ನಿಮ್ಮ ಆದರ್ಶ ಅನುಸರಿಸಿ, ಭರವಸೆಗೆ ಬದ್ಧರಾಗಿರಿ: ಮೋದಿ-ಅಮಿತ್ ಶಾಗೆ ಸೋನಮ್ ವಾಂಗ್ಚುಕ್ ಮನವಿ

Date:

Advertisements

ಲಡಾಖ್‌ಗೆ ರಾಜ್ಯತ್ವ ನೀಡಲು ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಸುಮಾರು 20 ದಿನಗಳಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸೋನಮ್ ವಾಂಗ್ಚುಕ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ “ನಿಮ್ಮ ಆದರ್ಶ ಅನುಸರಿಸಿ, ಭರವಸೆಗೆ ಬದ್ಧರಾಗಿರಿ” ಎಂದು ಮನವಿ ಮಾಡಿದ್ದಾರೆ.

“ನೀವು ಭಗವಂತ ರಾಮ ಮತ್ತು ಹಿಂದೂ ವೈಷ್ಣವರ ಆದರ್ಶವನ್ನು ಅನುಸರಿಸಿ. ನೀವು ಲಡಾಖ್‌ಗೆ ಈ ಹಿಂದೆ ನೀಡಿದ ಭರವಸೆಗೆ ಬದ್ಧರಾಗಿರಿ” ಎಂದು ಸೋಮವಾರ ವಿಡಿಯೋ ಮೂಲಕ ಸೋನಮ್ ವಾಂಗ್ಚುಕ್ ಪ್ರಧಾನಿ ಮೋದಿ ಮತ್ತು ಅಮಿತ್ ಶಾಗೆ ಹೇಳಿದರು. ಈ ಬಗ್ಗೆ ಎಕ್ಸ್‌ನಲ್ಲಿ ವಾಂಗ್ಚುಕ್ ವಿಡಿಯೋವನ್ನು ಮಾಡಿದ್ದಾರೆ.

“ಲಡಾಖ್ ಪ್ರತಿಭಟನೆಯಲ್ಲಿ ಇಂದು ನನ್ನೊಂದಿಗೆ ಸುಮಾರು 2500 ಜನರು ಸೇರಿದ್ದರು. ಇಲ್ಲಿನ ಒಟ್ಟು ಜನಸಂಖ್ಯೆ 3 ಲಕ್ಷವಾದರೂ ಕೂಡಾ ಈ 20 ದಿನದಲ್ಲಿ ಲೇಹ್ ಮತ್ತು ಕಾರ್ಗಿಲ್‌ನಲ್ಲಿ 60,000 ಜನರು ಪ್ರತಿಭಟನೆ ನಡೆಸುತ್ತಿದ್ದಾರೆ,” ಎಂದು ಹೇಳಿರುವ ವಾಂಗ್ಚುಕ್ ಎರಡು ಸಂದೇಶಗಳನ್ನು ನೀಡಿದ್ದಾರೆ.

Advertisements

ಇದನ್ನು ಓದಿದ್ದೀರಾ?  ನಮಗೆ ಪ್ರಜಾಪ್ರಭುತ್ವ ಬೇಕು: ಲಡಾಖ್‌ಗೆ ರಾಜ್ಯತ್ವ ನೀಡಲು ಆಗ್ರಹಿಸಿ ಹೆಚ್ಚಿದ ಪ್ರತಿಭಟನೆ

