ಸ್ಮೃತಿ ಇರಾನಿ ಬಗ್ಗೆ ಅವಹೇಳನ ಬೇಡ; ರಾಹುಲ್ ಗಾಂಧಿ ಮನವಿ

Date:

Advertisements

2019ರಲ್ಲಿ ಅಮೇಠಿಯಲ್ಲಿ ತಮ್ಮನ್ನು ಸೋಲಿಸಿದ್ದ ಮತ್ತು ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋತಿರುವ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ‘ಅವಹೇಳನ’ ಬೇಡ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಗಾಂಧಿ ಕುಟುಂಬದ ನಿಷ್ಠಾವಂತ ಬೆಂಬಲಿಗ ಕಿಶೋರಿ ಲಾಲ್ ಶರ್ಮಾ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿದ್ದ ಸ್ಮೃತಿ ಇರಾನಿ 1.6 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ.

ಸೋಲುಂಡ ಇರಾನಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೆಲವು ಕಾಂಗ್ರೆಸ್‌ ಕಾರ್ಯಕರ್ತರು ವ್ಯಂಗ್ಯ ಮತ್ತು ನಿಂದನೆಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ, “ಗೆಲುವು ಮತ್ತು ಸೋಲುಗಳು ಜೀವನದಲ್ಲಿ ಸಂಭವಿಸುತ್ತವೆ. ಅವಹೇಳನಕಾರಿ ಭಾಷೆಯನ್ನು ಬಳಸುವುದನ್ನು ಮತ್ತು ಶ್ರೀಮತಿ ಸ್ಮೃತಿ ಇರಾನಿ ಬಗ್ಗೆ ಅಸಹ್ಯವಾಗಿ ವರ್ತಿಸುವುದನ್ನು ನಿಲ್ಲಿಸುವಂತೆ ನಾನು ಪ್ರತಿಯೊಬ್ಬರನ್ನು ಕೋರುತ್ತೇನೆ” ಎಂದು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಸೋಲಿನ ಕಾರಣಕ್ಕೆ ಇರಾನಿ ಅಥವಾ ಬೇರೆ ಯಾವುದೇ ನಾಯಕರನ್ನು ಅವಮಾನಿಸುವುದು ಮತ್ತು ನಿಂದಿಸುವುದು ದೌರ್ಬಲ್ಯದ ಸಂಕೇತವೇ ಹೊರತು, ಶಕ್ತಿಯ ಸಂಕೇತವಲ್ಲ” ಎಂದು ಅವರು ಹೇಳಿದ್ದಾರೆ.

Advertisements

ಬಿಜೆಪಿಯ ದ್ವೇಷ ರಾಜಕಾರಣದ ಬಗ್ಗೆ ಹಿಂದಿನಿಂದಲೂ ಮಾತನಾಡುತ್ತಲೇ ಬಂದಿರುವ ರಾಹುಲ್‌ ಗಾಂಧಿ, ‘ಮೊಹಬ್ಬತ್ ಕಿ ದುಕಾನ್’ (ಪ್ರೀತಿಯ ಅಂಗಡಿ) ತೆರೆಯಲು ಬಯಸುವುದಾಗಿ ಪದೇ ಪದೇ ಹೇಳಿದ್ದಾರೆ. ದ್ವೇಷವನ್ನು ತೊಡೆಯಬೇಕು ಎಂದಿದ್ದಾರೆ.

 

2024ರಲ್ಲಿ ಗಾಂಧಿ ಕುಟುಂಬದ ಭದ್ರಕೋಟೆ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸ್ಪರ್ಧಿಸುತ್ತಾರೆ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ತಮ್ಮ ತಾಯಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ಮತ್ತೊಂದು ಭದ್ರಕೋಟೆ ರಾಯ್ ಬರೇಲಿಯಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು.

ಆದರೆ, ವಯನಾಡ್‌ ಮತ್ತು ರಾಯ್‌ ಬರೇಲಿಯಲ್ಲಿ ಸ್ಪರ್ಧಿಸಿದ ರಾಹುಲ್‌ ಗಾಂಧಿ, ಅಮೇಥಿಯಲ್ಲಿ ತಮ್ಮ ಕುಟುಂಬದ ಬೆಂಬಲಿಗ ಕಿಶೋರಿ ಲಾಲ್ ಶರ್ಮಾ ಅವರನ್ನು ಇರಾನಿ ವಿರುದ್ಧ ಅಮೇಥಿಯಲ್ಲಿ ಕಣಕ್ಕಿಳಿಸಿದ್ದರು. ಆಗ, ರಾಹುಲ್‌ ಗಾಂಧಿ ಅಮೇಥಿಯಿಂದ ಓಡಿ ಹೋಗಿದ್ದಾರೆ ಎಂದು ಇರಾನಿ ವ್ಯಂಗ್ಯವಾಡಿದ್ದರು.

ಆದರೆ, ಅಮೇಥಿಯಲ್ಲಿನ ಸೋಲು ಇರಾನಿಗೆ ಆಘಾತವನ್ನುಂಟುಮಾಡಿತು. “ಜೀವನ ಹೀಗಿದೆ… ನನ್ನ ಜೀವನದ ಒಂದು ದಶಕವು ಒಂದು ಹಳ್ಳಿಯಿಂದ ಇನ್ನೊಂದು ಹಳ್ಳಿಗೆ ಹೋಗುವುದು, ಜೀವನವನ್ನು ಕಟ್ಟುವುದು, ಭರವಸೆ ಮತ್ತು ಆಕಾಂಕ್ಷೆಗಳನ್ನು ಬೆಳೆಸುವುದು, ಮೂಲಭೂತ ಸೌಕರ್ಯಗಳನ್ನು – ರಸ್ತೆಗಳು, ನಾಲೆ, ಬೈಪಾಸ್, ವೈದ್ಯಕೀಯ ಕಾಲೇಜು ಮತ್ತು ಹೆಚ್ಚಿನವು – ಒದಗಿಸುವುದು. ನನ್ನ ಬೆಂಬಲಕ್ಕೆ ನಿಂತವರಿಗೆ ನಾನು ಕೃತಜ್ಞನಾಗಿದ್ದೇನೆ. ಕೆಲವರು ಜೋಶ್‌ ಹೇಗಿದೆ ಎಂದು ಪ್ರಶ್ನಿಸುತ್ತಿದ್ದಾರೆ. ನಾನ್ನ ಉತ್ತರ ಹೀಗಿದೆ- ಜೋಶ್‌ ಈಗಲೂ ಹೆಚ್ಚಿನದ್ದಾಗಿದೆ ಸರ್'” ಎಂದು ಇರಾನಿ ಟ್ವೀಟ್‌ ಮಾಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X