ಗುಂಡಿಕ್ಕಿ ಕೊಲ್ಲುವ ಹೇಳಿಕೆ; ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು

Date:

Advertisements

ದೇಶವನ್ನು ಇಬ್ಭಾಗ ಮಾಡುವ ಹೇಳಿಕೆ ನೀಡುವ ಡಿ.ಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ಅವರಂಥವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರಬೇಕೆಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ವಿರುದ್ದ ಮತ್ತೊಂದು ದೂರು ದಾಖಲಾಗಿದೆ.

ಶುಕ್ರವಾರ ದಾವಣಗೆರೆಯ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದೀಗ, ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಆರ್‌ಆರ್‌ ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ದೂರು ದಾಖಲಿಸಿದ್ದಾರೆ.

ಗುಂಡಿಕ್ಕಿ ಕೊಲ್ಲುವ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಈಶ್ವರಪ್ಪ ವಿರುದ್ಧ ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ದೂರುದಾರರು ಆಗ್ರಹಿಸಿದ್ದಾರೆ.

Advertisements

ಈಶ್ವರಪ್ಪ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ಕೂಡ ನಡೆಸಿದ್ದು, ಬೆಂಗಳೂರಿನಲ್ಲಿರುವ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

“ಗುಂಡಿಕ್ಕಿ ಕೊಲ್ಲಬೇಕೆಂದು ಹೇಳಿಕೆ ನೀಡಿದ್ದ ಈಶ್ವರಪ್ಪ ವಿರುದ್ಧ ಎಫ್​ಐಆರ್​ ದಾಖಲಲಾಗಿದೆ. ಅವರು ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X