- ಲೋಕಸಭಾ ಚುನಾವಣೆ ಮೇಲೆ ವಿಧಾನಸಭೆ ಫಲಿತಾಂಶ ಪ್ರಭಾವ ಬೀರಲಿದೆ
- ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟದ ವಿಸ್ತರಣೆಯಾಗಲಿದೆ ಎಂದ ಎಐಸಿಸಿ ಅಧ್ಯಕ್ಷ
ಮುಂಬರುವ ಲೋಕಸಭೆ ಚುನಾವಣೆ ಮೇಲೆ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಭಾವ ಬೀರಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಕಲಬುರ್ಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಚುನಾವಣೆ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಗೆ ಖಂಡಿತ ಪ್ರಭಾವ ಬೀರಲಿದೆ.
ಇದು ಬದಲಾವಣೆ ಹಾಗೂ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ದ ಜನ ತೆಗೆದುಕೊಂಡ ನಿರ್ಣಯ ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜನ ಪಕ್ಷಕ್ಕೆ ನೀಡಿರುವ ಬೆಂಬಲ ನೋಡಿದರೆ ಲೋಕಸಭೆ ಚುನಾವಣೆಯಲ್ಲಿ ಇದು ತುಂಬಾ ಪ್ರಭಾವ ಬೀರಲಿದೆ ಎಂದವರು ಹೇಳಿದರು.
ಈ ಸುದ್ದಿ ಓದಿದ್ದೀರಾ?:16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭ; ಶಾಸಕರಿಂದ ಪ್ರಮಾಣ ವಚನ ಸ್ವೀಕಾರ
ಇನ್ನು ನೂತನ ಸರ್ಕಾರದ ಸಂಪುಟ ವಿಸ್ತರಣೆ ವಿಚಾರವಾಗಿ ಮಾಹಿತಿ ನೀಡಿದ ಅವರು, ವಾರದೊಳಗೆ ಸಂಪುಟ ರಚನೆಯಾಗಲಿದೆ ಎಂದರು.
ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳ ನಿರ್ಣಯ ತೆಗೆದುಕೊಂಡಿದೆ. ಯಾರಿಗೆ ಹೇಗೆ ಸೌಲಭ್ಯ ಸಿಗಬೇಕು ಎಂಬ ಬಗ್ಗೆ ಶೀಘ್ರವೇ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಮಲ್ಲಿಕಾರ್ಜುನ ಹೇಳಿದರು.