ದಕ್ಷಿಣ ಕನ್ನಡ | ಬಿಜೆಪಿ ಶಾಸಕ ಹರೀಶ್‌ ಪೂಂಜಾಗೆ ಗ್ರಾಮಸ್ಥರ ತರಾಟೆ; ಗ್ರಾಮಸ್ಥರನ್ನೇ ನಿಂದಿಸಿದ ಶಾಸಕ

Date:

Advertisements

ಕಳೆದೊಂದು ತಿಂಗಳಿನಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಅತೀವೃಷ್ಟಿ ಎದುರಾಗಿದೆ. ನಾನಾ ಹಳ್ಳಿಗಳ ಜನರು ತಮ್ಮ ಆಸ್ತಿ, ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಆದರೂ, ಜನರ ಸಂಕಷ್ಟನ್ನು ಆಲಿಸದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ರೈತರು ತರಾಟೆ ತೆಗೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಾಣಾಲು ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಬಿರುಕು ಬಿಟ್ಟಿದ್ದು, ವಾಸಹ ಸಂಚಾರಕ್ಕೆ ಅಡ್ಡಿಯಾಗಿದೆ. ರಸ್ತೆ ಬಿರುಕು ಬಿಟ್ಟು, ಹಲವಾರು ದಿನಗಳೇ ಕಳೆದಿದ್ದು, ಗ್ರಾಮಕ್ಕೆ ಶಾಸಕ ಹರೀಶ್ ಪೂಂಜಾ ಶನಿವಾರ ಭೇಟಿ ನೀಡಿದ್ದಾರೆ. ತಡವಾಗಿ ಗ್ರಾಮಕ್ಕೆ ಬಂದ ಪೂಂಜಾ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರನ್ನೇ ಪೂಂಜಾ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

“ಶಾಸಕರನ್ನು ಯಾಕೆ ತಡವಾಗಿ ಬಂದೆ ಎಂದು ಪ್ರಶ್ನಿಸುವ ಹಕ್ಕು ನಿಮಗಿಲ್ಲ” ಎಂದಿರುವ ಪೂಂಜಾ, ಗ್ರಾಮಸ್ಥರು ನಾಯಿ ಎಂದು ಅವಾಚ್ಯವಾಗಿ ನಿಂದಿದ್ದಾರೆ ಎಂದು ವರದಿಯಾಗಿದೆ. ಪೂಂಜಾ ವರ್ತನೆಯಿಂದಾಗಿ ಗ್ರಾಮಸ್ಥರು ಮತ್ತು ಬಿಜೆಪಿಗರ ನಡುವೆ ಚಕಮಕಿ ನಡೆದಿದೆ. ಗ್ರಾಮಸ್ಥರ ಆಕ್ರೋಶದಿಂದ ಕಂಗಾಲಾದ ಪೂಂಜಾ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

Advertisements

ಅಂದಹಾಗೆ, ಮೊನ್ನೆಯಷ್ಟೇ ನಡೆದ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಸ್ವಾತಂತ್ರ್ಯ ಹೋರಾಟವನ್ನು ಇದೇ ಬಿಜೆಪಿ ಶಾಸಕ ಹರೀಶ್ ಪೂಜಾ ಟೀಕೆ ಮಾಡಿದ್ದರು. “ಈ ದೇಶಕ್ಕೆ ಕೇವಲ ಶಾಂತಿಯಿಂದ, ಕೇವಲ ಚರಕ ತಿರುಗಿಸಿದರಿಂದ ಈ ದೇಶಕ್ಕೆ ಸ್ವಾತಂತ್ಯ್ರ ಬಂದಿಲ್ಲ” ಎಂದು ಹೇಳುವ ಮೂಲಕ ಮಹಾತ್ಮ ಗಾಂಧಿ ಅವರನ್ನು ನಿಂದಿಸಿದ್ದರು. ಗಾಂಧಿ ಅವರ ಹೋರಾಟವನ್ನು ಟೀಕಿಸಿದ್ದರು. ಈ ಕಾರಣಕ್ಕಾಗಿ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X