ವಿಡಿಯೊ ಕಾನ್ಫರೆನ್ಸ್‌ ಮೂಲಕ ಕಂದಾಯ ವ್ಯಾಜ್ಯಗಳ ವಿಚಾರಣೆ ನಡೆಸುವಂತೆ ಹೈಕೋರ್ಟ್‌ ಸೂಚನೆ

Date:

  • ಆರ್‌ಡಿಪಿಆರ್ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ
  • 8 ವಾರಗಳ ಒಳಗೆ ಸಮಗ್ರ ವರದಿ ಸಲ್ಲಿಸುವಂತೆ ತಾಕೀತು

ರಾಜ್ಯಾದ್ಯಂತ ಅರೆ ನ್ಯಾಯಿಕ ಪ್ರಾಧಿಕಾರಗಳಲ್ಲಿ ನಡೆಯುವ ಕಂದಾಯ ವ್ಯಾಜ್ಯಗಳ ವಿಚಾರಣೆಯನ್ನು ವಿಡಿಯೊ ಕಾನ್ಫರೆನ್ಸ್‌ (ವಿ.ಸಿ) ಮೂಲಕ ನಡೆಸಲು ಪರಿಶೀಲನೆ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್‌ ಸೂಚನೆ ನೀಡಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಪಂಚಾಯಿತಿ ಅಧ್ಯಕ್ಷರು 2002ರ ಮಾರ್ಚ್‌ 7ರಂದು ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಬೊಮ್ಮೇನಹಳ್ಳಿ ಕೆಂಪೇಗೌಡ ಎಂಬುವವರ ಹೆಸರಿನಲ್ಲಿದ್ದ ಖಾತೆಯನ್ನು ರದ್ದುಪಡಿಸಿ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಮಂಡ್ಯ ಜಿಲ್ಲಾ ಪಂಚಾಯತ್‌ ಅಧ್ಯಕ್ಷರಿಗೆ ಕೆಂಪೇಗೌಡ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಕೆಯಾಗಿ 12 ವರ್ಷಗಳಿಗೂ ಹೆಚ್ಚು ಕಾಲ ಕಳೆದರೂ ವ್ಯಾಜ್ಯ ಬಗೆಹರಿದಿರಲಿಲ್ಲ. ಅಲ್ಲದೆ, ಕೆಂಪೇಗೌಡ ಕೂಡ ಮೃತಪಟ್ಟಿದ್ದರು.

ಅರ್ಜಿಯ ಯಾವುದೇ ವಿಚಾರಣೆ ನಡೆಯದೇ 111ಕ್ಕೂ ಹೆಚ್ಚು ಸಲ ದಿನಾಂಕಗಳನ್ನು ಮುಂದೂಡಲಾಗಿತ್ತು. ಇದೆಲ್ಲದರ ನಡುವೆ, ಅರ್ಜಿದಾರರಿಗೆ ಯಾವುದೇ ಮಾಹಿತಿ ನೀಡದೆ ಅವರ ಅನುಪಸ್ಥಿತಿಯಲ್ಲಿ ಪ್ರಕರಣ ಮುಕ್ತಾಯಗೊಳಿಸಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೆಂಪೇಗೌಡರ ಪುತ್ರ ಮಂಜೇಗೌಡ ಅವರು ‘ಪಂಚಾಯತ್ ರಾಜ್‌ ಕಾಯ್ದೆ-1993’ರ ಪ್ರಕಾರ ಜಮೀನಿನ ಖಾತಾ ರದ್ದುಪಡಿಸುವ ಅಧಿಕಾರ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಅಧ್ಯಕ್ಷರಿಗೆ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಜೊತೆಗೆ ಅಧಿಕಾರ ವ್ಯಾಪ್ತಿ ಮೀರಿ ನಮ್ಮ ಪ್ರಕರಣವನ್ನು ವಿಲೇವಾರಿ ಮಾಡಲಾಗಿದೆ ಎಂದು ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ನೇತೃತ್ವದ ಏಕಸದಸ್ಯ ನ್ಯಾಯಪೀಠ, ಮಂಜೇಗೌಡರ ತಂದೆ ಹೆಸರಿನ ಖಾತೆ ರದ್ದುಪಡಿಸಲಾದ ಆದೇಶವನ್ನು ಅಮಾನ್ಯಗೊಳಿಸಿದೆ.

