ಚುನಾವಣೆ 2023 | ಕಾಂಗ್ರೆಸ್‌ನ ಹಿರಿಯ ಮುಖಂಡ ನಾಗರಾಜ ಛಬ್ಬಿ ಬಿಜೆಪಿ ಸೇರ್ಪಡೆ

Date:

  • ಕಲಘಟಗಿಯಲ್ಲಿ ಸಿದ್ದು ಆಪ್ತ ಸಂತೋಷ್‌ ಲಾಡ್‌ಗೆ ಮಣೆ ಹಾಕಿದ ಕಾಂಗ್ರೆಸ್‌
  • ಟಿಕೆಟ್‌ ಸಿಗದಿದ್ದಕ್ಕೆ ಕಾಂಗ್ರೆಸ್‌ ವಿರುದ್ಧ ಮುನಿಸಿಕೊಂಡಿದ್ದ ನಾಗರಾಜ ಛಬ್ಬಿ

ಕಾಂಗ್ರೆಸ್‌ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಕಾಂಗ್ರೆಸ್‌ ತೊರೆದು ಭಾನುವಾರ ನವದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾದರು.

ಸಿದ್ದರಾಮಯ್ಯ ಆಪ್ತ ಸಂತೋಷ್‌ ಲಾಡ್‌ಗೆ ಕಲಘಟಗಿ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಬಂಡಾಯ ಎದ್ದ ಛಬ್ಬಿ, ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ನಾಗರಾಜ ಛಬ್ಬಿ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಕೊನೆಗೆ ಸಿದ್ದರಾಮಯ್ಯ ಆಪ್ತ ಸಂತೋಷ್‌ ಲಾಡ್‌ಗೆ ಕಾಂಗ್ರೆಸ್‌ ಮಣೆ ಹಾಕಿದೆ. ಇದರಿಂದ ಮುನಿಸಿಕೊಂಡು ಕಾಂಗ್ರೆಸ್‌ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಟಿಕೆಟ್‌ ಘೊಷಣೆಗೂ ಮುನ್ನವೇ ಬಂಡಾಯ; ಶಾಸಕ ರಾಮಪ್ಪ ಲಮಾಣಿ ವಿರುದ್ಧ ಭುಗಿಲೆದ್ದ ಆಕ್ರೋಶ

ನಾಗರಾಜ ಛಬ್ಬಿ ಅವರನ್ನು ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಲ ಸಂಪನ್ಮೂಲ ಸಚಿವ ಗೋವಿಂದ‌ ಕಾರಜೋಳ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಬಿಜೆಪಿ ಬಾವುಟ ನೀಡಿ ಬರಮಾಡಿಕೊಂಡಿದ್ದಾರೆ.

ಬಿಜೆಪಿಯಿಂದ ನಾಗರಾಜ ಛಬ್ಬಿ ಅವರಿಗೆ ಕಲಘಟಗಿ ಟಿಕೆಟ್‌ ಸಿಗುತ್ತದೆಯೇ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಬಿಜೆಪಿಯಿಂದ ಟಿಕೆಟ್‌ ಬಯಸಿಯೇ ಅವರು ಪಕ್ಷ ಸೇರಿದ್ದಾರೆ ಎನ್ನಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶುಕ್ಲಾ ಜೊತೆ ಕರಣ್ ಥಾಪರ್ ಮಾತುಕತೆ: ಮಹಾನಾಯಕನ ಐಬು ಮತ್ತು ಅಂಧಭಕ್ತರ ಹೂಂಕಾರ

ಭಾರತ ದೇಶ ಕಳೆದ ಹತ್ತು ವರ್ಷಗಳಿಂದ ಅದೆಂಥ ಕರಾಳಕೂಪಕ್ಕೆ ಜಾರುತ್ತಿದೆ ಎಂಬುದರ...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಚಿಕ್ಕಮಗಳೂರು | ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ; ಜೆ.ಪಿ ಹೆಗ್ಡೆಗೆ ಜನ ಬೆಂಬಲ

ಚಿಕ್ಕಮಗಳೂರು ಹಾಗೂ ಉಡುಪಿ ಲೋಕಾಸಭಾ ಕ್ಷೇತ್ರವಾಗಿದೆ. ಎಂಟು ವಿಧಾನಸಭಾ ಕ್ಷೇತ್ರ ಒಳಗೊಂಡ...