“ಒಂದು, ಪ್ರಧಾನಿ ಮೋದಿ ಅವರಿಗೆ ಮತ್ತೊಂದು ಗೃಹ ಸಚಿವ ಅಮಿತ್ ಶಾ ಅವರಿಗೆ. ಅಮಿತ್ ಶಾ ಅವರು ಒಂದು ಸಂದರ್ಶನದಲ್ಲಿ ತಾನು ಜೈನನಲ್ಲ ಹಿಂದೂ ವೈಷ್ಣವ ಎಂದು ಹೇಳಿಕೊಂಡಿರುವುದನ್ನು ಕೇಳಿದ್ದೇನೆ. ವೈಷ್ಣವರಿಗೆ ಹಲವಾರು ವ್ಯಾಖ್ಯಾನಗಳಿವೆ. ಆದರೆ ನಾನು ಇಷ್ಟಪಡುವುದು ‘ವೈಷ್ಣವರಾದವರೂ ಇತರರ ನೋವು ತಿಳಿದಿರುತ್ತಾರೆ. ಇತರರಿಗೆ ಒಳ್ಳೆಯದ್ದನ್ನು ಮಾಡುತ್ತಾರೆ’ ಎಂಬ ವ್ಯಾಖ್ಯಾನವನ್ನು” ಎಂದು ಅಮಿತ್ ಶಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ರಧಾನಿ ಮೋದಿ ಅವರಿಗೆ ನನ್ನ ಇನ್ನೊಂದು ಸಂದೇಶ. ಮೋದಿ ಅವರು ರಾಮ ಭಕ್ತರು. ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದ್ದಾರೆ. ಆದರೆ ಭಗವಂತ ರಾಮನ ಮೌಲ್ಯಗಳೇನು? ರಾಮಚರಿತಮಾನಸದಲ್ಲಿ ರಘುಕುಲದವರು ಪ್ರಾಣ ಹೋದರೂ ತಮ್ಮ ವಚನವನ್ನು (ಮಾತನ್ನು) ತಪ್ಪಲ್ಲ ಎಂದು ಹೇಳಲಾಗುತ್ತದೆ. ತನ್ನ ಮಾತು ತಪ್ಪಬಾರದು ಎಂಬ ಕಾರಣಕ್ಕೆ ಭಗವಂತ ರಾಮ 14 ವರ್ಷಗಳ ಕಾಲ ವನವಾಸಕ್ಕೆ ಹೋದರು. ರಾಮ ಭಕ್ತರಾದ ಮೋದಿಯವರು ಕೂಡ ಈ ಆದೇಶವನ್ನು ಪಾಲಿಸಬೇಕು. ತಾನು ಈ ಹಿಂದೆ ಚುನಾವಣೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸಬೇಕು” ಎಂದು ಮನವಿ ಮಾಡಿದರು.

“ಚುನಾವಣೆ ವೇಳೆ ನೀಡಿದ ಭರವಸೆಯನ್ನು ಈಡೇರಿಸಿ ತಾನು ನಿಜವಾದ ರಾಮ ಭಕ್ತ ಎಂದು ಸಾಬೀತುಪಡಿಸಲು ನಾನು ಪ್ರಧಾನಿ ಮೋದಿಯಲ್ಲಿ ಮನವಿ ಮಾಡುತ್ತೇವೆ. ಇಲ್ಲವಾದರೆ ಯಾರೂ ಕೂಡಾ ಇಂತಹ ರಾಜಕಾರಣಿಗಳನ್ನು, ಅವರ ಭರವಸೆಯನ್ನು ನಂಬುವುದಿಲ್ಲ. ತಮ್ಮ ಆದರ್ಶವನ್ನು ಮರೆಯದಂತೆ ನಾನು ಅಮಿತ್ ಶಾ ಮತ್ತು ಮೋದಿ ಅವರಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದರು.

ಲಡಾಖ್‌ಗೆ ರಾಜ್ಯತ್ವ ನೀಡಲು, ಸಂವಿಧಾನದ ಆರನೇ ಪರಿಚ್ಛೇದದಡಿ ಸೇರಿಸಲು ಆಗ್ರಹಿಸಿ ಪ್ರತಿಭಟನೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಕೇಂದ್ರದೊಂದಿಗಿನ ಹಲವಾರು ಸುತ್ತಿನ ಮಾತುಕತೆ ವಿಫಲವಾಗಿದ್ದು, ಈಗ ಪ್ರತಿಭಟನೆಯ ಕಾವು ಅಧಿಕವಾಗುತ್ತಿದೆ. 2019ರ ಲೋಕಸಭೆ ಚುನಾವಣೆ ಮತ್ತು 2020 ರ ಸ್ಥಳೀಯ ಹಿಲ್ ಕೌನ್ಸಿಲ್ ಚುನಾವಣೆಯಲ್ಲಿ, ಕೇಂದ್ರಾಡಳಿತ ಪ್ರದೇಶಕ್ಕೆ 6ನೇ ಶೆಡ್ಯೂಲ್ ಅಡಿಯಲ್ಲಿ ರಕ್ಷಣೆಯ ಬಗ್ಗೆ ಬಿಜೆಪಿ ಭರವಸೆ ನೀಡಿತು. 2019ರಲ್ಲಿ ಲಡಾಖ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸಿತು. ಆದರೆ ಈವರೆಗೂ ಭರವಸೆಯನ್ನು ಈಡೇರಿಸಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X