ಸಿದ್ದರಾಮಯ್ಯ ಸರ್ಕಾರ ಬಂದರೆ ಕಿಸಾನ್ ಸಮ್ಮಾನ್‌ ಯೋಜನೆ ಸೇರಿ ಹಲವು ಯೋಜನೆ ಬಂದ್‌: ಜೆ ಪಿ ನಡ್ಡಾ

Date:

ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ಬರುವ ಎಲ್ಲ ಯೋಜನೆಗಳು ರಾಜ್ಯಕ್ಕೆ ಬಂದ್‌ ಆಗಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅಭಿಪ್ರಾಯ ಪಟ್ಟಿದ್ದಾರೆ.

- Advertisement -

ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಅವರು ಈ ಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

“ಸಿದ್ದರಾಮಯ್ಯ ಸರ್ಕಾರ ಬಂದಿದ್ದೇ ಆದಲ್ಲಿ ಕಿಸಾನ್ ಸಮ್ಮಾನ್‌ ಯೋಜನೆ ಸೇರಿ ಹತ್ತು ಹಲವು ಯೋಜನೆಗಳು ರಾಜ್ಯದ ಜನರಿಗೆ ತಲುಪುವುದಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ತರಲು ಬಿಜೆಪಿ ಬೆಂಬಲಿಸಿ” ಎಂದರು.

“ಪರಿಶಿಷ್ಟರಿಗೆ ಒಳಮೀಸಲಾತಿಯನ್ನು ಬಿಜೆಪಿ ಸರ್ಕಾರ ಕೊಟ್ಟಿದೆ. ಪರಿಶಿಷ್ಟ ಪಂಗಡ, ಲಿಂಗಾಯತರು, ಒಕ್ಕಲಿಗರ ಮೀಸಲಾತಿಯನ್ನೂ ಹೆಚ್ಚಿಸಿದೆ. ಆದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈಗ ಹೆಚ್ಚಿಸಿರುವ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಹೇಳಿದೆ. ಇಂತಹವರಿಗೆ ಬುದ್ದಿ ಕಲಿಸಬೇಕು” ಎಂದು ಕರೆ ಕೊಟ್ಟರು.

“ಕಾಂಗ್ರೆಸ್‌ನವರು ತಾವು ಭ್ರಷ್ಟಾಚಾರ ಮಾಡಿ, ಮತ್ತೊಬ್ಬರ ಮೇಲೆ ಆರೋಪ ಮಾಡುವುದನ್ನು ಕೈಬಿಡಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಡಿ ಕೆ ಶಿವಕುಮಾರ ಅವರೆಲ್ಲ ಭ್ರಷ್ಟಾಚಾರ ಮಾಡಿ ಬೇಲ್ ಮೇಲೆ ಹೊರಗಿದ್ದಾರೆ. ಅವರ ಮೇಲಿನ ಆರೋಪಗಳು ಸಾಬೀತಾದರೆ ಜೈಲಿಗೆ ಹೋಗುವುದು ತಪ್ಪುವುದಿಲ್ಲ” ಎಂದು ನಡ್ಡಾ ತಿಳಿಸಿದರು.

ಭಾಷಣದ ಕೊನೆಗೆ ಭಜರಂಗ ದಳ ನಿಷೇಧ ಕುರಿತು ವಿಷಯ ಪ್ರಸ್ತಾಪಿಸಿ, ʼಭಜರಂಗ ಬಲಿ ಕೀ ಜೈʼ ಎಂದು ಕೂಗಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ಬಂಗಾಳದಲ್ಲಿ ಮಿತಿಮೀರಿದ ಕೋಮು ರಾಜಕಾರಣ: ಆಡಳಿತ ಮತ್ತು ಶಿಕ್ಷಣ ಕ್ಷೇತ್ರಕ್ಕೆ ತೀವ್ರ ಸವಾಲು

ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ವಾರಗಳಿಂದ ಆಡಳಿತ, ಶಿಕ್ಷಣ ಸಂಸ್ಥೆಗಳು ಹಾಗೂ...