ನಂದಿನಿ ಮೊಸರಿನ ಪೊಟ್ಟಣದಲ್ಲಿ ಹಿಂದಿ ಪದ ಬಳಸಲು ಆದೇಶ : ಕರ್ನಾಟಕ, ತಮಿಳುನಾಡಿನಲ್ಲಿ ಆಕ್ರೋಶ

Date:

  • ಇತ್ತೀಚಿಗಷ್ಟೆ ಮೊಸರಿನ ಬದಲು ದಹಿ ಬಳಸಲು ಆದೇಶ ನೀಡಿದ್ದ ಎಫ್ಎಸ್ಎಸ್ಎಐ
  • ಆದೇಶಕ್ಕೆ ಕರ್ನಾಟಕ ಹೋರಾಟಗಾರರು ಹಾಗೂ ತಮಿಳುನಾಡು ಸಿಎಂ ಖಂಡನೆ

ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಮೊಸರಿನ ಪೊಟ್ಟಣದ ಮೇಲೆ ‘ದಹಿ’ ಎಂದು ಹಿಂದಿ ಪದ ಬಳಸಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(ಎಫ್‌ಎಸ್‌ಎಸ್‌ಎಐ) ಆದೇಶ ನೀಡಿರುವುದಕ್ಕೆ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್‌ ಕೂಡ ಕೆಎಂಎಫ್‌ಗೆ ನೀಡಿರುವ ಆದೇಶವನ್ನು ಖಂಡಿಸಿದ್ದು, ಯಾವುದೇ ಕಾರಣಕ್ಕೂ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಕೆಎಂಎಫ್ ಅಧಿಕಾರಿಗಳನ್ನು ಭೇಟಿ ಮಾಡಿರುವ ಹಲವು ಕನ್ನಡಪರ ಸಂಘಟನೆಗಳು, ಕರ್ನಾಟಕ ಹಾಲು ಒಕ್ಕೂಟವು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆದೇಶವನ್ನು ಪಾಲಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವಿಜ್ಞಾನ ಮತ್ತು ಗುಣಮಟ್ಟದ ಜಂಟಿ ನಿರ್ದೇಶಕರು ಹೊರಡಿಸಿದ ಪತ್ರದಲ್ಲಿ, “ದಹಿ ಉತ್ಪನ್ನಗಳಿಗೆ ಸಂಬಂಧಿಸಿದ ನಿಬಂಧನೆಗಳನ್ನು ಅನುಸರಿಸುವ ಸಂದರ್ಭದಲ್ಲಿ, ದಹಿ ಪದ ಮುಖ್ಯವಾಗಿರಬೇಕು. ಪ್ರಚಲಿತ ಪ್ರಾದೇಶಿಕ ಸಾಮಾನ್ಯ ಹೆಸರುಗಳಾದ ಮೊಸರು, ತೈರ್, ಪೆರುಗು ಮುಂತಾದ ಸಮಾನ ಹೆಸರುಗಳನ್ನು ಆವರಣದಲ್ಲಿ ಬಳಸಬೇಕು” ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿವಾದಾತ್ಮಕ ಪೂತನಿ ಹೇಳಿಕೆ; ರಾಜಕೀಯ ಕೆಸರೆರಚಾಟಕ್ಕೆ ಮಹಿಳೆಯರು ಗುರಿ

ಈ ಆದೇಶದ ಬಗ್ಗೆ ಟ್ವಿಟರ್‌ನಲ್ಲಿ ಆಕ್ರೋಶ ಹೊರಹಾಕಿರುವ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ, ಪ್ರಾಧಿಕಾರವು ಕಡ್ಡಾಯವಾಗಿ ದಹಿ ಅಂತ ಬಳಸಲೇಬೇಕು ಎಂಬ ಆದೇಶ ಮಾಡಿದೆ. ಇಂದು ದಹಿ, ನಾಳೆ ನಂದಿನಿ ದೂದ್, ನಂದಿನಿ ಪಾನಿ ಅಂದುಕೊಂಡು ಎಲ್ಲದಕ್ಕೂ ಹಿಂದಿ ಕಡ್ಡಾಯ ಮಾಡಿ ಕಡೆಗೆ ಕನ್ನಡವನ್ನೇ ಇಲ್ಲವಾಗಿಸೋ ಹುನ್ನಾರವಾಗಿದೆ. ಮೆಟ್ರೋ ಹಿಂದಿ ಹೇರಿಕೆ ತಡೆದ ಹಾಗೆ ನಂದಿನಿ ಮೇಲಿನ ಹಿಂದಿ ಹೇರಿಕೆ ತಡೆಯಬೇಕಿದೆ. ನಂದಿನಿ ಮೊಸರಿನ ಪೊಟ್ಟಣದ ಮೇಲೆ ದಹಿ ಎಂದು ಹಿಂದಿಯಲ್ಲಿ ಮುದ್ರಣವಾಗಿ ಬಂದರೆ ಸಾವಿರಾರು ಜನ ಕನ್ನಡಿಗರು ಕನ್ನಡ ಶಾಲುಗಳೊಂದಿಗೆ ಕೆಎಂಎಫ್ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತದೇ. ನಾವು ಕನ್ನಡಿಗರು ಹಿಂದಿ ಹೇರಿಕೆ ಸಹಿಸೋಲ್ಲ” ಎಂದು ತಿಳಿಸಿದ್ದಾರೆ.

ಆದೇಶವನ್ನು ಖಂಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಹಿಂದಿ ಹೇರಿಕೆಯ ನಾಚಿಕೆಗೇಡುತನದ ಒತ್ತಾಯಗಳು ನಮ್ಮದೇ ರಾಜ್ಯಗಳಲ್ಲಿ ತಮಿಳು ಮತ್ತು ಕನ್ನಡವನ್ನು ಹಿಮ್ಮೆಟ್ಟಿಸುವ, ಮೊಸರು ಪೊಟ್ಟಣಕ್ಕೂ ಹಿಂದಿಯಲ್ಲಿ ಲೇಬಲ್ ಮಾಡಲು ನಿರ್ದೇಶಿಸುವ ಮಟ್ಟಕ್ಕೆ ಬಂದಿವೆ. ನಮ್ಮ ಮಾತೃಭಾಷೆಯನ್ನು ನಿರ್ಲಕ್ಷಿಸುವ ಇಂತಹ ನಿರ್ಲಜ್ಜ ಹೊಣೆಗಾರರನ್ನು ದಕ್ಷಿಣದಿಂದ ಶಾಶ್ವತವಾಗಿ ಬಹಿಷ್ಕರಿಸುವುದನ್ನು ಈ ಆದೇಶ ಖಚಿತಪಡಿಸುತ್ತದೆ” ಎಂದು ಟೀಕಿಸಿದ್ದಾರೆ.

ತಮಿಳುನಾಡಿನ ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವ ಎಸ್‌ ಎಂ ನಾಸರ್ ಸುದ್ದಿಗಾರರೊಂದಿಗೆ ಮಾತನಾಡಿ, “ಎಫ್‌ಎಸ್‌ಎಸ್‌ಎಐನ ಸೂಚನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ ಮತ್ತು ನಮ್ಮ ಮೊಸರು ಪೊಟ್ಟಣಗಳಲ್ಲಿ ಮೊಸರು ಪದದ ತಮಿಳು ಸಮಾನವಾದ ಥೈರ್ ಎಂದು ಲೇಬಲ್ ಮಾಡುವುದನ್ನು ಮುಂದುವರಿಸಲಾಗುವುದು” ಎಂದು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...