ಜೆಡಿಎಸ್‌ ಭದ್ರಕೋಟೆ ಎನ್ನಲಾದ ಹಾಸನದಲ್ಲಿ ಒಬ್ಬೊಬ್ಬರೇ ನಾಯಕರು ಪಕ್ಷ ತೊರೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎ ಟಿ ರಾಮಸ್ವಾಮಿ ಬಿಜೆಪಿ ಸೇರ್ಪಡೆ

ಎಪಿಎಂಸಿ  ರಾಮಚಂದ್ರ, ಜಿ.ಪಂ ಮಾಜಿ ಅಧ್ಯಕ್ಷ ಹುಚ್ಚೇಗೌಡ, ಸುರೇಶ ಚಗಚಗೇರಿ, ಈಶ್ವರಪ್ಪ ಚಗಚಗೇರಿ, ಬಿಳಿ ಚೌಡಯ್ಯ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಗಂಡಸಿ ಅಯ್ಯಣ್ಣ, ಬಿ.ಎಂ.ಧರ್ಮಣ್ಣ, ಪ್ರಜ್ಚಲ್, ಹೆಗ್ಗಡೆ ಮಂಜಣ್ಣ, ನಾಗರಹಳ್ಳಿ ದೇವರಾಜು ಸೇರಿದಂತೆ ಇತರರು ಶಾಸಕರ ರಾಜೀನಾಮೆ ಸಂದರ್ಭದಲ್ಲಿದ್ದರು.

ಶಿವಲಿಂಗೇಗೌಡ ಅವರು 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನಸಭೆಗೆ ಆಯ್ಕೆ ಆಗಿದ್ದರು. ಈ ಬಾರಿಯ ಚುನಾವಣೆಗೆ ಕಾಂಗ್ರೆಸ್ ಟಿಕೆಟ್‌ನಿಂದ ಸ್ಪರ್ಧಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X