ನಿತೀಶ್ ಕುಮಾರ್ ವಕ್ಫ್ ಮಸೂದೆ ವಿರೋಧಿಸಬಹುದೆಂಬ ಭರವಸೆ ಈಗಲೂ ಇದೆ: ಕಾಂಗ್ರೆಸ್ ನಾಯಕ ತಾರಿಕ್

Date:

Advertisements

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಕ್ಫ್‌ ಮಸೂದೆಯನ್ನು ವಿರೋಧಿಸಬಹುದು ಎಂಬ ಈಗಲೂ ಇದೆ ಎಂದು ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್ ಸೋಮವಾರ ಹೇಳಿದ್ದಾರೆ.

ಈದ್ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ನಮಾಝ್ ಮಾಡುತ್ತಿದ್ದ ಗಾಂಧಿ ಮೈದಾನದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಕೇಂದ್ರ ಸಚಿವ ತಾರಿಕ್ ಅನ್ವರ್ ಈ ಹೇಳಿಕೆ ನೀಡಿದ್ದಾರೆ. ಹಾಗೆಯೇ ಇತ್ತೀಚೆಗೆ ನಿತೀಶ್ ಕುಮಾರ್ ಆಯೋಜಿಸಿದ್ದ ಇಫ್ತಾರ್ ಕೂಟವನ್ನು ಹಲವು ಮುಸ್ಲಿಂ ನಾಯಕರು ಬಹಿಷ್ಕರಿಸಿದ ಬಗ್ಗೆಯೂ ತಾರಿಕ್ ಮಾತನಾಡಿದರು.

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್‌ ಅವರನ್ನು ‘ಮಿಮಿಕ್’ ಮಾಡಿದ ಆರ್‌ಜೆಡಿ ಎಂಎಲ್‌ಸಿ ಸದನದಿಂದ ಉಚ್ಚಾಟನೆ

Advertisements

“ನಿತೀಶ್ ಕುಮಾರ್ ಅವರು ಹಲವು ವರ್ಷಗಳಿಂದ ಪಾಲಿಸುತ್ತಿದ್ದ ಸಂಪ್ರದಾಯವನ್ನು (ಇಫ್ತಾರ್ ಆಯೋಜನೆ) ಮುಂದುವರೆಸಿರುವುದು ಉತ್ತಮ ವಿಚಾರ. ಆದರೆ ಇದು ಬರೀ ನಾಟಕವಲ್ಲ ಎಂಬುದು ಖಚಿತವಾಗಬೇಕು. ಬಿಜೆಪಿಯ ನಿಲುವನ್ನು ತನ್ನದಾಗಿಸಿಕೊಳ್ಳದೆ ಮುಸ್ಲಿಮರಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆಯೂ ತನ್ನ ಸರಿಯಾದ ನಿಲುವು ತೆಗೆದುಕೊಳ್ಳಬೇಕು” ಎಂದು ಹೇಳಿದರು.

“ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಅವರು ವಕ್ಫ್ ಮಸೂದೆಯನ್ನು ಬೆಂಬಲಿಸಲಾರರು ಎಂದು ನಾವಂದುಕೊಂಡಿದ್ದೆವು. ನರೇಂದ್ರ ಮೋದಿ ಸರ್ಕಾರವು ಸಂಸತ್ತಿನಲ್ಲಿ ವಕ್ಫ್‌ ಮಸೂದೆಯನ್ನು ಮಂಡಿಸಿದ ಸಂದರ್ಭದಲ್ಲಾದರೂ ನಿತೀಶ್ ಕುಮಾರ್ ತನ್ನ ಜಾತ್ಯಾತೀತ ನಿಲುವನ್ನು ತೆಗೆದುಕೊಳ್ಳಬಹುದು. ಮಸೂದೆಯನ್ನು ವಿರೋಧಿಸಬಹುದು ಎಂಬ ನಂಬಿಕೆಯಿದೆ” ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಬಿಜೆಪಿಯ ನಿಲುವನ್ನು ತನ್ನ ಪಕ್ಷದ ನಿಲುವನ್ನಾಗಿಸಿರುವ ನಿತೀಶ್ ಕುಮಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಲವು ಮುಸ್ಲಿಮರು ನಿತೀಶ್ ಆಯೋಜಿಸಿದ ಇಫ್ತಾರ್ ಬಹಿಷ್ಕರಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X