ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್, ಆಪ್ತ ಕಾರ್ಯದರ್ಶಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಹಾಗೂ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ ವಿ ಪ್ರಭಾಕರ್ ಅವರನ್ನು ನೇಮಿಸಲಾಗಿದೆ.
ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ರಜನೀಶ್ ಗೋಯಲ್ ಅವರು ಸದ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದು, ಅದರ ಜೊತೆಗೆ ಹೊಸ ಜವಾಬ್ದಾರಿ ವಹಿಸಲಾಗಿದೆ. ಡಾ. ವೆಂಕಟೇಶಯ್ಯ ಅವರು ಇಲ್ಲಿಯವರೆಗೆ ಸಿದ್ದರಾಮಯ್ಯ ಅವರಿಗೆ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹಾಗೆಯೇ ಕೆ ವಿ ಪ್ರಭಾಕರ್ ಅವರು ಮೀಡಿಯಾ ಕೋಆರ್ಡಿನೇಟರ್ ಆಗಿದ್ದರು.