ತೆರಿಗೆ ಅನ್ಯಾಯದ ವಿರುದ್ಧ ದಕ್ಷಿಣದ ರಾಜ್ಯಗಳು ಧ್ವನಿ ಎತ್ತುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

Date:

Advertisements

ನಾವು ಕೇಂದ್ರಕ್ಕೆ 4.5 ಲಕ್ಷ ಕೋಟಿ ರೂ. ತೆರಿಗೆ ಕೊಟ್ಟರೆ, ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 60 ಸಾವಿರ ಕೋಟಿ ರೂ. ಮಾತ್ರ. ಅನ್ಯಾಯಕ್ಕೆ ಒಳಗಾಗಿರುವ ದಕ್ಷಿಣದ ರಾಜ್ಯಗಳ ಜೊತೆ ಸೇರಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಅಗತ್ಯವಿದೆ ಸಿಎಂ ಸಿದ್ದರಾಮಯ್ಯ ಹೇಳಿದರು.

ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದರು.

“ನಮಗೆ 11,495 ಕೋಟಿ ರೂಪಾಯಿ ಹದಿನೈದನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ. ನಾವು ಗ್ಯಾರಂಟಿಗಳಿಗೆ ಹಣ ತೆಗೆದಿಟ್ಟಿದ್ದೀವಿ. ಜೊತೆಗೆ 83 ಸಾವಿರ ಕೋಟಿಯನ್ನು ಬಂಡವಾಳ ವೆಚ್ಚಕ್ಕೆ ತೆಗೆದಿರಿಸಿದ್ದೀವಿ. ಕಳೆದ ವರ್ಷ ನಾವು 52 ಸಾವಿರ ಕೋಟಿ ಬಂಡವಾಳ ವೆಚ್ಚ ಮಾಡಿದ್ದೆವು. ಈ ವರ್ಷ 31 ಸಾವಿರ ಕೋಟಿ ಹೆಚ್ಚಿನ ಬಂಡವಾಳ ವೆಚ್ಚ ಕೊಟ್ಟಿದ್ದೀವಿ. ಆದರೂ, ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ” ಎಂದು ಟೀಕಿಸಿದರು.

Advertisements

“ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು. ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ದವಿದೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ” ಎಂದರು.

“ವೇತನ‌ ಆಯೋಗ ಶಿಫಾರಸ್ಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಇಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X