ಲಿಂಗಾಯತರು ಹಿಂದೂಗಳಲ್ಲ ಎಂಬ ಕೆಲವರ ಹೇಳಿಕೆ ರಾಜಕೀಯ ಪ್ರೇರಿತ: ಬಸನಗೌಡ ಪಾಟೀಲ ಯತ್ನಾಳ್‌

Date:

Advertisements

ಲಿಂಗಾಯತರು ಹಿಂದೂಗಳಲ್ಲ ಎಂಬ ಕೆಲವರ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು, ಹಿಂದೆ ಪ್ರತ್ಯೇಕ ಧರ್ಮದ ರೂವಾರಿಯಾಗಿದ್ದ ಸಿದ್ದರಾಮಯ್ಯನವರ ಯೋಜನೆಯ ಮುಂದುವರೆದ ಭಾಗವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಆರೋಪಿಸಿದ್ದಾರೆ.

ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ನಮೂದು ಮಾಡುವ ವಿಚಾರ ಅಖಿಲ ಭಾರತ ವೀರಶೈವ ಮಹಾಸಭಾದ 24 ನೇ ಮಹಾಧಿವೇಶನದಲ್ಲಾದ ನಿರ್ಣಯ, ಇದರೊಂದಿಗೆ ಲಿಂಗಾಯತರು ಹಿಂದೂಗಳಲ್ಲಾ ಎಂಬ ಕೆಲ ನಾಯಕರ ಹೇಳಿಕೆಗಳ ಬಗ್ಗೆ ಪರ – ವಿರೋಧ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಈ ಬಗ್ಗೆ ಯತ್ನಾಳ್ ಅವರು ಎಕ್ಸ್‌ ನಲ್ಲಿ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

“ಹಿಂದುತ್ವ ಈ ನೆಲದ ಆತ್ಮ, ಬಸವಣ್ಣನವರು ಆರಾಧಿಸಿದ ಲಿಂಗವೂ ಈಶ್ವರನ ಅಂಶವೇ, ಹಿಂದುತ್ವ ಬದುಕುವ ದಾರಿ. ಜಗತ್ತಿನ ಯಾವುದಾದರೂ ಧರ್ಮ ಇನ್ನೊಬ್ಬರ ಮೇಲೆ ದಾಳಿ ಮಾಡದೆ, ಎಲ್ಲರನ್ನು ಗೌರವಿಸಿರುವುದು ಹಿಂದುತ್ವ ಮಾತ್ರ” ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ

“ಲಿಂಗಾಯತ, ವೀರಶೈವ ಹಿಂದುತ್ವದ ಭಾಗವೇ ಹೊರತು ಬೇರೆಯಲ್ಲ. 2018ರ ವಿಧಾನಸಭೆ ಚುನಾವಣೆಗಾಗಿ ಸಿದ್ದರಾಮಯ್ಯನವರು ಈ ಗೊಂದಲವನ್ನು ಸೃಷ್ಟಿ ಮಾಡಿದ್ದರು, ಈಗ ಲೋಕಸಭೆ ಚುನಾವಣೆಗೆ ಬೇರೆ ಯಾವುದೇ ಚರ್ಚಾ ವಿಷಯವಿಲ್ಲದೆ ಈ ಪ್ರತ್ಯೇಕ ಧರ್ಮದ ಚರ್ಚೆ ಆರಂಭಿಸಿದ್ದಾರೆ” ಎಂದು ಹೇಳಿದ್ದಾರೆ.

“ಪಂಚಪೀಠಗಳು, ಬಸವಣ್ಣನವರ ಅನುಯಾಯಿಗಳು ಹಾಗು ಶರಣರ ತತ್ವಗಳು ಎಲ್ಲವೂ ಹಿಂದೂ ಸಂಸ್ಕೃತಿಯ ಭಾಗವೇ, ಅಲ್ಲಿಯೂ ಶಿವ, ಇಲ್ಲಿಯೂ ಶಿವನೇ! ‘ವೀರಶೈವ ಲಿಂಗಾಯತ’ ಹಿಂದು ಸಂಸ್ಕೃತಿಯ ಭಾಗವಾಗಿದೆ. ಹರ ಹರ ಮಹದೇವ್!” ಎಂದು ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X