ಗೃಹಜ್ಯೋತಿ ಯೋಜನೆಗೆ ಉತ್ತಮ ಸ್ಪಂದನೆ: ಒಂದು ಕೋಟಿಗೂ ಅಧಿಕ ಅರ್ಜಿ ಸಲ್ಲಿಕೆ

Date:

Advertisements

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಜೂ. 18 ರಿಂದ ಈವರೆಗೆ ಒಂದು ಕೋಟಿಗೂ ಅಧಿಕ ಕುಟುಂಬಗಳು ಅರ್ಜಿ ಸಲ್ಲಿಸಿ ನೋಂದಾವಣೆ ಮಾಡಿಕೊಂಡಿವೆ.

ಅತ್ಯಂತ ವೇಗದಲ್ಲಿ ಗೃಹಜ್ಯೋತಿ ಯೋಜನೆ ರಾಜ್ಯದ ಜನರಿಗೆ ತಲುಪುತ್ತಿದ್ದು, ದಿನದಿಂದ ‌ದಿನಕ್ಕೆ ಅರ್ಜಿದಾರರ‌ ಸಂಖ್ಯೆ ‌ಏರಿಕೆ‌ಯಾಗುತ್ತಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಆರಂಭವಾಗಿ 17 ದಿನಗಳಲ್ಲಿ ಒಂದು ಕೋಟಿ ಜನ ನೋಂದಣಿ ಮಾಡಿದ್ದಾರೆ. ಒಟ್ಟು 1,00,20,163 ಮಂದಿ ಅರ್ಜಿ ಸಲ್ಲಿಸಿದ್ದಾರೆ.

ಯಾವ ಯಾವ ಎಸ್ಕಾಂಗಳಲ್ಲಿ ಎಷ್ಟು ಅರ್ಜಿ ಸಲ್ಲಿಕೆ

Advertisements

ಬೆಸ್ಕಾಂ ವ್ಯಾಪ್ತಿಯಲ್ಲಿ 41,14,567 ಅರ್ಜಿ
ಚೆಸ್ಕಾಂ ವ್ಯಾಪ್ತಿಯಲ್ಲಿ 15,35,045 ಅರ್ಜಿ
ಜೆಸ್ಕಾಂ ವ್ಯಾಪ್ತಿಯಲ್ಲಿ 10,54,359 ಅರ್ಜಿ
ಹೆಸ್ಕಾಂ ವ್ಯಾಪ್ತಿಯಲ್ಲಿ 21,09,473 ಅರ್ಜಿ
ಮೆಸ್ಕಾಂ ವ್ಯಾಪ್ತಿಯಲ್ಲಿ 11,56,294 ಅರ್ಜಿ
ಎಚ್‌ಆರ್‌ಇಸಿಎಸ್‌ 50,425 ಸಾವಿರ ಅರ್ಜಿ
ಒಟ್ಟು ರಾಜ್ಯಾದ್ಯಂತ 1,00,20,163 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ.

ತಿಂಗಳ ಅಂತ್ಯದ ವೇಳೆಗೆ 1.50 ಕೋಟಿ ಅರ್ಜಿ ನೋಂದಣಿ ಆಗುವ ಸಾಧ್ಯತೆ ಇದೆ. ಇಂಧನ ಇಲಾಖೆ ಈಗಾಗಲೇ ಅರ್ಜಿ ಸಲ್ಲಿಕೆಗೆ ವೈಬ್​​​​ಸೈಟ್​​ ಸರಳೀಕರಣ ‌ಮಾಡಿದೆ. ಗೃಹಜ್ಯೋತಿ ಯೋಜನೆ ಜುಲೈ 1 ರಿಂದ ಅನ್ವಯವಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಜು. 25 ಆಗಿದೆ. ಜು. 25 ರ ನಂತರ ಅರ್ಜಿ ಸಲ್ಲಿಸಿದರೆ ಆಗಸ್ಟ್​ ತಿಂಗಳ ಉಚಿತ ವಿದ್ಯುತ್ ಸೆಪ್ಟೆಂಬರ್ ತಿಂಗಳಿಗೆ ಸಿಗಲಿದೆ.

ಈ ಸುದ್ದಿ ಓದಿದ್ದೀರಾ? ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸೂಚನೆ

ಬೆಲೆಯೇರಿಕೆ ಸಂಕಷ್ಟದಲ್ಲಿರುವ ಜನರ ಬದುಕಲ್ಲಿ ನೆಮ್ಮದಿಯ ಬೆಳಕು ಮೂಡಲಿ

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, “ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ ರಾಜ್ಯದ 1 ಕೋಟಿಗೂ ಅಧಿಕ ಕುಟುಂಬಗಳು ಯಶಸ್ವಿಯಾಗಿ ಅರ್ಜಿ ಸಲ್ಲಿಸಿವೆ. ಕನಿಷ್ಠ ನಿಬಂಧನೆಗಳು ಮತ್ತು ಸರಳ ಅರ್ಜಿ ಪ್ರಕ್ರಿಯೆಯ ಮೂಲಕ ಎಲ್ಲಾ ಅರ್ಹ ಕುಟುಂಬಗಳಿಗೆ ಯೋಜನೆಯನ್ನು ತಲುಪಿಸಬೇಕೆಂಬುದು ನಮ್ಮ ಉದ್ದೇಶ. ಯೋಜನೆಯ ವ್ಯಾಪ್ತಿಗೆ ಒಳಪಡುವವರು ತಪ್ಪದೇ ಅರ್ಜಿ ಸಲ್ಲಿಸಿ, ಇತರರಿಗೂ ಅರ್ಜಿ ಸಲ್ಲಿಸಲು ನೆರವಾಗಿ. ಬೆಲೆಯೇರಿಕೆಯಿಂದ ಸಂಕಷ್ಟದಲ್ಲಿರುವ ಜನರ ಬದುಕಲ್ಲಿ ನೆಮ್ಮದಿಯ ಬೆಳಕು ಮೂಡಲಿ”

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X