ಪಿಎಸ್ಐ ನೇಮಕಾತಿ ಹಗರಣ | ಮತ್ತೋರ್ವ ಪಿಎಸ್ಐ ಬಂಧನ

Date:

  • ತಲೆಮರೆಸಿಕೊಂಡಿದ್ದ ಪಿಎಸ್ಐ ನವೀನ್ ಪ್ರಸಾದ್‌ನನ್ನು ಬಂಧಿಸಿದ ಸಿಐಡಿ ಪೊಲೀಸರು
  • ಹಲವು ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದ ಆರೋಪಿ ಅಧಿಕಾರಿ

ಕಳೆದ ವರ್ಷ ನಡೆದಿದ್ದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್ಐ) ನೇಮಕಾತಿಯಲ್ಲಿ ಅಕ್ರಮ ಎಸಗಲು ನೆರವಾಗಿದ್ದ ಆರೋಪದ ಮೇಲೆ ಮತ್ತೋರ್ವ ಪೊಲೀಸ್ ಸಬ್ ಇನ್ಸ್ಪೆಕ್ಟರ್‌ನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಆರೋಪಿಯ ಹೆಸರು ಕೇಳಿಬರುತ್ತಿದ್ದಂತೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ನವೀನ್ ಪ್ರಸಾದ್ ಹಲವು ತಿಂಗಳಿನಿಂದ ನಾಪತ್ತೆಯಾಗಿದ್ದರು.

ಈ ಸುದ್ದಿ ಓದಿದ್ದೀರಾ?: ಉತ್ತರ ಕನ್ನಡ | ಪಿಎಸ್ಐ ಹಗರಣದ ಆರೋಪಿ ಆತ್ಮಹತ್ಯೆ

ಇದೇ ಪೊಲೀಸ್‌ ಠಾಣೆಯ ಪಿಎಸ್ಐ ಆಗಿದ್ದ ಹರೀಶ್ ಎಂಬುವವರನ್ನು ಈ ಹಿಂದೆ ಸಿಐಡಿ ಪೊಲೀಸರು ಬಂಧಿಸಿದ್ದರು. ಆತನನ್ನು ವಿಚಾರಣೆಗೆ ಒಳಪಡಿಸಿದಾಗ, ‘ಅಕ್ರಮ ಎಸಗಲು ತನ್ನೊಂದಿಗೆ ನವೀನ್‌ ಕೈಜೋಡಿಸಿದ್ದರು. ಹಲವು ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರು’ ಎಂದು ಹೇಳಿದ್ದರು.

ಈ ಸುದ್ದಿ ತಿಳಿಯುತ್ತಿದ್ದಂತೆ ನವೀನ್‌ ಪ್ರಸಾದ್‌ ನಾಪತ್ತೆಯಾಗಿದ್ದರು. ಅವರನ್ನು ಪತ್ತೆ ಹಚ್ಚಲು ಸಿಐಡಿ ಪೊಲೀಸರು ಹಲವು ತಂಡಗಳನ್ನು ರಚಿಸಿತ್ತು. ಇದೀಗ, ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕು; ಬಡಾಯಿ ಕೊಚ್ಚಿಕೊಳ್ಳುವುದರಿಂದಲ್ಲ: ಪ್ರಧಾನಿಗೆ ಖರ್ಗೆ ತರಾಟೆ

ಉತ್ತರಾಖಂಡದ ಗಡಿಯಂತ್ರಣ ರೇಖೆಯ ಉದ್ದಕ್ಕೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿಗಳ...

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು...

ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿಯಾದ ಸಚಿವ ಡಿಜಿಆರ್ ಇಲ್ಲಿನ ಜನ...