ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಶೀಘ್ರ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾಸಂಸ್ಥೆ (ಎಫ್ ಕೆಸಿಸಿಐ) ಮತ್ತು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದರು.

“ಪ್ರವಾಸೋದ್ಯಮ ನೀತಿಯಿಂದ ಹೆಚ್ಚು ಬಂಡವಾಳ ಹೂಡಿಕೆದಾರರನ್ನು ಸೆಳೆಯಬಹುದು. ಕೈಗಾರಿಕೋದ್ಯಮಿಗಳು ಬಲಗೊಂಡಷ್ಟು ಸರ್ಕಾರವು ಬಲಗೊಳ್ಳುತ್ತದೆ. ಏಕೆಂದರೆ ನಿಮ್ಮಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಆಂಧ್ರ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣದಿಂದ ಬಂದಿರುವ ಪ್ರತಿನಿಧಿಗಳು ನಿಮ್ಮ ಅನುಭವಗಳನ್ನು ಇಲ್ಲಿ ಹಂಚಿಕೊಳ್ಳಬೇಕು. ಕರ್ನಾಟಕ ರಾಜ್ಯ 300 ಕಿ.ಮೀ ಹೆಚ್ಚು ಕರಾವಳಿ ಪ್ರದೇಶ ಹೊಂದಿದೆ. ಈ ಮೂಲಕ ಸಾಗರೋತ್ತರ ಉದ್ದಿಮೆಯ ಅಭಿವೃದ್ಧಿಗೆ ನಿಮ್ಮ ಸಲಹೆ ನೀಡಿ”ಎಂದರು.

Advertisements

“ನೀರಾವರಿ ಹಾಗೂ ಬೆಂಗಳೂರು ಅಭಿವೃದ್ದಿ ಸಚಿವನಾಗಿ ನನ್ನ ಕಾರ್ಯಕ್ಷೇತ್ರಗಳ ಅಭಿವೃದ್ದಿಗೆ ಸಲಹೆ ಸೂಚನೆಗಳನ್ನು ನಾನು ನಿರೀಕ್ಷೆ ಮಾಡುತ್ತೇನೆ. ಬೆಂಗಳೂರು ಐಟಿ, ಬಿಟಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸದೃಢವಾಗಿದೆ. ಇದರ ಜೊತೆಗೆ ಬೆಂಗಳೂರು ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರನ್ನು ಸೆಳೆಯಲು ಕಾರ್ಯಸೂಚಿ ಸಿದ್ಧಪಡಿಸಬೇಕು” ಎಂದು ಹೇಳಿದರು.

ಸ್ಕೈ ಡೆಕ್ ನಿರ್ಮಾಣಕ್ಕೆ ಶೀರ್ಘದಲ್ಲೇ ಟೆಂಡರ್

“ಈ ಹಿಂದೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ಪ್ರವಾಸಿಗರನ್ನು ಸೆಳೆಯುತ್ತಿದ್ದವು. ಈಗ ಹೊಸ ಪೀಳಿಗೆಗೆ ಹೊಸತನ್ನು ನೀಡಬೇಕಿದೆ. ಈ ಕಾರಣಕ್ಕೆ ಸ್ಕೈ ಡೆಕ್ ನಿರ್ಮಾಣಕ್ಕೆ ಯೋಜನೆ ಹಾಕಿಕೊಂಡಿದ್ದೇವೆ. ಪ್ರಸಿದ್ಧವಾದ ಅನೇಕ ನಗರಗಳಲ್ಲಿ ಎತ್ತರವಾದ ಗೋಪುರಗಳು ಆಕರ್ಷಣೀಯ ಕೇಂದ್ರಗಳಿವೆ. ಅದರಂತೆ ಬೆಂಗಳೂರಿನಲ್ಲೂ ಇರಲಿ ಎಂದು ಈ ಯೋಜನೆ ಮಾಡಲಾಗಿದೆ. ಮುಂದಿನ 8- 10 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು” ಎಂದರು.

“ಬೃಂದಾವನ ಉದ್ಯಾನವನ್ನು ಡಿಸ್ನಿ ಲ್ಯಾಂಡ್ ಮಾದರಿಯಲ್ಲಿ ಅಭಿವೃದ್ದಿ ಪಡಿಸಲಾಗುವುದು. ಇದಕ್ಕೆ ಕಳೆದ ಬಜೆಟ್ ಅಲ್ಲೂ ಅನುದಾನ ನೀಡಲು ತೀರ್ಮಾನ ಮಾಡಲಾಗಿದೆ. ಬೆಂಗಳೂರು ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯುತ್ತದೆ ಎಂದು ಊರು ಕಟ್ಟಿದ ಕೆಂಪೇಗೌಡರಿಗೆ ಗೊತ್ತಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬ್ರಾಂಡ್ ಬೆಂಗಳೂರು ಯೋಜನೆಯ ಅಡಿ ಕಸ, ನೀರು, ರಸ್ತೆ, ಮೂಲ ಸೌಕರ್ಯ, ಟ್ರಾಫಿಕ್ ಸೇರಿದಂತೆ ಅನೇಕ ಸಮಸ್ಯೆಗಳ ನಿವಾರಣೆಗೆ ಸಾಕಷ್ಟು ಯೋಜನೆ ಹಾಕಿಕೊಂಡಿದ್ದೇವೆ” ಎಂದು ಹೇಳಿದರು.

ಜಿಎಸ್‌ಟಿ ಪ್ರವಾಸೋದ್ಯಮವನ್ನು ಕೊಲ್ಲುತ್ತಿದೆ

“ಶೇ.18 ಕ್ಕೂ ಹೆಚ್ಚಿನ ಜಿಎಸ್ ಟಿ ಪ್ರವಾಸೋದ್ಯಮವನ್ನು ಕೊಲ್ಲುತ್ತಿದೆ. ದಕ್ಷಿಣ ಭಾರತೀಯರಾದ ನಾವು ಇದರ ಬಗ್ಗೆ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಬೇಕು. ಬ್ಯಾಂಕ್ ಬಡ್ಡಿ ದರ, ಇತರೇ ತೆರಿಗೆಗಳು ಸೇರಿ ಅರ್ಧಕ್ಕೂ ಹೆಚ್ಚು ಹಣ ಕಳೆದುಕೊಂಡರೆ ಹೂಡಿಕೆದಾರರು ಪ್ರವಾಸೋದ್ಯಮದ ಕಡೆ ಗಮನ ಹರಿಸುವುದಿಲ್ಲ. ಆದ ಕಾರಣ ಹೂಡಿಕದಾರ ಸ್ನೇಹಿ ವಾತಾವರಣ ನಿರ್ಮಾಣ ಮಾಡಬೇಕು” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X