ಅಧಿವೇಶನ 2023 | ಸದನದಲ್ಲಿ ಬಿಟ್ಟಿ ಪ್ರಚಾರಕ್ಕೆ ಪ್ರಯತ್ನಿಸಬೇಡಿ; ನೂತನ ಶಾಸಕರಿಗೆ ಸಭಾಧ್ಯಕ್ಷರಿಂದ ತಾಕೀತು

Date:

Advertisements
  • ಜೆಡಿಎಸ್‌ ಶಾಸಕ ಶರಣಗೌಡ ಕಂದಕೂರು ನಡೆಗೆ ಸಭಾಧ್ಯಕ್ಷರು ಬೇಸರ
  • ಸಭಾಧ್ಯಕ್ಷರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಬಸನಗೌಡ ಪಾಟೀಲ್‌ ಯತ್ನಾಳ್‌

ಪೋಸ್ಟರ್‌ಗಳನ್ನು ಸದನದ ಒಳಗಡೆ ತಗೆದುಕೊಂಡು ಬರುವುದು ನೂತನ ಶಾಸಕರಿಗೆ ಗೌರವ ತರುವುದಿಲ್ಲ. ಇದರಿಂದ ನಿಮಗೆ ಪ್ರಚಾರ ಸಿಕ್ಕರೂ ಒಂದು ಮತ ಕೂಡ ಜಾಸ್ತಿಯಾಗುವುದಿಲ್ಲ. ಜೊತೆಗೆ ನಿಮ್ಮ ಕ್ಷೇತ್ರದಲ್ಲಿ ನಿಮ್ಮ ಮೇಲಿನ ಗೌರವ ಕಡಿಮೆಯಾಗುತ್ತದೆ ಹೊರತು ಹೆಚ್ಚಾಗುವುದಿಲ್ಲ. ಇದನ್ನು ನೂತನ ಶಾಸಕರು ಅರಿಯಬೇಕು ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಗುರುಮಿಠಕಲ್‌ನ ಜೆಡಿಎಸ್‌ ಶಾಸಕ ಶರಣಗೌಡ ಕಂದಕೂರು ಅವರನ್ನು ಉದ್ದೇಶಿಸಿ ಹೇಳಿದರು.

ಆರನೇ ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷರು ಮಾಜಿ ಶಾಸಕ ಸಿ ಎಂ ನಿಂಬಣ್ಣವರ್‌ ನಿಧನಕ್ಕೆ ಸಂತಾಪ ನಿಲುವಳಿ ಸೂಚಿಸಿದರು. ಈ ನಡುವೆ ಎದ್ದು ನಿಂತ ಶಾಸಕ ಶರಣಗೌಡ ಕಂದಕೂರು, ತಮ್ಮ ಕ್ಷೇತ್ರದ ಸಮಸ್ಯೆ ಕುರಿತು ಭಿತ್ತಿಪತ್ರ ಪ್ರದರ್ಶಿಸಿದರು. ಕಂದಕೂರು ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಭಾಧ್ಯಕ್ಷರು ಸದನದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂದು ಕಂದಕೂರು ಅವರಿಗೆ ಕಿವಿಮಾತು ಹೇಳಿದರು.

“ಸಂತಾಪ ಸೂಚನೆ ಇದೆ. ಸದನದ ನಿಯಮಗಳಿಗೆ ಗೌರವಕೊಡಿ. ನೂತನ ಶಾಸಕರು ಸದನದ ನಿಯಮಗಳನ್ನು ಅರ್ಥಮಾಡಿಕೊಳ್ಳಲಿ. ನಿಮ್ಮ ವಿಚಾರಗಳನ್ನು ಸದನದ ಗಮನಕ್ಕೆ ತರಲು ಸಮಯ ಇದೆ. ಅದನ್ನು ಇಟ್ಟು ಸದನದಲ್ಲಿ ಬಿಟ್ಟಿ ಪ್ರಚಾರಕ್ಕೆ ಅವಕಾಶವಿಲ್ಲ. ಓಟಿನ ಲೆಕ್ಕಾಚಾರ ಇಟ್ಟುಕೊಂಡು ಸದನಲ್ಲಿ ಪ್ರಚಾರ ತಗೆದುಕೊಳ್ಳಲು ಹೋಗಬೇಡಿ. ನಾನು ಕೂಡ ಶಾಸಕನಾಗಿ ಬಂದವನು. ಇನ್ಮುಂದೆ ಬಿಟ್ಟಿ ಪ್ರಚಾರಕ್ಕೆ ಪ್ರಯತ್ನಿಸಬೇಡಿ” ಎಂದು ಕಟುವಾಗಿಯೇ ಸಭಾಧ್ಯಕ್ಷರು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಪೀಕರ್ ಖಾದರ್, ಕನ್ನಡ ಮತ್ತು ಬೆತ್ತಲಾದ ಬಿಜೆಪಿ

“ನಿಮ್ಮ ವಿಚಾರ ಏನೇ ಇದ್ದರೂ ರೈಟಿಂಗ್‌ನಲ್ಲಿ ಕೊಡಿ. ಶೂನ್ಯವೇಳೆಯಲ್ಲಿ ಚರ್ಚೆ ಮಾಡೋಣ. ಚರ್ಚೆಗೆ ಅವಕಾಶ ಕಲ್ಪಿಸಿಕೊಡುವೆ. ನಿಮ್ಮ ಕ್ಷೇತ್ರದ ಜನರ ಸಮಸ್ಯೆಗಳನ್ನು ಸದನದ ಮುಂದೆ ಪ್ರಸ್ತಾಪಿಸಲು ಮಾರ್ಗಗಳಿವೆ. ಆ ಬಗ್ಗೆ ಯೋಚಿಸಿ. ಕ್ಷೇತ್ರದ ಜನ ನಿಮ್ಮನ್ನು ನೋಡುತ್ತಿರುತ್ತಾರೆ. ನಿಮಗೆ ಜವಾಬ್ದಾರಿ ಇದೆ. ಆ ಪ್ರಕಾರ ನಡೆದುಕೊಳ್ಳಿ” ಎಂದು ಕಿವಿಮಾತು ಹೇಳಿದರು.

ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್‌ ಯತ್ನಾಳ್‌ ಮಧ್ಯ ಪ್ರವೇಶಿಸಿ, “ಸಭಾಧ್ಯಕ್ಷರೇ, ಈ ನಡೆ ಸರಿಯಲ್ಲ. ನೀವು ನಮ್ಮ ಸ್ಥಾನದಲ್ಲಿ ಕೂತಿರುವಾಗ ಭಿತ್ತಿಪತ್ರ ಪ್ರದರ್ಶಿಸಿಲ್ಲವೇ?” ಎಂದು ಆಕ್ಷೇಪ ವ್ಯಕ್ತಪಡಿಸಿದರು.

“ನಾನು ನನ್ನ ಕ್ಷೇತ್ರದ ಸಮಸ್ಯೆ ಬಗ್ಗೆ ಹೇಳಬೇಕು ಎಂಬುದು ಅಷ್ಟೇ ನನ್ನ ಉದ್ದೇಶ. ನೀವು ಹೀಗೆ ಪ್ರಚಾರ ಅಂತ ಕರೆದರೆ ಹೇಗೆ? ನನಗೆ ಪ್ರಚಾರದ ಹುಚ್ಚಿಲ್ಲ” ಎಂದು ಶರಣಗೌಡ ಕಂದಕೂರು ಸದನಕ್ಕೆ ತಿಳಿಸಿ ತಮ್ಮ ಸ್ಥಾನದಲ್ಲಿ ಕುಳಿತುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X