ಬೆಂಗಳೂರು | ವೈಟ್‌ಬೋರ್ಡ್ ಟ್ಯಾಕ್ಸಿ ಹಾಗೂ ರ್‍ಯಾಪಿಡೋ ವಿರುದ್ಧ ಆಟೋ ಚಾಲಕರ ಮುಷ್ಕರ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವೈಟ್‌ಬೋರ್ಡ್ ಟ್ಯಾಕ್ಸಿ ಹಾಗೂ ರ್‍ಯಾಪಿಡೋ ಸೇರಿದಂತೆ ನಾನಾ ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಸೋಮವಾರ ಆಟೋ ಮಾಲೀಕರ ಮತ್ತು ಚಾಲಕರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ಹೋರಾಟಕ್ಕೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದ ಯಶವಂತಪುರ ಹಾಗೂ ಮೆಜೆಸ್ಟಿಕ್ ಬಳಿ ಎಂದಿನಂತೆ ಆಟೋಗಳು ಸಂಚರಿಸುತ್ತಿವೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಪ್ರಿಪೇಯ್ಡ್ ಆಟೋಗಳು ಜನರಿಗೆ ಸೇವೆ ನೀಡುತ್ತಿವೆ. ಪ್ರತಿಭಟನಾ ಸಮಯವನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವು ಆಟೋ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ಕೇಳುತ್ತಿದ್ದಾರೆ. ಹೀಗಾಗಿ, ಪ್ರಯಾಣಿಕರು ಬಿಎಂಟಿಸಿ ಮತ್ತು ಮೆಟ್ರೋಗಳತ್ತ ಮುಖ ಮಾಡುತ್ತಿದ್ದಾರೆ.

ಪ್ರತಿಭಟನೆ ಕುರಿತು ಈ ದಿನ.ಕಾಮ್ ಜತೆಗೆ ಮಾತನಾಡಿದ ಆಟೋ ಡ್ರೈವರ್ ಯೂನಿಯನ್ (ಸಿಐಟಿಯು) ಅಧ್ಯಕ್ಷ ಶ್ರೀನಿವಾಸ್, “ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುತ್ತಿದ್ದೇವೆ. ಸಾವಿರಾರು ಜನ ಸೇರಿದ್ದೇವೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸಬೇಕು. ಬೈಕ್ ಟ್ಯಾಕ್ಸಿ ಸೇವೆಯನ್ನು ಸರ್ಕಾರ ಸಂಪೂರ್ಣವಾಗಿ ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರೈಲ್ವೆ ನಿಲ್ದಾಣದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಗೆ ತೆರಳಿ ಮನವಿ ಸಲ್ಲಿಸಲಿದ್ದೇವೆ. ಒಂದು ವೇಳೆ ರಾಜ್ಯ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೇ, ಈ ಮುಷ್ಕರವನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸುತ್ತೇವೆ. ಬೆಂಗಳೂರಿನಲ್ಲಿ 21 ಆಟೋ ಚಾಲಕರ ಸಂಘಟನೆಗಳಿದ್ದು, ಎಲ್ಲ ಸಂಘಟನೆಗಳು ಈ ಬಂದ್ನಲ್ಲಿ ಪಾಲ್ಗೊಳ್ಳಲಿವೆ. ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸೇರಿ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ನೀಡಿವೆ. ನಗರದಲ್ಲಿ ಕೆಲವು ತಿಳುವಳಿಕೆ ಕೊರತೆ ಇರುವ ಜನ ಆಟೋ ಓಡಿಸುತ್ತಿದ್ದಾರೆ. ಅವರಿಗೆ ಮನವರಿಕೆ ಮಾಡುತ್ತಿದ್ದೇವೆ” ಎಂದರು.

ಚಾಲುಕ್ಯ ಆಟೋ ಸಂಘದ ಚಾಲಕ ಮಂಜುನಾಥ್ ಈ ದಿನ.ಕಾಮ್ ಜತೆಗೆ ಮಾತನಾಡಿ, “24 ಗಂಟೆ ಪ್ರತಿಭಟನೆ ಮಾಡಲು ತಿಳಿಸಿದ್ದಾರೆ. ಹಾಗಾಗಿ, ಆಟೋವನ್ನು ಸ್ಟಾಂಡ್‌ನಲ್ಲಿ ನಿಲ್ಲಿಸಿದ್ದೇವೆ. ರ್‍ಯಾಪಿಡೋವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು” ಎಂದು ಹೇಳಿದರು.

ಆಟೋ ಚಾಲಕ ವಿಜಯಕುಮಾರ ಈ ದಿನ.ಕಾಮ್ ಜತೆಗೆ ಮಾತನಾಡಿ, ”ನಗರದಲ್ಲಿ ಪ್ರತಿ ಏರಿಯಾಗಳಲ್ಲಿ ಆಟೋ ಸಂಚಾರವನ್ನು ನಿಷೇಧಿಸಲಾಗಿದೆ. ಆಟೋ ಓಡಿಸುತ್ತಿರುವವರಿಗೆ ಈ ಬಗ್ಗೆ ಮನವರಿಕೆ ಮಾಡಲಾಗುತ್ತಿದೆ. ವೈಟ್‌ ಬೋರ್ಡ್‌ನವರು ಹೆಚ್ಚಿನ ಬಂಡವಾಳ ಹಾಕದೇ ದಿನಕ್ಕೆ 1,000ದಿಂದ 1,500 ವರೆಗೆ ದುಡಿಯುತ್ತಿದ್ದಾರೆ. ನಾವು ಆಟೋ ಚಾಲಕರು ಇನ್ಶುರೆನ್ಸ್, ಎಮಿಷನ್ ಸರ್ಟಿಫಿಕೇಟ್, ಮೀಟರ್ ಪಾಸಿಂಗ್, ಗಾಡಿ ಪಾಸಿಂಗ್ – ಇಷ್ಟೆಲ್ಲ ಮಾಡಿಯೂ ಕೂಡಾ ನಮಗೆ ಸಂಪಾದನೆ ಇಲ್ಲ. ಜೀವನ ನಡೆಸುವುದು ಕಷ್ಟಕರವಾಗಿದೆ” ಎಂದರು.

ಆಟೋ ಚಾಲಕ ರಮೇಶ್ ಈ ದಿನ.ಕಾಮ್ ಜತೆಗೆ ಮಾತನಾಡಿ, “ಮುಷ್ಕರದ ಹೆಸರಿನಲ್ಲಿ ಆಟೋ ನಿಲ್ಲಿಸಿದ್ದರೆ, ಜೀವನ ನಡೆಸುವುದು ಕಷ್ಟವಾಗುತ್ತದೆ. ಬೆಳಗಾದರೆ ತೊಂದರೆಗಳು ಬಂದು ನಿಲ್ಲುತ್ತವೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಮಕ್ಕಳಿಗೆ ಪರೀಕ್ಷೆ ನಡೆಯುತ್ತಿವೆ” ಎಂದು ತಿಳಿಸಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ...

ಕೋಲಾರ ಟಿಕೆಟ್‌ | ಬಣ ಬಡಿದಾಟಕ್ಕೆ ಪೂರ್ಣವಿರಾಮವಿಟ್ಟ ಸಿಎಂ, ಡಿಸಿಎಂ; ಅಭ್ಯರ್ಥಿ ಯಾರು?

ಕೋಲಾರ ಟಿಕೆಟ್‌ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿದ್ದ ಬಣಗಳ ಬಡಿದಾಟವನ್ನು...

ತೆರಿಗೆ ಮರು ಮೌಲ್ಯಮಾಪನ ವಿರುದ್ಧದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ...