ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆಯ ಕಸರತ್ತು ಕೊನೆಗೂ ಅಂತ್ಯಗೊಂಡಿದ್ದು, 24 ಶಾಸಕರಿಗೆ ಸಚಿವ ಸ್ಥಾನ ಲಭಿಸುವ ಮೂಲಕ ಪೂರ್ಣಪ್ರಮಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಿದ್ಧವಾಗಿದೆ.
ಮುಖ್ಯಮಂತ್ರಿಗಳ ಕಚೇರಿಯಿಂದ ನೂತನ ಸಚಿವರ ಪಟ್ಟಿ ರಾಜಭವನ ತಲುಪಿದೆ. ಶನಿವಾರ (ನಾಳೆ) ಬೆಳಿಗ್ಗೆ 11.45 ಕ್ಕೆ 24 ಸಚಿವರು ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕೃಸಲಿದ್ದಾರೆ.
ಶನಿವಾರ ಪ್ರಮಾಣ ವಚನ ಸ್ವೀಕರಿಸುವ ಸಚಿವರ ಪಟ್ಟಿ
ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಈಶ್ವರ್ ಖಂಡ್ರೆ, ರಹೀಂ ಖಾನ್, ಸಂತೋಷ್ ಲಾಡ್, ಕೆ ಎನ್ ರಾಜಣ್ಣ, ಪಿರಿಯಾಪಟ್ಟಣ ವೆಂಕಟೇಶ್, ಎಚ್. ಸಿ. ಮಹದೇವಪ್ಪ, ಬೈರತಿ ಸುರೇಶ್, ಸಿ. ಪುಟ್ಟರಂಗಶೆಟ್ಟಿ, ಶಿವರಾಜ್ ತಂಗಡಗಿ, ಆರ್.ಬಿ. ತಿಮ್ಮಾಪುರ, ಬಿ ನಾಗೇಂದ್ರ, ಲಕ್ಷ್ಮೀ ಹೆಬ್ಬಾಳ್ಕರ್, ಮಧು ಬಂಗಾರಪ್ಪ, ಡಿ ಸುಧಾಕರ್, ಚೆಲುವರಾಯ ಸ್ವಾಮಿ, ಮಂಕಾಳ ವೈದ್ಯ,ಶಿವಾನಂದ ಪಾಟೀಲ್ ,ಎಂಸಿ ಸುಧಾಕರ್, ಹೆಚ್.ಕೆ. ಪಾಟೀಲ್, ಶರಣಪ್ರಕಾಶ ಪಾಟೀಲ್, ಎಸ್ ಎಸ್ ಮಲ್ಲಿಕಾರ್ಜುನ, ಶರಣಬಸಪ್ಪ ದರ್ಶನಾಪುರ ಸೇರಿದ್ದಾರೆ.
ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲಿರುವ ನೂತನ ಸಚಿವರ ಪಟ್ಟಿಯಲ್ಲಿ ಏಕೈಕ ಎಂಎಲ್ಸಿ ಎನ್ಎಸ್ ಬೋಸರಾಜು ಅವರ ಹೆಸರಿಗೂ ಅನುಮೋದನೆ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಅಂತಿಮ ಪಟ್ಟಿಗೆ ಅನುಮೋದನೆ ನೀಡಲಾಗಿದೆ.
ಕೊನೆಗೂ ನಕಲಿ ದೇಶಭಕ್ತರಿಗೆ ಮಂದಿನ ಐದು ವರ್ಷಗಳು ತಿಂದಿದ್ದನ್ನು ಅರಗಿಸಿಕೊಳ್ಳಲು ಮಾಡಿದ ಘನಂದಾರಿ ಕೆಲಸಗಳಿಗೆ ವಿಶ್ರಾಂತಿಯ ಅಗತ್ಯವಿತ್ತು ಅದನ್ನು ಕರ್ನಾಟಕದ ಪ್ರಜ್ಞಾವಂತ ಮತದಾರರು ಮತದಾರರು ಮಾಡಿದ್ದಾರೆ, ಮುಂದಿನ ಐದು ವರ್ಷಗಳಲ್ಲಿ ಕಾಂಗ್ರೆಸ್ ನವರು ಜನರಿಗೆ ನೀಡಿದ ಭರವಸೆಗಳನ್ನು ನಿಯತ್ತಾಗಿ ಈಡೇರಿಸುವ ಕೆಲಸ ಮಾಡಿದರೆ ಭಯಂಕರ ದೇಶಭಕ್ತರ ಮುಕ್ತ ಕರ್ನಾಟಕ ಮಾಡಿ ರಾಜ್ಯ ನೆಮ್ಮದಿಯಿಂದ ಇರಬಹುದು