ಮುಸ್ಲಿಂ ಸಮುದಾಯಕ್ಕೆ ಕೊಡುತ್ತಿದ್ದ ಶೇ.4 ಮೀಸಲಾತಿ ಸಂವಿಧಾನಬಾಹಿರ: ತೇಜಸ್ವಿ ಸೂರ್ಯ

Date:

  • ಸರ್ಕಾರದ ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್ ನಡೆ ಅಸಹ್ಯ ತಂದಿದೆ
  • ಹಿಂದುಳಿದ ಸಮುದಾಯದ ಸಾಂವಿಧಾನಿಕ ಹಕ್ಕುಗಳನ್ನು ಕಾಂಗ್ರೆಸ್ ನಿರಾಕರಿಸುತ್ತಿದೆ

ಅಲ್ಪಸಂಖ್ಯಾತರಿಗೆ ಇದ್ದ, ಮುಸ್ಲಿಂ ಸಮುದಾಯಕ್ಕೆ ಸಂವಿಧಾನಬಾಹಿರವಾಗಿ ಕೊಡುತ್ತಿದ್ದ ಶೇ.4 ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತ, ಒಕ್ಕಲಿಗರಿಗೆ ನೀಡಲಾಗಿದೆ. ಇದನ್ನು ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಮತ್ತೆ ಅಧಿಕಾರಕ್ಕೆ ಬಂದರೆ ಮತ್ತೆ ಶೇ.4 ಮೀಸಲಾತಿಯನ್ನು ಮುಸ್ಲಿಮರಿಗೆ ಕೊಡುವುದಾಗಿ ಕಾಂಗ್ರೆಸ್ ನಾಯಕರು ಹೇಳುತ್ತಿರುವುದು ಅಚ್ಚರಿ ತಂದಿದೆ ಎಂದರು.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಸರ್ಕಾರ ಇಲ್ಲಿವರೆಗೆ ಯಾವ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಕ್ಕಿರಲಿಲ್ಲವೋ ಅವರಿಗೆ ನ್ಯಾಯ ಒದಗಿಸಲು ಮುಂದಾಗಿದೆ ಎಂದರು.

ನಿರಂತರವಾಗಿ ಕಾಂಗ್ರೆಸ್ ಒಬಿಸಿ ಸಮುದಾಯಗಳ ವಿರುದ್ಧ ಪಿತೂರಿ ಮಾಡುತ್ತಲೇ ಬಂದಿದೆ. ಈಗ ನಮ್ಮ ಸರ್ಕಾರದ ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್ ನಡೆ ಅಸಹ್ಯ ತರಿಸುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಕಿಡಿ ಕಾರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ಸುದ್ದಿ ಓದಿದ್ದೀರಾ? ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿ ಕೈವಾಡ: ಸಿದ್ದರಾಮಯ್ಯ

ಶೇ.13ರಷ್ಟು ಮುಸ್ಲಿಂ ಸಮುದಾಯ ರಾಜ್ಯದಲ್ಲಿದೆ. ಅದಕ್ಕೆ ಅನುಗುಣವಾಗಿ ಅವರಿಗೆ ಮೀಸಲಾತಿ ಕೊಡುವುದಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಹೇಳುತ್ತಿದ್ದಾರೆ. ಇದು ರಾಜ್ಯದ ಹಿಂದುಳಿದ ಸಮುದಾಯಗಳಿಗೆ ಮಾಡುತ್ತಿರುವ ಅತ್ಯಂತ ಘೋರ ಅನ್ಯಾಯ. ಇದನ್ನು ರಾಜ್ಯದ ಜನತೆ ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಎಚ್ಚರಿಸಿದರು.

ಹಿಂದುಳಿದ ಸಮುದಾಯದ ಸಾಂವಿಧಾನಿಕ ಹಕ್ಕುಗಳನ್ನು ಕಾಂಗ್ರೆಸ್ ನಿರಾಕರಣೆ ಮಾಡುತ್ತಿದೆ. ಅಲ್ಲದೆ ಈ ಸಮುದಾಯದ ಹಕ್ಕು, ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ನೀಡಿ ತುಷ್ಟೀಕರಣ ಮಾಡುತ್ತಿದೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಲದಿನಗಳ ಹಿಂದೆ ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಮತ್ತು ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸಿಕ ಪ್ರಯತ್ನ ಮಾಡಿದ್ದಾರೆ ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೇಹಾ ಕೊಲೆ ಪ್ರಕರಣ | ಹುಬ್ಬಳ್ಳಿ, ಬೆಳಗಾವಿಯಲ್ಲಿ ಚುನಾವಣೆ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಯತ್ನ

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ...

ಲೋಕಸಭೆ ಚುನಾವಣೆ | ಏ. 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಏ.19 ರಿಂದ ದೇಶದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಕರ್ನಾಟಕದಲ್ಲಿ ಎರಡು...

ನೇಹಾ ಕೊಲೆಗೂ ರಾಜಕೀಯಕ್ಕೂ ಸಂಬಂಧವಿಲ್ಲ: ಸಚಿವ ಡಾ. ಜಿ ಪರಮೇಶ್ವರ್‌ ಸ್ಪಷ್ಟನೆ

ಹುಬ್ಬಳ್ಳಿಯ ಬಿವಿಬಿ ಇಂಜಿನಿಯರ್​​ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ...

ಮತದಾರರಿಗೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಲೋಕಸಭಾ ಚುನಾವಣೆಯಲ್ಲಿ ತಮ್ಮ ಸಹೋದರ ಡಿಕೆ ಸುರೇಶ್​ಗೆ ಮತ ನೀಡುವಂತೆ ಬೆಂಗಳೂರು...