ವಿಧಾನಸೌಧಕ್ಕೆ ಅತ್ಯಾಧುನಿಕ ತಂತ್ರಜ್ಞಾನದ ಬಿಗಿ ಭದ್ರತೆ; ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ ಗೃಹ ಇಲಾಖೆ

Date:

Advertisements

ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್‌’ ಘೋಷಣೆ ಕೂಗಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡ ಬಿಗಿ ಭದ್ರತೆಯನ್ನು ಒದಗಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಈ ಸಂಬಂಧ ಗೃಹ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಭದ್ರತಾ ಯೋಜನೆ ಶೀಘ್ರ ಒಪ್ಪಿಗೆಯೂ ಸಿಗಲಿದ್ದು ಸಂಸತ್ ಮಾದರಿಯ ಬಧ್ರತಾ ವ್ಯವಸ್ಥೆಯನ್ನು ಒದಗಿಸಲು ಪೊಲೀಸ್‌ ಇಲಾಖೆ ಮುಂದಾಗಿದೆ. ಹೀಗಾಗಿ ವಿಧಾನಸೌಧ ಪ್ರವೇಶಕ್ಕೆ ಮುನ್ನ ಫೇಸ್‌ ರೀಡಿಂಗ್‌ (ಮುಖಚಹರೆ) ಮಾಡಲಾಗುತ್ತದೆ.

ವಿಧಾನಸೌಧಕ್ಕೆ ಸಂಸತ್ ಮಾದರಿಯ ಬಧ್ರತಾ ವ್ಯವಸ್ಥೆಯನ್ನು ಒದಗಿಸಲು 43 ಕೋಟಿ ರೂ. ವೆಚ್ಚವಾಗಲಿದೆ. ಗೃಹ ಇಲಾಖೆಯಿಂದ ಈ ಸಂಬಂಧ ಸಲ್ಲಿಕೆಯಾಗಿರುವ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡುವುದು ಬಾಕಿಯಿದೆ.

Advertisements

ಅನುಮೋದನೆ ದೊರೆತಲ್ಲಿ ದೆಹಲಿಯ ನೂತನ ಸಂಸತ್ ಭವನದ ಮಾದರಿಯಲ್ಲಿ ವಿಧಾನಸೌಧಕ್ಕೂ ಭದ್ರತೆ ದೊರೆಯಲಿದೆ. ಹೊಸ ಭದ್ರತಾ ವ್ಯವಸ್ಥೆಯು ಶಾಸಕರು, ಸಚಿವರು, ಅಧಿಕಾರಿಗಳು, ಪತ್ರಕರ್ತರಿಗೂ ಅನ್ವಯವಾಗಲಿದೆ. ಹೀಗಾಗಿ ವಿಧಾನಸೌಧದ ಎಲ್ಲ ಗೇಟ್‌ಗಳಲ್ಲಿ ಫೇಸ್ ರೀಡಿಂಗ್ ಅನ್ನು ಕಡ್ಡಾಯ ಮಾಡಲಾಗಿದೆ.

ಹೊಸ ಭದ್ರತೆ ಹೇಗಿರಲಿದೆ

ವಿಧಾನಸೌಧದ ಆವರಣದಲ್ಲಿ ಇರುವ 18 ಸಿಸಿ ಕ್ಯಾಮೆರಾಗಳನ್ನು 256ಕ್ಕೆ ಹೆಚ್ಚಿಸಿ, ಗೇಟ್ ಪ್ರವೇಶಿಸುವ ವಾಹನಗಳಿಗೆ ನೋಂದಾಯಿತ ಪಾಸ್ ಅನ್ನು ಅಳವಡಿಕೆ ಮಾಡಲಾಗುವುದು. ಎಲ್ಲ ಪ್ರವೇಶ ದ್ವಾರದಲ್ಲಿ ಎಲೆಕ್ಟ್ರಿಕ್‌ ಬ್ಯಾರಿಕೆಡ್ ಅನ್ನು ಅಳವಡಿಕೆ ಮಾಡಲಾಗುವುದು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ

