‘ಮಾತನಾಡಲು ಅವಕಾಶ ಕೇಳಿದರೆ ಓಡಿ ಹೋದ ಸ್ಪೀಕರ್’

Date:

Advertisements

ಲೋಕಸಭೆಯಲ್ಲಿ ಮಾತನಾಡಲು ನಮಗೆ ಸ್ಪೀಕರ್ ಓಂ ಬಿರ್ಲಾ ಅವರು ಅವಕಾಶ ನೀಡುತ್ತಿಲ್ಲ. ಅವಕಾಶ ಕೇಳಿದರೆ ಅವರು ಓಡಿ ಹೋಗುತ್ತಾರೆ ಎಂದು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಸ್ಪೀಕರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, “ಸರ್ಕಾರವು ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುತ್ತಿದೆ. ವಿಪಕ್ಷಗಳಿಗೆ ಸದನದಲ್ಲಿ ಮಾತನಾಡಲು ಸ್ಪೀಕರ್ ಅವಕಾಶ ಕೊಡುತ್ತಿಲ್ಲ. ನನಗೆ ಮಾತನಾಡಲು ಅವಕಾಶ ಕೊಡಬೇಕೆಂದು ಕೇಳಿದರೆ, ಅವರು ಓಡಿಹೋದರು. ಇದು ಸದನ ನಡೆಸುವ ಮಾರ್ಗವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ವಿಪಕ್ಷ ನಾಯಕನಾಗಿ ನಾನು ಮಾತನಾಡಲು ಕಳೆದ ವಾರವೂ ನನಗೆ ಅವಕಾಶ ಕೊಡಲಿಲ್ಲ. ಈ ವಾರ ಅವಕಾಶ ಕೇಳಿದಾಗ, ಅವರು ನನಗೆ ಅವಕಾಶ ಕೊಡಲಿಲ್ಲ. ಮಾತನಾಡಲು ಬಿಡಲಿಲ್ಲ. ಬದಲಾಗಿ, ನನ್ನ ಬಗ್ಗೆ ಆಧಾರವಿಲ್ಲದ ಹೇಳಿಕೆ ನೀಡಿದರು. ಅನಗತ್ಯವಾಗಿ ಸದನ ಮುಂದೂಡಿದರು” ಎಂದು ಆರೋಪಿಸಿದ್ದಾರೆ.

Advertisements

“ಸದನದಲ್ಲಿ ವಿಪಕ್ಷ ನಾಯಕನಿಗೆ ಮಾತನಾಡಲು ಹೆಚ್ಚು ಅವಕಾಶ ನೀಡಬೇಕು. ನಾನು ಕುಂಭಮೇಳ, ನಿರುದ್ಯೋಗ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಲು ಬಯಸಿದ್ದೆ. ಆದರೆ, ನನಗೆ ಮಾತನಾಡಲು ಬಿಡುತ್ತಿಲ್ಲ. ಪ್ರತಿ ಬಾರಿಯೂ ನಾನು ಮಾತನಾಡಲು ಆರಂಭಿಸಿದಾಗ, ನನ್ನನ್ನು ತಡೆಯಲಾಗುತ್ತಿದೆ. ಪ್ರಜಾಪ್ರಭುತ್ವಕ್ಕೆ ಅವಕಾಶವೇ ಇಲ್ಲದಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಹುಲ್ ಮಾತಿಗೆ ಪ್ರತಿಕ್ರಿಯಿಸಿರುವ ಸ್ಪೀಕರ್, “ಸದನದಲ್ಲಿ ಸದಸ್ಯರ ನಡವಳಿಕೆಯು ಮಾನದಂಡಗಳಿಗೆ ಅನುಗುಣವಾಗಿ ಇಲ್ಲದ ಹಲವಾರು ನಿರ್ದರ್ಶನಗಳಿವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X