ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದ ಜಾತಿ ಲೆಕ್ಕಾಚಾರ ಹೀಗಿದೆ

Date:

ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.

ಲಿಂಗಾಯತ ಸಮುದಾಯಕ್ಕೆ ಒಟ್ಟು ಎಂಟು ಸಚಿವ ಸ್ಥಾನ ನೀಡಲಾಗಿದ್ದು ಈ ಸಮುದಾಯದ ಬಹುತೇಕ ಎಲ್ಲಾ ಪ್ರಮುಖ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್‌ಕರ್ ಮತ್ತು ಶಿವಾನಂದ ಪಾಟೀಲ್, ಎಂ.ಬಿ.ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಶರಣ ಪ್ರಕಾಶ ಪಾಟೀಲ್, ದರ್ಶನಾಪುರ, ಹೆಚ್.ಕೆ.ಪಾಟೀಲ್ ಅವರು ಲಿಂಗಾಯತರ ಖೋಟಾದಲ್ಲಿ ಸಚಿವರಾಗಿದ್ದಾರೆ.

ಒಕ್ಕಲಿಗರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಚೆಲುವರಾಯಸ್ವಾಮಿ, ಪಿರಿಯಾಪಟ್ಟಣ ವೆಂಕಟೇಶ್, ಎಂ.ಸಿ.ಸುಧಾಕರ್, ಕೃಷ್ಣಬೈರೇಗೌಡ ಸೇರಿ ಐದು ಮಂದಿಗೆ ಪ್ರಾತಿನಿಧ್ಯ ದೊರೆತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದಲಿತ ಸಮುದಾಯಕ್ಕೆ ಬರೋಬ್ಬರಿ 9 ಸಚಿವ ಸ್ಥಾನ ಲಭಿಸಿದ್ದು ಮುನಿಯಪ್ಪ, ಜಿ.ಪರಮೇಶ್ವರ್, ಹೆಸ್.ಸಿ.ಮಹದೇವಪ್ಪ, ಆರ್.ಬಿ. ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ ಅವರುಗಳು ಪರಿಶಿಷ್ಟ ಜಾತಿ ಖೋಟಾದಲ್ಲಿ ಸಚಿವರಾಗಿದ್ದಾರೆ. ಎಡಗೈ ಮತ್ತು ಬಲಗೈ ಸಮುದಾಯಗಳನ್ನು ಸರಿದೂಗಿಸಲಾಗಿದೆ. ಪರಿಶಿಷ್ಟ ಪಂಗಡದ ಪ್ರತಿನಿಧಿಗಳಾಗಿ ನಾಗೇಂದ್ರ, ಮಧುಗಿರಿ ರಾಜಣ್ಣ, ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ದೊರೆತಿದೆ.

ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಅತ್ಯಂತ ಸಣ್ಣ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಬೆಸ್ತ ಸಮುದಾಯದ ಮಾಂಕಾಳ ವೈದ್ಯ, ಮರಾಠ ಸಮಾಜದಿಂದ ಸಂತೋಷ್ ಲಾಡ್ ಇದ್ದಾರೆ. ಕುರುಬ ಸಮುದಾಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ. ಬಿಲ್ಲವ (ಈಡಿಗ) ಸಮುದಾಯದಿಂದ ಮಧು ಬಂಗಾರಪ್ಪ ಇದ್ದಾರೆ. ರಜಪೂತ ಸಮುದಾಯದ ಅಜಯ್ ಸಿಂಗ್ ಅವರು ಮುಖ್ಯ ಸಚೇತಕರಾಗಿರುವುದರಿಂದ ಕಡೆ ಗಳಿಗೆಯ ಒತ್ತಡದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ. ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಬಂಜಾರ ಸಮುದಾಯದ ಪ್ರಕಾಶ್ ರಾಥೋಡ್ ಅವರಿಗೂ ಈಗಾಗಲೇ ಒಂದು ಜವಾಬ್ದಾರಿ ಇರುವ ಕಾರಣಕ್ಕೆ ಸಚಿವ ಸ್ಥಾನ ದೊರಕಿಲ್ಲ.

ಮುಸ್ಲಿಂ ಸಮುದಾಯದಿಂದ ಜಮೀರ್ ಅಹಮದ್ ಖಾನ್, ರಹೀಂ ಖಾನ್ ಇಬ್ಬರು ಸಚಿವರಾಗಿದ್ದರೆ, ಯು.ಟಿ.ಖಾದರ್ ಸ್ಪೀಕರ್ ಆಗಿದ್ದಾರೆ. ಕ್ರೈಸ್ತ ಸಮುದಾಯದಿಂದ ಕೆ.ಜೆ.ಜಾರ್ಜ್ ಅವರಿಗೆ ಸಚಿವ ಸ್ಥಾನ ಒಲಿದಿದೆ. ಜೈನ ಸಮುದಾಯದಿಂದ ಡಿ.ಸುಧಾಕರ್ ಹಾಗೂ ಬ್ರಾಹ್ಮಣ ಸಮುದಾಯದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ದೊರಕಿದೆ.

ಹೀಗೆ ಸಚಿವರ ಆಯ್ಕೆಯಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುವಾಗ ಪ್ರಾದೇಶಿಕ ನ್ಯಾಯ ಸಮತೋಲನ ತಪ್ಪದಂತೆಯೂ ಎಚ್ಚರ ವಹಿಸಿರುವುದು ಸಿದ್ದರಾಮಯ್ಯ ಅವರ ಆಯ್ಕೆ ಸಮತೂಕದಲ್ಲಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೂ ಪ್ರಾತಿನಿಧ್ಯ ದೊರೆತಿದೆ. ಮಲೆನಾಡು, ಕರಾವಳಿ ಕರ್ನಾಟಕ ಮತ್ತು ಮೈಸೂರು ಕರ್ನಾಟಕ ಹಾಗೂ ಮಧ್ಯ ಕರ್ನಾಟಕಕ್ಕೆ ಸಿಕ್ಕಿರುವ ಪ್ರಾತಿನಿಧ್ಯ ಜಾತಿವಾರು ಲೆಕ್ಕಾಚಾರಗಳನ್ನೂ ಸರಿದೂಗಿಸಿದೆ.

ಹಿಂದಿನ ಬಿಜೆಪಿ ಅವಧಿಯಲ್ಲಿ ಬಿಜೆಪಿ ಜಾತಿವಾರು ಪ್ರಾತಿನಿಧ್ಯವನ್ನು ಕಡೆಗಣಿಸಿದ್ದ ಅಸಮಾಧಾನ ಹಲವು ಸಮುದಾಯಗಳಲ್ಲಿ ಹೆಪ್ಪುಗಟ್ಟಿತ್ತು. ಹಾಲಿ ಸಿದ್ದರಾಮಯ್ಯ ಅವರ ಆಯ್ಕೆ ಜಾತಿ ಲೆಕ್ಕಾಚಾರ ಮತ್ತು ಚುನಾಯಿತ ಶಾಸಕರ ಲೆಕ್ಕದಲ್ಲೂ ಸಾಮಾಜಿಕ ನ್ಯಾಯವನ್ನು ಕಾಪಾಡಿಕೊಂಡಿದೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...