ವರ್ಧಂತಿ ಮಹೋತ್ಸವ : ಮೈಸೂರಿನಲ್ಲಿ ಪುರುಷರಿಗೂ ಫ್ರೀ ಬಸ್ ಪ್ರಯಾಣ!

Date:

Advertisements
  • ಚಾಮುಂಡಿ ಬೆಟ್ಟಕ್ಕೆ ಸುಗಮ ಸಂಚಾರ ಅನುವು ಮಾಡಿಕೊಡುವ ಹಿನ್ನೆಲೆ
  • ಖಾಸಗಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಿದ ಮೈಸೂರು ಜಿಲ್ಲಾಡಳಿತ

ಮಹಿಳೆಯರಿಗೆ ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣ ಒದಗಿಸಿಕೊಟ್ಟರೆ, ಇತ್ತ ಮೈಸೂರು ಜಿಲ್ಲಾಡಳಿತ ಪುರುಷರಿಗೂ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸಿಕೊಟ್ಟಿದೆ.

ಹೌದಾ ಅಂತ ಮೂಗಿನ ಮೇಲೆ ಬೆರಳಿಡಬೇಡಿ. ಏಕೆಂದರೆ ಈ ಯೋಜನೆ ಜಾರಿಯಾಗಿರೋದು ನಿಜ, ಆದರೆ ಅದು ಸೀಮಿತ ಅವಧಿಗೆ ಎನ್ನುವುದು ಗಮನಾರ್ಹ.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಷಾಢ ಶುಕ್ರವಾರಗಳಂದು ಖಾಸಗಿ ವಾಹನಗಳ ಪ್ರವೇಶಕ್ಕೆ ಮೈಸೂರು ಜಿಲ್ಲಾಡಳಿತ ಸಂಪೂರ್ಣ ನಿರ್ಬಂಧ ವಿಧಿಸಿದೆ. ಹೀಗಾಗಿ ಸರ್ಕಾರಿ ಬಸ್ ಗಳಲ್ಲಿ ಭಕ್ತಾದಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

Advertisements

ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳುವ ಎಲ್ಲಾ ಭಕ್ತರಿಗೂ ಉಚಿತ ಪ್ರಯಾಣ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಮಹಿಳಾ ಭಕ್ತರ ಜೊತೆಗೆ ಪುರುಷ ಭಕ್ತಾದಿಗಳಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಅಂದಹಾಗೆ ಜಿಲ್ಲಾಡಳಿತ ಈ ಯೋಜನೆ ಜಾರಿಗೆ ತರಲು ಕಾರಣವಾಗಿರುವುದು ಖಾಸಗಿ ವಾಹನಗಳ ದಟ್ಟಣೆ, ಅಪಘಾತ ತಡೆ, ಸುಗಮ ಸಂಚಾರಕ್ಕಾಗಿ ಅನುವು ಮಾಡಿಕೊಡುವ ಸಲುವಾಗಿ. ಜೂನ್ 23 ರಿಂದ ಜುಲೈ 14ರ ಆಷಾಢ ಶುಕ್ರವಾರ ದಿನಗಳಂದು ಹಾಗೂ ಜುಲೈ 10ರ ವರ್ಧಂತಿ ದಿನದಂದು ಹೆಚ್ಚಿನ ಜನ ಬರುವುದರಿಂದ ಸಂಚಾರ ಮಾರ್ಗಸೂಚಿ ಪ್ರಕಟ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ?: ಪೊಳ್ಳು ಭರವಸೆ ಕೊಟ್ಟು ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದೆಷ್ಟು ಸರಿ: ಎಚ್‌ಡಿಕೆ

ಇದರಂತೆ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳು ತಮ್ಮ ವಾಹನಗಳನ್ನ ಲಲಿತ ಮಹಲ್ ಮೈದಾನದಲ್ಲಿ ನಿಲುಗಡೆ ಮಾಡುವಂತೆ ಸೂಚಿಸಿದೆ. ಇಲ್ಲಿಂದ ಜಿಲ್ಲಾಡಳಿತದ ವತಿಯಿಂದ ಮಾಡಿರುವ ಸರ್ಕಾರಿ ಬಸ್ ಗಳಲ್ಲಿ ಭಕ್ತರು ತೆರಳುವಂತೆ ಸೂಚನೆ ನೀಡಲಾಗಿದೆ.

ಬೆಳಗಿನ ಜಾವ 3 ರಿಂದ ರಾತ್ರಿ 10 ಗಂಟೆವರೆಗೂ ಈ ಉಚಿತ ಬಸ್ ಸೌಲಭ್ಯ ಇರಲಿದೆ. ಶಿಷ್ಟಾಚಾರವಿರುವ ಗಣ್ಯರ ಮತ್ತು ಅತೀ ಗಣ್ಯರ ವಾಹನಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X