ಕೈ ಹಿಡಿಯದ ಕಮಲ ಶಾಸಕರು: ಹಲವು ಕ್ಷೇತ್ರಗಳ ಗೊಂದಲಕ್ಕೆ ಬಹುತೇಕ ತೆರೆ

Date:

Advertisements
  • ಮೊದಲ ಪಟ್ಟಿಯಲ್ಲಿ ಹಾಲಿ, ಮಾಜಿ ಶಾಸಕರಿಗೆ ಕೈ ಟಿಕೆಟ್
  • ಫಲ ನೀಡಿದ ಯಡಿಯೂರಪ್ಪ, ಅಮಿತ್‌ ಶಾ ಸಂಧಾನ

ಕಳೆದ ಕೆಲವು ದಿನಗಳಿಂದ ಬಿಜೆಪಿ ಹಾಲಿ ಶಾಸಕರು ಕೈ ಹಿಡಿಯುತ್ತಾರೆ ಎಂಬ ಗಾಳಿ ಸುದ್ದಿ ಹರಡಿತ್ತು. ಆದರೆ, ಇವರ್ಯಾರು ಕಾಂಗ್ರೆಸ್‌ ಸೇರದ ಹಿನ್ನಲೆಯಲ್ಲಿ ಮಾಜಿ ಶಾಸಕರಿಗೆ ಟಿಕೆಟ್‌ ಘೋಷಣೆ ಮಾಡಿದೆ.

ಬಿಜೆಪಿ ಹಾಲಿ ಶಾಸಕರಾದ ಹಿರಿಯೂರಿನ ಕೆ ಪೂರ್ಣಿಮಾ ಶ್ರೀನಿವಾಸ್‌, ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಡಿ ಶೇಖರ್ ಮತ್ತು ಗೋವಿಂದರಾಜ ನಗರದ ಶಾಸಕ ವಿ ಸೋಮಣ್ಣ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು.

ಆದರೆ, ಯಡಿಯೂರಪ್ಪ ಹಾಗೂ ಅಮಿತ್‌ ಶಾ ನಡೆಸಿದ ರಾಜಿ ಸಂಧಾನದಿಂದ ಇವರ್ಯಾರು ಕೈ ಹಿಡಿಯದೇ, ಬಿಜೆಪಿಯಲ್ಲಿಯೇ ಉಳಿದುಕೊಂಡಿದ್ದರಿಂದ ಕೈ ನಾಯಕರು ಈ ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ.

Advertisements

ಕಳೆದ ವಾರ ಬಿಜೆಪಿ ಎಂಎಲ್ಸಿ ಸ್ಥಾನ ತೊರೆದು ಕಾಂಗ್ರೆಸ್‌ ಸೇರಿದ್ದ ಪುಟ್ಟಣ್ಣ ಅವರಿಗೆ ರಾಜಾಜಿನಗರದ ಟಿಕೆಟ್‌ ಘೋಷಣೆ ಮಾಡಿದ್ದು, ಇಲ್ಲಿ ಆಕಾಂಕ್ಷಿಯಾಗಿದ್ದ ಭವ್ಯ ನರಸಿಂಹಮೂರ್ತಿ ಸೇರಿದಂತೆ ಹಲವರಿಗೆ ನಿರಾಸೆಯಾಗಿದೆ.

ಇನ್ನು ಕೆ ಆರ್‌ ಪೇಟೆ ಶಾಸಕ ನಾರಾಯಣ ಗೌಡ ಅವರೂ ಕೂಡ ಕಾಂಗ್ರೆಸ್‌ ಸೇರುವ ಮಾತುಗಳು ಕೇಳಿಬಂದಿದ್ದರೂ, ಜೆಡಿಎಸ್ ನ ದೇವರಾಜ್ ಕಾಂಗ್ರೆಸ್ ಸೇರುತ್ತಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರಕ್ಕೆ ಟಿಕೆಟ್‌ ಘೊಷಣೆ ಮಾಡಿಲ್ಲ.

ಗುರುಮಿಠಕಲ್‌ ಕ್ಷೇತ್ರದಲ್ಲಿ ಬಿಜೆಪಿಯು ಬಾಬುರಾವ್‌ ಚಿಂಚನಸೂರು ಅವರಿಗೆ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ಸೇರಿದ ಬಾಬುರಾವ್‌ ಚಿಂಚನಸೂರು ಕ್ಷೇತ್ರಕ್ಕೂ ಟಿಕೆಟ್‌ ಘೋಷಣೆ ಆಗಿಲ್ಲ.

ಇನ್ನು ಹಲವು ನಾಯಕರು ಜೆಡಿಎಸ್‌ ಮತ್ತು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ಇರುವುದರಿಂದ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡದೇ ಕಾದು ನೋಡುವ ತಂತ್ರವನ್ನು ಕೈ ನಾಯಕರು ಅನುಸರಿಸಿದ್ದಾರೆ ಎನ್ನಲಾಗಿದೆ.

2041e0a02b181b7e004154defbdc4ce9?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X