ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಶೀಘ್ರ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿ ಕೆ ಶಿವಕುಮಾರ್

Date:

ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

- Advertisement -

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾಸಂಸ್ಥೆ (ಎಫ್ ಕೆಸಿಸಿಐ) ಮತ್ತು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

“ಪ್ರವಾಸೋದ್ಯಮ ನೀತಿಯಿಂದ ಹೆಚ್ಚು ಬಂಡವಾಳ ಹೂಡಿಕೆದಾರರನ್ನು ಸೆಳೆಯಬಹುದು. ಕೈಗಾರಿಕೋದ್ಯಮಿಗಳು ಬಲಗೊಂಡಷ್ಟು ಸರ್ಕಾರವು ಬಲಗೊಳ್ಳುತ್ತದೆ. ಏಕೆಂದರೆ ನಿಮ್ಮಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಆಂಧ್ರ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣದಿಂದ ಬಂದಿರುವ ಪ್ರತಿನಿಧಿಗಳು ನಿಮ್ಮ ಅನುಭವಗಳನ್ನು ಇಲ್ಲಿ ಹಂಚಿಕೊಳ್ಳಬೇಕು. ಕರ್ನಾಟಕ ರಾಜ್ಯ 300 ಕಿ.ಮೀ ಹೆಚ್ಚು ಕರಾವಳಿ ಪ್ರದೇಶ ಹೊಂದಿದೆ. ಈ ಮೂಲಕ ಸಾಗರೋತ್ತರ ಉದ್ದಿಮೆಯ ಅಭಿವೃದ್ಧಿಗೆ ನಿಮ್ಮ ಸಲಹೆ ನೀಡಿ”ಎಂದರು.

“ನೀರಾವರಿ ಹಾಗೂ ಬೆಂಗಳೂರು ಅಭಿವೃದ್ದಿ ಸಚಿವನಾಗಿ ನನ್ನ ಕಾರ್ಯಕ್ಷೇತ್ರಗಳ ಅಭಿವೃದ್ದಿಗೆ ಸಲಹೆ ಸೂಚನೆಗಳನ್ನು ನಾನು ನಿರೀಕ್ಷೆ ಮಾಡುತ್ತೇನೆ. ಬೆಂಗಳೂರು ಐಟಿ, ಬಿಟಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸದೃಢವಾಗಿದೆ. ಇದರ ಜೊತೆಗೆ ಬೆಂಗಳೂರು ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರನ್ನು ಸೆಳೆಯಲು ಕಾರ್ಯಸೂಚಿ ಸಿದ್ಧಪಡಿಸಬೇಕು” ಎಂದು ಹೇಳಿದರು.

ಸ್ಕೈ ಡೆಕ್ ನಿರ್ಮಾಣಕ್ಕೆ ಶೀರ್ಘದಲ್ಲೇ ಟೆಂಡರ್

“ಈ ಹಿಂದೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ಪ್ರವಾಸಿಗರನ್ನು ಸೆಳೆಯುತ್ತಿದ್ದವು. ಈಗ ಹೊಸ ಪೀಳಿಗೆಗೆ ಹೊಸತನ್ನು ನೀಡಬೇಕಿದೆ. ಈ ಕಾರಣಕ್ಕೆ ಸ್ಕೈ ಡೆಕ್ ನಿರ್ಮಾಣಕ್ಕೆ ಯೋಜನೆ ಹಾಕಿಕೊಂಡಿದ್ದೇವೆ. ಪ್ರಸಿದ್ಧವಾದ ಅನೇಕ ನಗರಗಳಲ್ಲಿ ಎತ್ತರವಾದ ಗೋಪುರಗಳು ಆಕರ್ಷಣೀಯ ಕೇಂದ್ರಗಳಿವೆ. ಅದರಂತೆ ಬೆಂಗಳೂರಿನಲ್ಲೂ ಇರಲಿ ಎಂದು ಈ ಯೋಜನೆ ಮಾಡಲಾಗಿದೆ. ಮುಂದಿನ 8- 10 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು” ಎಂದರು.

“ಬೃಂದಾವನ ಉದ್ಯಾನವನ್ನು ಡಿಸ್ನಿ ಲ್ಯಾಂಡ್ ಮಾದರಿಯಲ್ಲಿ ಅಭಿವೃದ್ದಿ ಪಡಿಸಲಾಗುವುದು. ಇದಕ್ಕೆ ಕಳೆದ ಬಜೆಟ್ ಅಲ್ಲೂ ಅನುದಾನ ನೀಡಲು ತೀರ್ಮಾನ ಮಾಡಲಾಗಿದೆ. ಬೆಂಗಳೂರು ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯುತ್ತದೆ ಎಂದು ಊರು ಕಟ್ಟಿದ ಕೆಂಪೇಗೌಡರಿಗೆ ಗೊತ್ತಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬ್ರಾಂಡ್ ಬೆಂಗಳೂರು ಯೋಜನೆಯ ಅಡಿ ಕಸ, ನೀರು, ರಸ್ತೆ, ಮೂಲ ಸೌಕರ್ಯ, ಟ್ರಾಫಿಕ್ ಸೇರಿದಂತೆ ಅನೇಕ ಸಮಸ್ಯೆಗಳ ನಿವಾರಣೆಗೆ ಸಾಕಷ್ಟು ಯೋಜನೆ ಹಾಕಿಕೊಂಡಿದ್ದೇವೆ” ಎಂದು ಹೇಳಿದರು.

ಜಿಎಸ್‌ಟಿ ಪ್ರವಾಸೋದ್ಯಮವನ್ನು ಕೊಲ್ಲುತ್ತಿದೆ

“ಶೇ.18 ಕ್ಕೂ ಹೆಚ್ಚಿನ ಜಿಎಸ್ ಟಿ ಪ್ರವಾಸೋದ್ಯಮವನ್ನು ಕೊಲ್ಲುತ್ತಿದೆ. ದಕ್ಷಿಣ ಭಾರತೀಯರಾದ ನಾವು ಇದರ ಬಗ್ಗೆ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಬೇಕು. ಬ್ಯಾಂಕ್ ಬಡ್ಡಿ ದರ, ಇತರೇ ತೆರಿಗೆಗಳು ಸೇರಿ ಅರ್ಧಕ್ಕೂ ಹೆಚ್ಚು ಹಣ ಕಳೆದುಕೊಂಡರೆ ಹೂಡಿಕೆದಾರರು ಪ್ರವಾಸೋದ್ಯಮದ ಕಡೆ ಗಮನ ಹರಿಸುವುದಿಲ್ಲ. ಆದ ಕಾರಣ ಹೂಡಿಕದಾರ ಸ್ನೇಹಿ ವಾತಾವರಣ ನಿರ್ಮಾಣ ಮಾಡಬೇಕು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...

‘ನಾನೇ ಬುರುಡೆ ಒಡೆದಿದ್ದು’ ಎಂದಾತನಿಗೆ ಜಾಮೀನು; ಪುರಾವೆ ಇಲ್ಲದಿದ್ದರೂ ವರ್ಷಗಳಿಂದ ಜೈಲಿನಲ್ಲಿದ್ದಾರೆ ಹೋರಾಟಗಾರರು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ...