ಮಂಡ್ಯದಿಂದ ನಿಖಿಲ್ ಸ್ಪರ್ಧಿಸಲ್ಲ: ಮೋದಿ ಭೇಟಿ ಬಳಿಕ ಊಹಾಪೋಹಗಳಿಗೆ ತೆರೆ ಎಳೆದ ಕುಮಾರಸ್ವಾಮಿ

Date:

Advertisements

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ಜೆಡಿಎಸ್ ಹಾಗೂ ಬಿಜೆಪಿ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದೆ. ಈ ನಡುವೆ ಸೀಟು ಹಂಚಿಕೆಯ ವಿಚಾರವು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಅದರಲ್ಲೂ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರ ಬದಲಿಗೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಸೀಟು ಸಿಗಲಿದೆ ಎಂಬ ಚರ್ಚೆಗಳು ನಡೆಯುತ್ತಿದ್ದವು. ಆದರೆ ಈ ಎಲ್ಲ ಊಹಾಪೋಹಗಳಿಗೆ ಹೆಚ್‌ ಡಿ ಕುಮಾರಸ್ವಾಮಿ ಇಂದು ತೆರೆ ಎಳೆದಿದ್ದಾರೆ.

ದೆಹಲಿಯಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜೆಡಿಎಸ್ ವರಿಷ್ಠ ಹೆಚ್‌ ಡಿ ದೇವೇಗೌಡ ಕುಟುಂಬ ಭೇಟಿ ಮಾಡಿ, ಮಾತುಕತೆ ನಡೆಸಿದೆ. ಈ ಭೇಟಿಯ ವೇಳೆ ಹೆಚ್‌ ಡಿ ಕುಮಾರಸ್ವಾಮಿ, ಹೆಚ್ ಡಿ ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ, ಶಾಸಕ ಸಿ.ಎನ್.‌ಬಾಲಕೃಷ್ಣ, ಮಾಜಿ ಸಂಸದ ಕುಪೇಂದ್ರ ರೆಡ್ಡಿ ಜತೆಯಲ್ಲಿದ್ದರು.

ಪ್ರಧಾನಿ ನರೇಂದ್ರ ಮೋದಿ ಭೇಟಿಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ, “ನಿಖಿಲ್ ಕುಮಾರಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧೆ ಮಾಡುವುದಿಲ್ಲ. ಆದರೆ, 28 ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಅವರೇ ಸ್ಪಷ್ಟಪಡಿಸಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ. ಆ ಮೂಲಕ ಮತ್ತೆ ಮಂಡ್ಯದಿಂದ ಸುಮಲತಾ ಅಂಬರೀಶ್ ಅವರೇ ಬಿಜೆಪಿಯ ಅಭ್ಯರ್ಥಿ ಆಗುವ ಎಲ್ಲ ಸಾಧ್ಯತೆಗಳಿವೆ.

Advertisements

“ನನ್ನ ಮೇಲಿನ ಅಭಿಮಾನದಿಂದ ಕೆಲವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ಹೇಳುತ್ತಿದ್ದಾರೆ. ನಮ್ಮ ಪಕ್ಷ ಮತ್ತು ಬಿಜೆಪಿಯಲ್ಲಿ ಕೆಲವರು ಅಭಿಪ್ರಾಯ ತಿಳಿಸುತ್ತಿದ್ದಾರೆ. ಮೋದಿಯವರ ನೇತೃತ್ವದಲ್ಲಿ ಮತ್ತೆ ಕೇಂದ್ರದಲ್ಲಿ ಸರ್ಕಾರ ಬಂದು, ನಾನು ಮಂತ್ರಿಯಾದರೆ ರಾಜ್ಯಕ್ಕೆ ಆದ್ಯತೆ ಸಿಗಬಹುದು ಎಂಬುದು ಅವರ ಅಭಿಪ್ರಾಯವಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ತುದಿಗಾಲಲ್ಲಿ‌ ನಿಂತಿಲ್ಲ. ಆ ಬಗ್ಗೆ ತೀರ್ಮಾನವೂ ಮಾಡಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನನ್ನ ಆದ್ಯತೆ ಕರ್ನಾಟಕದ ರಾಜಕಾರಣವಾಗಿದೆ” ಎಂದು ಇದೇ ವೇಳೆ ಹೆಚ್‌ಡಿಕೆ ತಿಳಿಸಿದ್ದಾರೆ.

“ಸೀಟು ಹಂಚಿಕೆಯಲ್ಲಿ ಕೂಡ ಯಾವುದೇ ರೀತಿಯ ಸಮಸ್ಯೆ ಇಲ್ಲ. ಯಾವ ಕ್ಷೇತ್ರದಲ್ಲಿ ಯಾರು ನಿಲ್ಲಬೇಕು ಎಂಬ ಬಗ್ಗೆ ಅಂತಿಮ ನಿರ್ಣಯ ಮಾಡುತ್ತೇವೆ. ಎರಡು ಪಕ್ಷಗಳ ನಡುವೆ ವಿಶ್ವಾಸ ಮೂಡಬೇಕು. ಅದಕ್ಕೆ ನಾನು ಆದ್ಯತೆ ನೀಡುತ್ತಿದ್ದೇನೆ. ಸೀಟು ಹಂಚಿಕೆ ಆಮೇಲೆ ಆಗುತ್ತದೆ. ಜನವರಿ ಅಂತ್ಯದೊಳಗೆ ಎರಡೂ ಪಕ್ಷಗಳು ರಾಜ್ಯದ ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಲೂಟಿಗಳ ಬಗ್ಗೆ ಒಗ್ಗಟ್ಟಿನಿಂದ ಬಿಜೆಪಿ-ಜೆಡಿಎಸ್ ಕಾರ್ಯತಂತ್ರ ರೂಪಿಸಲಿದೆ” ಎಂದು ತಿಳಿಸಿದರು.

“ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಬಗ್ಗೆ ಯಾರಿಗೂ ಅಸಮಾಧಾನ ಇಲ್ಲ. ಬಿಜೆಪಿಯಲ್ಲಿ ಸಣ್ಣಪುಟ್ಟ ಸಮಸ್ಯೆ ಇರಬಹುದು. ದೆಹಲಿ ಮತ್ತು ರಾಜ್ಯ ನಾಯಕರಿಗೆ ಇದನ್ನು‌ ನಿಭಾಯಿಸುವ ಸಾಮರ್ಥ್ಯ ಇದೆ. ಚುನಾವಣೆ ಮೇಲೆ ಇದು ಪರಿಣಾಮ ಬೀರಲ್ಲ. ಇಂದು ಅಥವಾ ನಾಳೆ‌ ಅಮಿತ್ ಶಾ ಮತ್ತು ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದೇನೆ” ಎಂದು ದೆಹಲಿ ಪ್ರವಾಸದಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X