ಮೀಸಲಾತಿ ಘೋಷಣೆ ಎಂಬುದು ಈ ಸರ್ಕಾರಕ್ಕೆ ಮಕ್ಕಳ ಆಟಿಕೆಯಂತಾಗಿದೆ: ಕುಮಾರಸ್ವಾಮಿ ಕಿಡಿ

Date:

  • ಮೀಸಲಾತಿ ಘೋಷಣೆಗೆ ಮುನ್ನ ವೈಜ್ಞಾನಿಕವಾಗಿ ಅಧ್ಯಯನ ಮಾಡಿದ್ದೀರಾ?
  • ಮೋದಿಗೆ ಕನ್ನಡಿಗರ ಮತ ಬೇಕು, ಆದರೆ, ಕನ್ನಡಿಗರಿಗೆ ಪ್ರಧಾನಿ ಕೊಡುಗೆ ಏನು?

ಮೀಸಲಾತಿ ಘೋಷಣೆ ಎಂಬುದು ಈ ಸರ್ಕಾರಕ್ಕೆ ಮಕ್ಕಳ ಆಟಿಕೆಯಂತಾಗಿದೆ. ರಾಜ್ಯ ಸರ್ಕಾರ ಯಾವ ಆಧಾರದಲ್ಲಿ ಮೀಸಲಾತಿ ಘೋಷಣೆ ಮಾಡಿದೆ. ಮೀಸಲಾತಿ ಘೋಷಣೆಗೆ ಮುನ್ನ ವೈಜ್ಞಾನಿಕವಾಗಿ ಅಧ್ಯಯನ ಮಾಡಿದ್ದೀರಾ? ಯಾರ ಸಲಹೆ ಪಡೆದು ಮೀಸಲಾತಿ ಘೋಷಣೆ ಮಾಡಿದ್ದೀರಾ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಯಶಸ್ವಿ ಹಿನ್ನೆಲೆಯಲ್ಲಿ ಸೋಮವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

“ಈ ಸರ್ಕಾರದ ಸಾಧನೆ ಬಣ್ಣ ಬಣ್ಣದ ಜಾಹೀರಾತಿಗೆ ಸೀಮಿತವಾಗಿದೆ. ಉತ್ತರ ಕರ್ನಾಟಕ ಸಿಎಂ ಕ್ಷೇತ್ರದ ಬಡತನದ ಬಗ್ಗೆ ಕೇಂದ್ರ ವರದಿ ಮಾಡಿದೆ. ಅಪೌಷ್ಟಿಕತೆಯ ಬಗ್ಗೆಯೂ ಕೇಂದ್ರ ಸರ್ಕಾರ ವರದಿ ನೀಡಿದೆ. ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಹೇಳುತ್ತಾರೆ. ಬಡತನ ಅಪೌಷ್ಟಿಕತೆ ನಿವಾರಿಸುವಲ್ಲಿ ಸರ್ಕಾರ ವಿಫಲವಾಗಿದೆ” ಎಂದು ವಾಗ್ದಾಳಿ ನಡೆಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೋದಿ ಸಮಾಧಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಅವರನ್ನು ಸಮಾಧಿ ಮಾಡಲು ಯಾರಿಗೆ ಆಗುತ್ತದೆ. ಅಂಬೇಡ್ಕರ್ ಅವರ ಸಂವಿಧಾನ ಸಮಾಧಿ ಮಾಡಲು ಹೊರಟಿರುವುದೇ ಅವರು. ಒಬ್ಬ ಪ್ರಧಾನಿ ಬಾಯಿಂದ ಈ ರೀತಿಯ ಮಾತು ಎಷ್ಟರಮಟ್ಟಿಗೆ ಸರಿ? ಮೋದಿಗೆ ಕನ್ನಡಿಗರ ಮತ ಬೇಕು, ಕನ್ನಡಿಗರಿಗೆ ಅವರ ಕೊಡುಗೆ ಏನು” ಎಂದು ಪ್ರಶ್ನಿಸಿದರು.

“ಸಮಾವೇಶಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವೆ. ಮುಂದಿನ ಏಪ್ರಿಲ್ 10ರವೆಗೂ ಪಂಚರತ್ನ ಯಾತ್ರೆ ಮುಂದುವರೆಯಲಿದೆ. ಬೆಂಗಳೂರ ನಗರದ ಕ್ಷೇತ್ರದಲ್ಲಿ ನಾಳೆಯಿಂದ ರಥಯಾತ್ರೆ ನಡೆಯಲಿದೆ. 6ರಂದು ಮೈಸೂರಿನ ಪಿರಿಯಾಪಟ್ಟಣ, 7 ರಂದು ಕೆಆರ್ ನಗರ ನಂತರ ಕೊಳ್ಳೇಗಾಲ ಹನೂರು ಗುಂಡ್ಲುಪೇಟೆ ಕ್ಷೇತ್ರದಲ್ಲಿ ರಥಯಾತ್ರೆ ನಡೆಸುತ್ತೇವೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...