ರಾಜ್ಯ ಬಜೆಟ್‌ -2025 | ಒಕ್ಕಲುತನ ವಲಯಕ್ಕೆ ಸಿಎಂ ಕೊಟ್ಟಿದ್ದೇನು?

Date:

Advertisements

ಬಜೆಟ್‌ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ 16ನೇ ರಾಜ್ಯ ಬಜೆಟ್ ಮಂಡಿಸಿದ್ದು, ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿದ್ದಾರೆ.

ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?

  • ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಪ್ರಸಕ್ತ ಸಾಲಿನಲ್ಲಿ, ಈ ಯೋಜನೆಯಡಿ 10 ಹವಾಮಾನ ವಲಯಗಳಲ್ಲಿ ಕೃಷಿ ಇಲಾಖೆಯ ಅಧೀನದ ಕ್ಷೇತ್ರಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳನ್ನು ಅಭಿವೃದ್ಧಿಪಡಿಸಿ, ಈ ಪದ್ಧತಿಯನ್ನು ಅಳವಡಿಸಿಕೊಳ್ಳಲು ರೈತರಿಗೆ ಪ್ರಚುರಪಡಿಸಲಾಗುವುದು.
  • 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಕಲ್ಪಿಸಲಾಗುವುದು.
  • ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನವನ್ನು ಒದಗಿಸಲಾಗುವುದು.
  • ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ, ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದರ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ಉದ್ದೇಶಿಸಿದೆ. ಈ ಮೂಲಕ ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ ರೂ. ಒದಗಿಸಲಾಗುವುದು.
  • ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್‌ಕ್ಯೂಬೇಷನ್‌ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.
  • ಕೃಷಿ ಭಾಗ್ಯ ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡಗಳನ್ನು ನಿರ್ಮಿಸಿ ಮಳೆಯಾಶ್ರಿತ ಕೃಷಿ ಪ್ರದೇಶದ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿ ಒದಗಿಸುವುದರೊಂದಿಗೆ ರೈತರ ಬೆಳೆಗಳ ಉತ್ಪಾದಕತೆ ಹಾಗೂ ಆದಾಯವನ್ನು ಹೆಚ್ಚಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 12,000
    ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು.
  • ಜಾಗತಿಕ ಮಟ್ಟದಲ್ಲಿ ಡಿಜಿಟಲ್‌, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್‌ ಕೃಷಿ ಸೇವೆಗಳ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಕೇಂದ್ರವು ರೈತರಿಗೆ ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರವಾದ ತೀರ್ಮಾನವನ್ನು ಕೈಗೊಂಡು ಬೆಳೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.
  • ರಾಜ್ಯದಲ್ಲಿ ಚಾಲ್ತಿಯಿರುವ ಹವಾಮಾನ ವಲಯಗಳ ವರ್ಗೀಕರಣ ಬಹಳ ವರ್ಷಗಳ ಹಿಂದೆ ಗುರುತಿಸಲಾಗಿರುವುದರಿಂದ ಹಾಗೂ ಇತ್ತೀಚಿನ ವರ್ಷಗಳ ನೈಸರ್ಗಿಕ ವೈಪರೀತ್ಯಗಳ ಬದಲಾವಣೆಯಿಂದ ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿಯನ್ನು ರಚಿಸಲಾಗುವುದು.
  • ಕರ್ನಾಟಕ ರಾಜ್ಯದ ಸಾಗುವಳಿ ಪ್ರದೇಶದ ಶೇ.64ರಷ್ಟು ಪ್ರದೇಶವು ಮಳೆಯಾಶ್ರಿತ ಪ್ರದೇಶವಾಗಿದ್ದು, ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರವಾಗಿಸಿ ಸುಸ್ಥಿರವನ್ನಾಗಿಸಲು ಹಾಗೂ ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼಯನ್ನು ಅನುಷ್ಠಾನಕ್ಕೆ ತರಲಾಗುವುದು.
  • ರೈತರಿಗೆ ಮಣ್ಣು ಪರೀಕ್ಷೆ ಹಾಗೂ ಅವರು ಬಳಸುವ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ, ಸಸ್ಯ ಸಂರಕ್ಷಣಾ ಔಷಧಿ, ಜೈವಿಕ ಗೊಬ್ಬರ ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಲು ಇಲಾಖೆಯಡಿ ಇರುವ 58 ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲವರ್ಧನೆಗೊಳಿಸಲಾಗುವುದು.
  • ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಿ, ರೈತರ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಾವಯವ ಪ್ರಮಾಣೀಕರಣ ವ್ಯವಸ್ಥೆ ಕಲ್ಪಿಸಲಾಗುವುದು.
  • ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ನು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುವುದು.
  • ಜೈವಿಕ ಕೃಷಿ ಪರಿಕರ ಸ್ಟಾರ್ಟ್‌-ಅಪ್‌ಗಳು (Agri Start-up) ಉತ್ಪಾದಿಸುವ ಜೈವಿಕ ಪರಿಕರಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ದರದಲ್ಲಿ ಮಾರಾಟ ಮಾಡಲು ಉತ್ತೇಜಿಸಲಾಗುವುದು.
  • ವಿಶ್ವ ಬ್ಯಾಂಕ್‌ ನೆರವಿನ ರಿವಾರ್ಡ್‌ ಯೋಜನೆಯಡಿ ಈವರೆಗೆ ಒಟ್ಟಾರೆ 12.90 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಭೂ-ಸಂಪನ್ಮೂಲ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 11 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಭೂ-ಸಂಪನ್ಮೂಲ ಸಮೀಕ್ಷೆ ಆಧಾರದ ಮೇಲೆ ರೈತರು ಸೂಕ್ತವಾದ ಬೆಳೆಗಳನ್ನು ಬೆಳೆಯಲು, ಅಗತ್ಯವಿರುವ ರಾಸಾಯನಿಕ ಗೊಬ್ಬರ ಹಾಗೂ ಪೋಷಕಾಂಶಗಳನ್ನು ಬಳಸಿ ಬೆಳೆಗಳ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸಲಾಗುವುದು.
  • ಮಂಡ್ಯ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಈಗಾಗಲೇ ಅನುಮೋದನೆ ನೀಡಿದ್ದು, ಮೂಲಸೌಕರ್ಯ ಕಲ್ಪಿಸಲು 25 ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳನ್ನು ಆರಂಭಿಸಲಾಗುವುದು.
    43. ಬರ ಮತ್ತು ರೋಗ ನಿರೋಧಕ ಲಕ್ಷಣಗಳ ಸಂಶೋಧನೆ ಕೈಗೊಂಡು ಬೆಳೆಗಳ ಉತ್ತಮ ತಳಿ ಅಭಿವೃದ್ಧಿಪಡಿಸಲು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ (Phenotyping) ಸೌಲಭ್ಯ ಕಲ್ಪಿಸಲಾಗುವುದು.
  • ಸಾವಯವ ಉತ್ಪನ್ನಗಳು ಮತ್ತು ಸಿರಿಧಾನ್ಯಗಳ ಬೇಡಿಕೆ ಮತ್ತು ಪೂರೈಕೆಗಳ ಅಂತರವನ್ನು ಸರಿದೂಗಿಸಲು ಹಾಗೂ ರೈತರಿಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶದಿಂದ 20 ಕೋಟಿ ರೂ. ಮೊತ್ತದಲ್ಲಿ ʻಸಾವಯವ ಮತ್ತು ಸಿರಿಧಾನ್ಯಗಳ ಹಬ್‌ʼ ಅನ್ನು ಸ್ಥಾಪಿಸಲಾಗುವುದು.
  • ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು.
  • ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X