ಪ್ರಜ್ವಲ್ ಬಳಿಕ ಸೂರಜ್ ರೇವಣ್ಣ ಸರದಿ: ಸಲಿಂಗಕಾಮ, ಲೈಂಗಿಕ ದೌರ್ಜನ್ಯದ ಆರೋಪ!

Date:

Advertisements

ದೇಶಾದ್ಯಂತ ಸುದ್ದಿಯಾಗಿದ್ದ ಹಾಸನದ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಇನ್ನೂ ಸುದ್ದಿಯಲ್ಲಿರುವಾಗಲೇ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಕೂಡ ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ.

“ಸೂರಜ್ ರೇವಣ್ಣ ಅವರು ತನ್ನನ್ನು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ದೌರ್ಜನ್ಯ ಎಸಗಿದ್ದಾರೆ. ಈಗ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ” ಎಂದು ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತನೋರ್ವ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ಸುಮಾರು 14ರಿಂದ 15 ಪುಟದ ದೂರು ಸಲ್ಲಿಸಿರುವುದಾಗಿ ವರದಿಯಾಗಿದೆ.

“ಕಳೆದ ಜೂನ್ 16ರ ಭಾನುವಾರಂದು ತನಗೆ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದಕ್ಕೆ ತೆರಳಿದ್ದೆ. ತನಗೆ ಉದ್ಯೋಗದ ನೆರವು ನೀಡುವುದಾಗಿ ಭರವಸೆ ನೀಡಿ ಕರೆಸಿಕೊಂಡಿದ್ದರು. ಅವರ ಸಂದೇಶ ನಂಬಿಕೊಂಡು ಅಲ್ಲಿ ತೆರಳಿದ್ದೆ. ಅಲ್ಲಿನ ಕೊಠಡಿಯೊಂದಕ್ಕೆ ಕರೆದುಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ, ಅವರು ತನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ, ನನ್ನ ದೇಹದ ಮೇಲೆಲ್ಲ ಗಾಯ ಮಾಡಿದ್ದಾರೆ. ಇದನ್ನು ಎಲ್ಲಾದರೂ ಬಾಯಿಬಿಟ್ಟರೆ ಕೊಲ್ಲುವ ಬೆದರಿಕೆ ಕೂಡ ಹಾಕಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿದ್ದೇನೆ” ಎಂದು ಸುದೀರ್ಘ ದೂರಿನಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಜೆಡಿಎಸ್ ಕಾರ್ಯಕರ್ತ ಗಂಭೀರ ಆರೋಪ ಮಾಡಿರುವುದಾಗಿ ವರದಿಯಾಗಿದೆ.

Advertisements

ಇದನ್ನು ಓದಿದ್ದೀರಾ? ಅಕಾಡೆಮಿ-ಪ್ರಾಧಿಕಾರಗಳಿಗೆ ಸಮನ್ವಯ ಸಮಿತಿ ರಚನೆ: ಕನ್ನಡ, ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ

ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಯುವಕ ಪೊಲೀಸರ ಬಳಿ ನೀಡಿರುವ ದೂರಿನಲ್ಲಿ ಎಲ್ಲವನ್ನೂ ವಿವರಿಸಿದ್ದಾನೆ. ದೌರ್ಜನ್ಯಕ್ಕೆ ಒಳಗಾದ ಯುವಕನ  ದೇಹದ ಹಲವು ಭಾಗಗಳಲ್ಲಿ ಕಚ್ಚಿದ ಗುರುತುಗಳಿವೆ, ಮರ್ಮಾಂಗದಲ್ಲೂ ಗಾಯವಾಗಿದೆ ಎಂದು ವರದಿಯಾಗಿದೆ. ಪೊಲೀಸರು ಹುಡುಗನಿಂದ ದೂರು ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ.

ಪ್ರಜ್ವಲ್ ರೇವಣ್ಣ ಪ್ರಕರಣ ಇನ್ನೂ ಸುದ್ದಿಯಲ್ಲಿರುವಾಗಲೇ, ವಿಧಾನ ಪರಿಷತ್ ಸದಸ್ಯ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಡಾ. ಸೂರಜ್ ರೇವಣ್ಣ ಅವರ ಪ್ರಕರಣ ಬೆಳಕಿಗೆ ಬಂದಿದ್ದು, ಮುಂದೆ ಏನೇನಾಗಲಿದೆಯೋ ಕಾದು ನೋಡಬೇಕಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X