ಬೆಂಗಳೂರು | ಪೋಷಕರ ಮೇಲೆ ದ್ವೇಷ; ಬಾಲಕಿ ಮೇಲೆ ನಾಯಿ ಛೂ ಬಿಟ್ಟ ದುರುಳ

Date:

Advertisements

ಪೋಷಕರ ವಿರುದ್ಧ ಸೇಡು ತೀರಿಸಿಕ್ಕೊಳ್ಳಲು ಅಪ್ರಾಪ್ತ ಬಾಲಕಿಯ ಮೇಲೆ ತನ್ನ ನಾಯಿಯನ್ನು ಛೂ ಬಿಟ್ಟ ಕೋಳಿ ಫಾರಂ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಘಟನೆ?

ನಾಗರಾಜ್ ಎಂಬುವವರು ಮಾಗಡಿ ಬಳಿ ಕೋಳಿ ಫಾರಂ ಹೊಂದಿದ್ದಾರೆ. ಬಾಲಕಿಯ ತಂದೆ-ತಾಯಿ ದಿನಗೂಲಿ ನೌಕರರಾಗಿದ್ದಾರೆ.

Advertisements

“ಕೋಳಿ ಫಾರಂನಲ್ಲಿ ದಿನಗೂಲಿ ಕೆಲಸ ಮಾಡಲು ನಾಗರಾಜ್ ಬಾಲಕಿಯ ಪೋಷಕರನ್ನು ಕರೆದಿದ್ದಾನೆ. ಆದರೆ, ಅವರು ಈ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಕೋಳಿ ಫಾರಂ ಮಾಲೀಕ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾನೆ. ಕೋಪಗೊಂಡ ನಾಗರಾಜ್ ದಂಪತಿಯ 15 ವರ್ಷದ ಮಗಳ ಮೇಲೆ ಸೇಡು ತೀರಿಸಿಕೊಳ್ಳಲು ಯೋಜಿಸಿದ್ದನು” ಎಂದು ಪೊಲೀಸರು ಹೇಳಿದ್ದಾರೆ.

“ಅಕ್ಟೋಬರ್ 9 ರಂದು ಬಾಲಕಿ ಶಾಲೆಯಿಂದ ಬರುತ್ತಿದ್ದಾಗ ನಾಗರಾಜ್‌ನ ಮನೆ ಸಮೀಪಿಸುತ್ತಿದ್ದಂತೆ ಆತ ತನ್ನ ಸಾಕುನಾಯಿಯನ್ನು ಛೂ ಬಿಟ್ಟಿದ್ದಾನೆ. ಬಾಲಕಿ ನಾಯಿಯಿಂದ ಭಯಗೊಂಡು ಸಹಾಯಕ್ಕಾಗಿ ಕೂಗಿದ್ದಾಳೆ. ಈ ವೇಳೆ, ಅಕ್ಕಪಕ್ಕದವರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಬಾಲಕಿಯನ್ನು ನಾಯಿ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ” ಎಂದು ತಿಳಿಸಿದ್ದಾರೆ.

“ಗಾಯಗೊಂಡ ಬಾಲಕಿಯನ್ನು ಸ್ಥಳೀಯರು ಮಾಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 5 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ!

ಸಂತ್ರಸ್ತೆಯ ಪೋಷಕರು ಕೋಳಿ ಫಾರಂ ಮಾಲೀಕರ ವಿರುದ್ಧ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X