ಫೇಸ್‌ ರೀಡಿಂಗ್‌ ಸಿಸ್ಟಂ

ವಿಧಾನಸೌಧದ ಪ್ರತಿ ಗೇಟ್‌ನಲ್ಲಿಯೂ ಫೇಸ್ ರೀಡಿಂಗ್ ಸಿಸ್ಟಂ ಅನ್ನು ಅಳವಡಿಕೆ ಮಾಡಲಾಗುತ್ತದೆ. ಯಾವುದೇ ವ್ಯಕ್ತಿ ಒಳಗೆ ಬರುವ ಮುನ್ನ ಅಳವಡಿಕೆ ಮಾಡಲಾಗಿರುವ ಕ್ಯಾಮೆರಾವು ಅವರ ಫೇಸ್‌ ರೀಡ್‌ ಮಾಡಲಿದೆ. ಆ ವ್ಯಕ್ತಿಯು ಒಳಪ್ರವೇಶಿಸಿದ ಬಳಿಕ ಸಂಪೂರ್ಣ ಚಲನವಲನದ ಮೇಲೆ ನಿಗಾ ಇಡಲಾಗುತ್ತದೆ.

ಒಳಪ್ರವೇಶ ಮತ್ತು ನಿರ್ಗಮನದವರೆಗಿನ ಮಾಹಿತಿಯು ಕಂಟ್ರೋಲ್ ರೂಮ್‌ಗೆ ಹೋಗಲಿದೆ. ಇನ್ನು ಬೂಮ್ ಬ್ಯಾರಿಯರ್ ತಳ್ಳಿ ಒಳನುಗ್ಗುವ ವಾಹನಗಳ ಟೈರ್ ಪಂಚರ್‌ಗೆ ಸಹ ತಂತ್ರಜ್ಞಾನವನ್ನು ಅಳವಡಿಕೆ ಮಾಡಲಾಗುತ್ತದೆ.

ಅಧಿಕೃತ ಐಡಿ ಕಾರ್ಡ್‌

ಶಾಸಕರು, ಸಚಿವರು, ಅಧಿಕಾರಿಗಳು, ಸಿಬ್ಬಂದಿಗಳು, ಪತ್ರಕರ್ತರು ಸಹ ತಪಾಸಣಾ ವ್ಯಾಪ್ತಿಗೆ ಬರಲಿದ್ದಾರೆ. ಅಧಿಕೃತ ಸಿಬ್ಬಂದಿಯ ಐಡಿ ಕಾರ್ಡ್ ಸ್ಕ್ಯಾನ್ ಮಾಡಿಸಿಯೇ ವಿಧಾನಸೌಧಕ್ಕೆ ಪ್ರವೇಶ ನೀಡಲಾಗುವುದು. ಪತ್ರಕರ್ತರ ಅಧಿಕೃತ ಐಡಿ ಕಾರ್ಡ್‌ಗಳಿಗೆ ಮಾತ್ರವೇ ಗೇಟ್‌ಗಳಲ್ಲಿ ಮಾನ್ಯತೆ ಸಿಗುತ್ತದೆ.

ಶಾಸಕರ ಜತೆಗೆ ಗುಂಪಾಗಿ ಬರುವ ಸಾರ್ವಜನಿಕರ ಸಂಪೂರ್ಣ ವಿವರವನ್ನು ಪಡೆದು ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಅಪಾಯಕಾರಿ ವಸ್ತುಗಳು, ಎಲೆಕ್ಟ್ರಿಕ್ ಹಾರ, ಸಿಡಿಮದ್ದುಗಳಿಗೆ ನಿಷೇಧ ಹೇರಲಾಗಿದೆ. ಸಭೆ ಸಮಾರಂಭಗಳಿಗಾಗಿ ಆಗಮಿಸುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಸೂಚನೆ ನೀಡಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X