ವಿದ್ಯಾರ್ಥಿನಿ ಬರೆದ ಸಾಮಾಜಿಕ ಕಳಕಳಿ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

Date:

Advertisements

ಎರಡನೇ ಬಾರಿಗೆ ಸಿಎಂ ಆಗಿದ್ದಕ್ಕೆ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿ ಮತ್ತು ಸಾಮಾಜಿಕ ಕಳಕಳಿಯ ಅಂಶದೊಂದಿಗೆ ಪತ್ರ ಬರೆದಿದ್ದ 8ನೇ ತರಗತಿ ವಿದ್ಯಾರ್ಥಿನಿಗೆ ಸಿಎಂ ಸಿದ್ದರಾಮಯ್ಯ ಮರಳಿ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ.

ಕೊಪ್ಪಳದ ಮಾಸ್ತಿ ಪಬ್ಲಿಕ್ ಸ್ಕೂಲ್‌ನ 8ನೇ ತರಗತಿಯ ಶ್ರೆಯಾಂಕ ವಿ ಮೆಣಸಗಿ ಎಂಬ ವಿದ್ಯಾರ್ಥಿನಿ ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನಾ ಪತ್ರ ಬರೆದಿದ್ದರು. ಇದಕ್ಕೆ ಸಿಎಂ ಪ್ರತಿಕ್ರಿಯಿಸಿದ್ದು, ವಿದ್ಯಾರ್ಥಿನಿ ಸಂತಸ ವ್ಯಕ್ತಪಡಿಸಿದ್ದಾರೆ.

ಮೇ 29 ರಂದು ಕೊಪ್ಪಳದ ಮಾಸ್ತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಶ್ರೇಯಾಂಕ ಮೆಣಸಿಗೆ ಪತ್ರ ಬರೆದು ಅಭಿನಂದಿಸಿದ್ದರು.‌ “ರಾಜ್ಯದಲ್ಲಿ ಎರಡನೇ ಬಾರಿಗೆ ಸಿಎಂ ಆಗುತ್ತಿದ್ದೀರಿ. ಕಳೆದ ಬಾರಿಯಂತೆ ಈ ಬಾರಿಯೂ ಉತ್ತಮ, ಕಳಂಕ ರಹಿತ ಆಡಳಿತ ನೀಡಿ. ಬಡವರು, ದೀನದಲಿತರ ಆಶಾಕಿರಣವಾಗಿರೋ ತಮಗೆ ಅಭಿನಂದನೆಗಳು” ಎಂದು ವಿದ್ಯಾರ್ಥಿನಿ ಪತ್ರದಲ್ಲಿ ಬರೆದಿದ್ದರು.

Advertisements
ವಿದ್ಯಾರ್ಥಿನಿ ಪತ್ರ

“2013 ರಿಂದ 18 ರವೆಗೆ ಕಳಂಕ ರಹಿತ ಆಡಳಿತ ನೀಡಿ ಭೇಷ್ ಎನ್ನಿಸಿಕೊಂಡಿದ್ದೀರಿ, ಮತ್ತೊಮ್ಮೆ ರಾಜ್ಯದ ಜನಮೆಚ್ಚಿದ ನಾಯಕರಾಗಿ ಹೊರಹೊಮ್ಮಿ. ಈ ಬಾರಿಯೂ ಜನಮೆಚ್ಚುವ ಕೆಲಸ‌ ಮಾಡಿ” ಎಂದು ಶುಭ ಹಾರೈಸಿದ್ದರು.

ಈ ಸುದ್ದಿ ಓದಿದ್ದೀರಾ? ಡ್ರಗ್ಸ್ ಹಾವಳಿ ತಡೆಗೆ ವಿಶೇಷ ತಂಡ ರಚಿಸಲು ಮುಖ್ಯಮಂತ್ರಿ ಸೂಚನೆ

ಬಾಲಕಿ ಪತ್ರ ಸಿಎಂ ಸಿದ್ದರಾಮಯ್ಯ ಕಚೇರಿಗೆ ತಲುಪುತ್ತಿದ್ದಂತೆ. ಪುಟ್ಟ ಬಾಲಕಿಯ ಪತ್ರ ಓದಿರುವ ಸಿಎಂ ಸಿದ್ದರಾಮಯ್ಯ ಖುದ್ದು ತಾವೇ ಬಾಲಕಿಗೆ ಪತ್ರ ಬರೆದು ಶುಭ ಹಾರೈಸಿದ್ದಾರೆ. “ಇಂದಿನ ಮಕ್ಕಳೇ ನಾಳಿನ ರಾಷ್ಟ್ರ ನಿರ್ಮಾತೃಗಳು. ಚಿಕ್ಕ ವಯಸ್ಸಿನಲ್ಲೆ ನಿನಗಿರೋ ಸಾಮಾಜಿಕ ಕಾಳಜಿ ಮೆಚ್ಚುವಂತದ್ದು. ಜೀವನದಲ್ಲಿ ಶ್ರದ್ದೆಯಿಂದ ವಿದ್ಯೆ ಕಲಿತು ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡು” ಎಂದು ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವುದಕ್ಕೆ ವಿದ್ಯಾರ್ಥಿನಿ ಖುಷಿ ಪಟ್ಟಿದ್ದಾರೆ. ಹಾಗೆಯೇ ಪಾಲಕರೂ ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X