‌ಸದ್ಯದಲ್ಲೇ ರಾಜ್ಯ ಸರ್ಕಾರದಿಂದ `ಶುದ್ಧ ಇಂಧನ ನೀತಿ’ ಜಾರಿ: ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌

Date:

Advertisements

ಯುನೈಟೆಡ್ ಕಿಂಗ್ಡಮ್ ಕಾರ್ಯದರ್ಶಿ (ವೇಲ್ಸ್) ಡೇವಿಡ್ ಡೇವಿಸ್ ಅವರು ಸೋಮವಾರ ಇಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರನ್ನು ಭೇಟಿ ಮಾಡಿ, ರಾಜ್ಯದೊಂದಿಗೆ ಹೆಚ್ಚಿನ ಕೈಗಾರಿಕಾ ಸಹಭಾಗಿತ್ವ ಹೊಂದುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ನಡೆದ ವಿಚಾರ ವಿನಿಮಯದ ಸಂದರ್ಭದಲ್ಲಿ ಅವರು, “ಸೆಮಿಕಂಡಕ್ಟರ್, ವೈಮಾಂತರಿಕ್ಷ, ಆಟೋಮೋಟೀವ್ ಆಹಾರ ಮತ್ತು ಪಾನೀಯ, ಮೆಡ್-ಟೆಕ್, ಫಿನ್-ಟೆಕ್ ಹಾಗೂ ಮರುಬಳಕೆ ಇಂಧನ ಮುಂತಾದ ಕ್ಷೇತ್ರಗಳಲ್ಲಿ ವೇಲ್ಸ್ ಪರಿಣತಿ ಹೊಂದಿದೆ. ಮುಂಬರುವ ದಿನಗಳಲ್ಲಿ ತಮ್ಮಲ್ಲಿನ ಕಂಪನಿಗಳು ಕರ್ನಾಟಕದಲ್ಲಿ ಹೆಚ್ಚು ಹೂಡಿಕೆ ಮಾಡಲು ಮತ್ತು ಸಹಭಾಗಿತ್ವ ಹೊಂದಲು ಉತ್ಸುಕವಾಗಿವೆ” ಎಂದು ತಿಳಿಸಿದರು.

ಸಚಿವ ಪಾಟೀಲ್ ಮಾತನಾಡಿ, “ಬೆಂಗಳೂರಿನ ಸಮೀಪದಲ್ಲಿ ಜಾಗತಿಕ ದರ್ಜೆಯ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನಾ ನಗರವು (ಕೆಎಚ್ಐಆರ್ ಸಿಟಿ) 2,000 ಎಕರೆ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರುತ್ತಿದೆ. ವೇಲ್ಸ್ ನ ಕಂಪನಿಗಳು ಇಲ್ಲಿ ಹೂಡಿಕೆ ಮಾಡುವ ಮೂಲಕ, ಈ ಸದವಕಾಶವನ್ನು ಬಳಸಿಕೊಳ್ಳಬೇಕು. ಜೊತೆಗೆ ರಾಜ್ಯದಲ್ಲಿ ಏರೋಸ್ಪೇಸ್, ರಕ್ಷಣೆ ಮತ್ತು ಮಶೀನ್ ಟೂಲ್ಸ್ ಕ್ಷೇತ್ರಗಳಲ್ಲಿ ಹೆಚ್ಚಿನ ಹೂಡಿಕೆಗೆ ಅವಕಾಶವಿದೆ” ಎಂದು ವಿವರಿಸಿದರು.

Advertisements

“ಇದಲ್ಲದೆ, ರಾಜ್ಯ ಸರಕಾರವು ಸದ್ಯದಲ್ಲೇ ʼಶುದ್ಧ ಇಂಧನ ನೀತಿ’ಯನ್ನು ಜಾರಿಗೆ ತರುತ್ತಿದೆ. ಇದು ಪ್ರವರ್ಧಮಾನಕ್ಕೆ ಬರುತ್ತಿರುವ ಕ್ಷೇತ್ರವಾಗಿದ್ದು, ಮುಂದಿನ ದಿನಗಳಲ್ಲಿ ಭಾರೀ ಬೇಡಿಕೆ ಕಾಣಲಿದೆ. ನಮ್ಮಲ್ಲಿ ಸರಕಾರಗಳು ಬದಲಾದರೂ ಕೈಗಾರಿಕೆಗಳ ಬೆಳವಣಿಗೆ ಅಬಾಧಿತವಾಗಿ ಮುಂದುವರಿದುಕೊಂಡು ಹೋಗಲಿದೆ. ಇಲ್ಲಿ ಹೂಡಿಕೆಸ್ನೇಹಿ ವಾತಾವರಣವಿದ್ದು, ಅತ್ಯುತ್ತಮ ನೀತಿಗಳಿವೆ” ಎಂದು ಅವರು ಮನದಟ್ಟು ಮಾಡಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

“ಕೋವಿಡ್ ಸಂದರ್ಭದಲ್ಲಿ ಭಾರತ ಮತ್ತು ಯುನೈಟೆಡ್ ಕಿಂಗ್ಡಂ ಜತೆಗೂಡಿ ಕೆಲಸ ಮಾಡಿವೆ. ರಾಜ್ಯದಲ್ಲಿ ಉತ್ಪಾದನಾ ಕ್ಷೇತ್ರ, ಫಿನ್ಟೆಕ್, ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ವಿಪುಲ ಅವಕಾಗಳಿವೆ. ಯುನೈಟೆಡ್ ಕಿಂಗ್ಡಂನಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಇದ್ದು, ಆ ದೇಶವು ತನ್ನ ಅಗತ್ಯವೇನೆಂದು ತಿಳಿಸಿದರೆ ಅದಕ್ಕೆ ತಕ್ಕಂತೆ ತರಬೇತಿ ಕೊಟ್ಟು, ಇಲ್ಲಿ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸಲಾಗುವುದು” ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮತ್ತು ಟೆಸ್ಕೋ, ಎ.ಆರ್.ಎಂ., ಮೈಕ್ರಾನ್ ಕ್ಲೀನ್, ರೋಲ್ಸ್ ರಾಯ್, ಎಚ್ ಎಸ್ ಬಿಸಿ ಮತ್ತು ರೆವೊಲಟ್ ಮುಂತಾದ ಕಂಪನಿಗಳ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X