ಕೇಂದ್ರ ಸರ್ಕಾರದ ವಿರುದ್ಧ #SouthTaxMovement ‘ಎಕ್ಸ್‌’ ಅಭಿಯಾನ; ಸಿಎಂ ಸಿದ್ದರಾಮಯ್ಯ ಬೆಂಬಲ

Date:

Advertisements

ಇತ್ತೀಚೆಗೆ ಮಧ್ಯಂತರ ಬಜೆಟ್ ಮಂಡಿಸಿರುವ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೇವಲ 44,485 ಕೋಟಿ ರೂ.ಗಳನ್ನಷ್ಟೇ ಕೊಟ್ಟಿದೆ. ದೇಶದಲ್ಲಿಯೇ ಕೇಂದ್ರಕ್ಕೆ ತೆರಿಗೆ ಮೂಲಕ ಅತೀ ಹೆಚ್ಚು ಆದಾಯ ಒದಗಿಸುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಕನ್ನಡಿಗರು ‘ಎಕ್ಸ್‌’ ಸಾಮಾಜಿಕ ಜಾಲತಾಣದಲ್ಲಿ #SouthTaxMovement #ನನ್ನತೆರಿಗೆನನ್ನಹಕ್ಕು ಅಭಿಯಾನ ನಡೆಸುತ್ತಿದ್ದಾರೆ. ಎಕ್ಸ್‌ನಲ್ಲಿ ಅಭಿಯಾನವು #SouthTaxMovement ಹ್ಯಾಶ್‌ ಟ್ಯಾಗ್‌ ಟ್ರೆಂಡ್‌ ಆಗುತ್ತಿದೆ. ಕನ್ನಡಿಗರು ಈ ಅಭಿಯಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ನೀಡಿದ್ದಾರೆ.

ಅಭಿಯಾನವನ್ನು ಬೆಂಬಲಿಸಿ ‘ಎಕ್ಸ್‌’ನಲ್ಲಿ ಪೋಸ್ಟ್‌ ಹಾಕಿರುವ ಸಿದ್ದರಾಮಯ್ಯ, “ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ #ನನ್ನತೆರಿಗೆನನ್ನಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ” ಎಂದು ಹೇಳಿದ್ದಾರೆ.

“ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾಡೆಲ್ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು. ಶ್ರಮದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾಡೆಲ್” ಎಂದಿದ್ದಾರೆ.

Advertisements

“ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಲೇಬೇಕು. ನ್ಯಾಯಕ್ಕಾಗಿ ಧ್ವನಿಯೆತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು. ನಿಮ್ಮ ಜೊತೆ ನಾನಿದ್ದೇನೆ, ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ. #SouthTaxMovement” ಎಂದು ಪೋಸ್ಟ್‌ ಮಾಡಿದ್ದಾರೆ.

 

ಭಾನುವಾರ ಸಂಜೆ 5 ಗಂಟೆಯಿಂದ ‘ಎಕ್ಸ್‌’ನಲ್ಲಿ ಕೇಂದ್ರದ ವಿರುದ್ಧ ಅಭಿಯಾನ ನಡೆಯುತ್ತಿದ್ದು, ನಿಟ್ಟಿಗರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕರ್ನಾಟಕವು 4.5 ಲಕ್ಷ ಕೋಟಿ ತೆರಿಗೆ ಸಂಗ್ರಹಿಸಿಕೊಡುವ ಮೂಲಕ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೇ ರಾಜ್ಯವಾಗಿದೆ. ಆದರೆ ವಾಪಸ್ ಚಿಲ್ಲರೆ ಹಣ ಸಾಕೆ?” ಎಂದು ಕಿಡಿಕಾರಿದ್ದಾರೆ.

“ಕರ್ನಾಟಕ ರಾಜ್ಯ ನೀಡುವ 1 ರೂಪಾಯಿ ತೆರಿಗೆಯಲ್ಲಿ, ಮೋದಿ ಸರ್ಕಾರ ವಾಪಾಸು ನೀಡುವುದು ಜುಜುಬಿ 35 ಪೈಸೆ! ಆದರೆ ಉತ್ತರ ಪ್ರದೇಶ ನೀಡುವ 1 ರೂಪಾಯಿಗೆ ಬದಲಾಗಿ ಮೋದಿ ಸರ್ಕಾರ ವಾಪಾಸು ನೀಡುವುದು 2.73 ರೂಪಾಯಿ! ಕರ್ನಾಟಕ ವಿರೋಧಿ ಮೋದಿ ಸರ್ಕಾರ ಕನ್ನಡಿಗರು ಒಗ್ಗಟ್ಟಾಗಿ ಹೇಳಿ ಧಿಕ್ಕಾರ” ಎಂದು ಕಿಡಿಕಾರಿದ್ದಾರೆ.

“14 ನೇ ಹಣಕಾಸು ಆಯೋಗ ಕರ್ನಾಟಕಕ್ಕೆ‌ ನೀಡಿದ್ದ ಪಾಲು 4.72%. 15 ನೇ ಹಣಕಾಸು ಆಯೋಗದಲ್ಲಿ ಮೋದಿ ನೀಡಿದ ಪಾಲು 3.64%. ರಾಜ್ಯಕ್ಕಾದ ಅನ್ಯಾಯ ಬರೋಬ್ಬರಿ 45 ಸಾವಿರ ಕೋಟಿ! ಕರ್ನಾಟಕ ವಿರೋಧಿ ಮೋದಿ ಸರ್ಕಾರ ಕನ್ನಡಿಗರು ಒಗ್ಗಟ್ಟಾಗಿ ಹೇಳಿ ಧಿಕ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅದಾನಿ ಆಸ್ಟ್ರೇಲಿಯಾದಲ್ಲಿ ಗಣಿಗಾರಿಕೆ ಮಾಡಲು SBI ನಿಂದ ಪ್ರಧಾನಿ ಮೋದಿ 4000ಕೋಟಿ ಸಾಲ ಕೊಡಿಸುತ್ತಾರೆ. ನಮ್ಮ ಕರ್ನಾಟಕದ ನ್ಯಾಯಯುತ ಜಿಎಸ್ಟಿ ಪಾಲು ಕೊಡುವುದಿಲ್ಲ ಏಕೆ?” ಎಂದು ಕೇಂದ್ರದ ವಿರುದ್ಧ ಗುಡುಗಿದ್ದಾರೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X