ವಿಧಾನಸಭೆ ಡಿಜಿಟಲೈಜೇ಼ಷನ್ ಮಾಡುವ ಬಗ್ಗೆ ಶೀಘ್ರ ಕ್ರಮ: ಸ್ಪೀಕರ್ ಖಾದರ್

Date:

  • ನೂತನ ಶಾಸಕರಿಗೆ ಮೂರು ದಿನ ತರಬೇತಿ ಶಿಬಿರ ಆಯೋಜನೆ
  • ಹಿರಿಯ ಮಾಜಿ ಸಚಿವರುಗಳಿಂದ ಕಿರಿಯ ಶಾಸಕರಿಗೆ ತರಬೇತಿ

ಜುಲೈ 3 ರಿಂದ ಆರಂಭವಾಗಲಿರುವ ನೂತನ ಸರ್ಕಾರದ ಬಜೆಟ್ ಅಧಿವೇಶನದ ಜೊತೆಜೊತೆಯಲ್ಲೇ ವಿಧಾನಸಭೆಯನ್ನ ಡಿಜಿಟಲೈಜೇಷನ್ ಮಾಡುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ತಿಳಿಸಿದರು.

- Advertisement -

ವಿಧಾನಸೌಧದಲ್ಲಿಂದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಅವರು ಬಜೆಟ್ ಅಧಿವೇಶನಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಧಿವೇಶನದ ಆರಂಭವಾಗುವ ಜುಲೈ 3ರ ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜುಲೈ 3 ರಿಂದ 14 ನೇ ತಾರೀಖಿನ ವರೆಗೆ ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್ ಹೇಳಿದರು.

ವಿಧಾನಸಭೆಯನ್ನ ಡಿಜಿಟಲೈಜೇಷನ್ ಮಾಡುವ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುತ್ತೇವೆ. ದೇಶದಲ್ಲೇ ವಿಧಾನಭೆಯನ್ನ ಮಾದರಿಯ ಸಭೆಯನ್ನಾಗಿ ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ಖಾದರ್ ತಿಳಿಸಿದರು.

ಈ ಬಾರಿ 70 ಶಾಸಕರು ಪ್ರಥಮ ಬಾರಿಗೆ ಆಯ್ಕೆಯಾಗಿದ್ದಾರೆ. ಅಧಿವೇಶನದಲ್ಲಿ ನೂತನ ಶಾಸಕರು ಪಾಲ್ಗೊಳ್ಳುವುದು ತುಂಬಾ ಅವಶ್ಯ. ಈ ಹಿನ್ನೆಲೆಯಲ್ಲಿ ನೂತನ ಶಾಸಕರಿಗೆ ಮೂರು ದಿನ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗುತ್ತಿದ್ದು, ಅವರಿಗೆ ಹೆಲ್ತ್ ಫಿಟ್ ನೆಸ್ ಮತ್ತು ಟ್ರೈನಿಂಗ್ ಕ್ಯಾಂಪ್ ನಡೆಸಲಾಗುವುದು. ಇದರ ಜೊತೆಗೆ ನೆಲಮಂಗಲದ ಧರ್ಮಸ್ಥಳ ಕೇಂದ್ರದಲ್ಲಿ ನ್ಯಾಚರೋಪತಿ ಟ್ರಿಟ್ಮೆಂಟ್ ಕೂಡ ಇರಲಿದೆ. 26ನೇ ತಾರೀಖಿನಿಂದ ಮೂರು ದಿನಗಳ ಕಾಲ ಈ ತರಬೇತಿ ನಡೆಯಲಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ನಾಳೆ ರಾಷ್ಟ್ರಪತಿ, ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡುವೆ: ಸಿಎಂ ಸಿದ್ದರಾಮಯ್ಯ

ಇನ್ನು ತರಬೇತಿ ಅವಧಿಯಲ್ಲಿ ಪ್ರತಿದಿನಕ್ಕೆ ಒಬ್ಬರಂತೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಕುಮಾರಸ್ಚಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಒಳಗೊಂಡಂತೆ ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ಆಯೋಜನೆ ಮಾಡಲಾಗಿದೆ ಎಂದು ಸ್ಪೀಕರ್ ಹೇಳಿದರು.

ಈ ವೇಳೆ ನೂತನ ಶಾಸಕರಿಗೆ ಸಭಾ ನಿಯಮ, ನಡಾವಳಿ ಹಾಗೂ ಕಲಾಪ ನಡೆಯುವ ರೀತಿ ಜೊತೆಗೆ ಬಜೆಟ್ ಮಂಡನೆ ಹೇಗೆ? ಶಾಸನ ರಚನೆ, ವಿಧಾನಸಭೆ ಮತ್ತು ಪರಿಷತ್ ಮಹತ್ವ ಏನು? ಶಾಸಕ ಹಕ್ಕುಗಳು ಏನು ಎಂಬೆಲ್ಲ ಮಾಹಿತಿಯನ್ನ ನೀಡಲಾಗುತ್ತದೆ ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...