ಈ ಸುದ್ದಿ ಓದಿದ್ದೀರಾ? : ಗದಗ | ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ: ಪಿಡಿಓ ಶೈನಾಜ್

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ‘ಹಳೆಯ ಕಂದಾಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಅರೆ ನ್ಯಾಯಾಂಗದ ಕಾರ್ಯಗಳನ್ನು ನಿರ್ವಹಣೆ ಮಾಡುವುದಕ್ಕೆ ಪ್ರತ್ಯೇಕ ತಂಡ ನೇಮಕ ಮಾಡುವ ಬಗ್ಗೆ ಪರಿಶೀಲಿಸಿ, 8 ವಾರಗಳ ಒಳಗೆ ಸಮಗ್ರ ವರದಿ ಸಲ್ಲಿಸಬೇಕು” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ತಾಕೀತು ಮಾಡಿದೆ.

ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ‍ಪ್ರಕರಣಗಳ ವಿಚಾರಣೆ ನಡೆಯುತ್ತಿವೆ. ಇದೇ ರೀತಿಯಲ್ಲಿ ಇ–ಆಡಳಿತದ ಸಹಕಾರದಿಂದ ಅರೆ ನ್ಯಾಯಾಂಗ ಪ್ರಾಧಿಕಾರಗಳಲ್ಲಿಯೂ ‘ವಿಡಿಯೊ ಕಾನ್ಫ‌ರೆನ್ಸಿಂಗ್’ ವಿಚಾರಣೆ ನಡೆಸಲು ಸಾಧ್ಯವಿದೆಯೇ ಎಂದು ಪರಿಶೀಲಿಸುವಂತೆಯೂ ಸೂಚಿಸಿದೆ.

“ಅರೆನ್ಯಾಯಿಕ ಪ್ರಾಧಿಕಾರಗಳ ಮುಂದೆ ಬರುವ ಕಂದಾಯ ವ್ಯಾಜ್ಯಗಳ ವಿಚಾರಣೆಗಳನ್ನು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಯಾವುದೇ ಕಾರಣ ನೀಡದೇ ಮುಂದೂಡುವುದು ಅಸ್ಪಷ್ಟವಾಗಿದೆ. ಸೂಕ್ತ ಮತ್ತು ಅಗತ್ಯ ರೀತಿಯಲ್ಲಿ ವಿಚಾರಣೆ ನಡೆಸುತ್ತಿರುವುದು ನ್ಯಾಯಪೀಠದ ಗಮನಕ್ಕೆ ಬಂದಿದ್ದು, ಈ ಹಿಂದೆ ಕೂಡ ಇದೇ ರೀತಿ ನಡೆದುಬಂದಿದೆ” ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ದಾಖಲೆ ಇಲ್ಲದ 114.72 ಗ್ರಾಂ ಚಿನ್ನ ಹಾಗೂ 3.2 ಕೆ.ಜಿ. ಬೆಳ್ಳಿ ವಶ

ಕಲಬುರಗಿ-ಯಾದಗಿರಿ ಜಿಲ್ಲೆಯ ಗಡಿಯ ನಾಲವಾರ ಚೆಕ್ ಪೋಸ್ಟ್ ಬಳಿ ಗುರುವಾರ (ಮಾ.28)...

ತೆರಿಗೆ ಮರು ಮೌಲ್ಯಮಾಪನ ವಿರುದ್ಧದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ...

ಕಲಬುರಗಿ | ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ’ ಅಭಿಯಾನ

ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ...

ದಕ್ಷಿಣ ಕನ್ನಡ | ಮೀನಿನ ಆಹಾರ ತಯಾರಿಕಾ ಘಟಕದಲ್ಲಿ ಬೆಂಕಿ; ಕೋಟ್ಯಂತರ ರೂ. ನಷ್ಟ

ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ...