ನವೆಂಬರ್‌ನಲ್ಲಿ ರಾಜ್ಯದ ಜಾತಿಗಣತಿ ವರದಿ ನನ್ನ ಕೈ ಸೇರಲಿದೆ: ಸಿಎಂ ಸಿದ್ದರಾಮಯ್ಯ

Date:

Advertisements
  • ಕಾಂತರಾಜ ವರದಿ ಸಿದ್ದಪಡಿಸಿಕೊಡಿ ಎಂದು ಈಗಾಗಲೇ ಸೂಚಿಸಿದ್ದೇನೆ
  • ಜಾತಿಗಣತಿ ಸಮಾಜ ವಿಂಗಡಿಸುವುದಿಲ್ಲ, ಮೋದಿ ವಿರೋಧಕ್ಕೆ ಅರ್ಥವಿಲ್ಲ

ನವೆಂಬರ್‌ನಲ್ಲಿ ಕರ್ನಾಟಕದ ಜಾತಿಗಣತಿ ವರದಿ ನನ್ನ ಕೈ ಸೇರಬಹುದು. ಕಾಂತರಾಜ ವರದಿಯನ್ನು ಸಿದ್ದಪಡಿಸಿ ಕೊಡಿ ಎಂದು ಈಗಾಗಲೇ ಸೂಚಿಸಿದ್ದೇನೆ. ವರದಿ ಕೈ ಸೇರಿದ ಬಳಿಕ ಪರಿಶೀಲಿಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಾತಿಗಣತಿ ಸಮಾಜವನ್ನು ವಿಂಗಡಿಸುವುದಿಲ್ಲ. ಯಾವ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ ಎಂಬುದನ್ನು ತಿಳಿದುಕೊಳ್ಳಲು ಅಂಕಿ ಅಂಶಗಳು ಸರ್ಕಾರಕ್ಕೆ ಬೇಕು. ಹೀಗಾಗಿ ನಾನೇ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವಂತೆ ಸೂಚಿಸಿದ್ದೆ” ಎಂದರು.

“ಪ್ರಧಾನಿ ಮೋದಿ ಬಾಯಲ್ಲಿ ಮಾತ್ರ ‘ಸಬ್‌ ಕಾ ಸಾಥ್ ಸಬ್ ಕಾ ವಿಕಾಸ್’ ಅನ್ನುತ್ತಾರೆ. ಆದರೆ ಅವರ ನಡೆನುಡಿಗೆ ಬಹಳ ವ್ಯತ್ಯಾಸಗಳಿವೆ. ಹೀಗಾಗಿ ಜಾತಿ ಗಣತಿ ವಿರೋಧಿಸುತ್ತಾರೆ. ʼಸಬ್‌ ಕಾ ಸಾಥ್ ಸಬ್ ಕಾ ವಿಕಾಸ್’ ಎನ್ನುವವರು ಮುಸ್ಲಿಂ ಸಮುದಾಯಕ್ಕೆ ಟಿಕೆಟ್‌ ಕೊಡಲಿ ನೋಡೋಣ” ಎಂದು ಕುಟುಕಿದರು.

Advertisements

ಹಣದ ಕೊರತೆ ಇಲ್ಲ

“ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ಇಲ್ಲ. ಬರಗಾಲಕ್ಕೆ ನಾವು ಕೇಂದ್ರ ಸರ್ಕಾರದ ಬಳಿ 4,860 ಕೋಟಿ ರೂ ಅನುದಾನ ಕೇಳಿದ್ದೇವೆ. ಬೆಳೆ ನಾಶ ಆಗಿರುವುದು 40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಇದಕ್ಕೆ ಲೆಕ್ಕ ಹಾಕಿದರೆ 30 ಸಾವಿರಕ್ಕೂ ಹೆಚ್ಚು ಕೋಟಿ ಬೇಕಾಗುತ್ತದೆ. ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ 4,860 ಕೋಟಿ ಕೇಳಿದ್ದೇವೆ” ಎಂದು ತಿಳಿಸಿದರು.

“ಬರ ವೀಕ್ಷಣೆಗೆ ಕೇಂದ್ರ ಸರ್ಕಾರದ ತಂಡ ಬಂದಿದೆ. ಮೂರು ಟೀಮ್‌ ಮಾಡಿಕೊಂಡು ಬಂದಿದ್ದಾರೆ. ಸುಮಾರು ಹನ್ನೊಂದು ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ. ಅವರು ವರದಿ ಸಲ್ಲಿಸಿದ ಬಳಿಕ ಕೇಂದ್ರ ಸರ್ಕಾರ ಹಣ ಕೊಡುವ ಬಗ್ಗೆ ನಿರ್ಧರಿಸುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದಲ್ಲಿ ಸ್ವತಂತ್ರ ಮಾಧ್ಯಮದ ಪಾಲಿಗೆ ಇದು ಅತ್ಯಂತ ಕರಾಳ ಕಾಲ

ಮದ್ಯದಂಗಡಿ ಪ್ರಸ್ತಾವ ಇಲ್ಲ

ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಹೊಸ ಬಾರ್ ಲೈಸನ್ಸ್ ಕೊಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ಡಿ.ಕೆ ಶಿವಕುಮಾರ್ ಎಲ್ಲೂ ಕೂಡ ಹೊಸ ಲೈಸನ್ಸ್ ಕೊಡುತ್ತೇವೆಂದು ಹೇಳಿಲ್ಲ‌. ಸದ್ಯಕ್ಕೆ ಆ ವಿಚಾರದಲ್ಲಿ ಯಾವ ಚರ್ಚೆಗಳು ಬೇಡ. ಜನರ ಭಾವನೆಗಳನ್ನು ಕೇಳಬೇಕು, ಗೌರವಿಸಬೇಕು‌. ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಹೊಸ ಲೈಸನ್ಸ್‌ಗಳು ಯಾವುದು ಇಲ್ಲ” ಎಂದರು.

“ಮಹಿಷ ದಸರಾವನ್ನು ಸರ್ಕಾರ ಮಾಡಿಲ್ಲ. ನಾವು ಹಿಂದೆಯೂ ಮಾಡಿಲ್ಲ ಈಗಲೂ ಮಾಡುತ್ತಿಲ್ಲ. ಯಾರೋ ಹಿಂದಿನಿಂದ ಮಹಿಷ ದಸರಾ ಮೈಸೂರಿನಲ್ಲಿ ಮಾಡುತ್ತಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಏನು ಮಾಡಿಲ್ಲ. ಈಗ ಆ ವಿಚಾರದಲ್ಲಿ ಜಿಲ್ಲಾಡಳಿತ ತೀರ್ಮಾನ ಕೈಗೊಳ್ಳುತ್ತದೆ” ಎಂದರು.

ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ನಾನು ಈ ವಿಚಾರದಲ್ಲಿ ಯಾವ ಪ್ರತಿಕ್ರಿಯೆಯನ್ನು ನೀಡಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X