ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ | ಕೈ ನಾಯಕರ ಬಂಧನ: ಸಿಎಂ ಬೊಮ್ಮಾಯಿ

Date:

Advertisements

ಬಿ ಎಸ್‌ ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯಾದ್ಯಂತ ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ಕಲ್ಲು ತೂರಾಟ ಘಟನೆ ಭಾರೀ ಸದ್ದು ಮಾಡುತ್ತಿದೆ. ಪರಿಶಿಷ್ಟ ಜಾತಿಯ ಒಳಮೀಸಲಾತಿ ಹಂಚಿಕೆ ವಿರೋಧಿಸಿ ಬಂಜಾರ ಸಮುದಾಯ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದು, ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ನಡೆಸಿತ್ತು.

ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಬಿ ಎಸ್‌ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯಲ್ಲಿ ಕಾಂಗ್ರೆಸ್ ನಾಯಕರು ಸೆರೆಯಾಗಿದ್ದಾರೆ. ಕಾಂಗ್ರೆಸ್ ನಾಯಕರನ್ನ ಬಂಧಿಸಲಾಗಿದೆ. ಬಂಧಿತರಲ್ಲಿ ಮೂವರು ಕಾಂಗ್ರೆಸ್ ಮುಖಂಡರಿದ್ದಾರೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಕಾ ‘ಪ್ಲಾನ್’ ಮಾಡಿ ಕೃತ್ಯವೆಸಗಿದ್ದಾರೆ. ಇದು ವ್ಯವಸ್ಥಿತ ಷಡ್ಯಂತ್ರ. ಕಾಂಗ್ರೆಸ್ ನಾಯಕರು ಮೀಟಿಂಗ್ ಮಾಡಿ ಕೃತ್ಯವೆಸಗಿದ್ದಾರೆ. ಬಂಜಾರ ಜನಾಂಗದ ದಾರಿ ತಪ್ಪಿಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ನ ‘ಎಕ್ಸ್’ ಖಾತೆಯಲ್ಲಿ ಪ್ರಚೋದನಕಾರಿ ಪೋಸ್ಟ್ – ಆರೋಪ; ಎಫ್‌ಐಆರ್ ದಾಖಲು

ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್‌ನ ಅಧಿಕೃತ 'ಎಕ್ಸ್‌' ಖಾತೆಯಲ್ಲಿ ಆಕ್ಷೇಪಾರ್ಯ ಪೋಸ್ಟ್‌ ಮಾಡಲಾಗಿತ್ತು...

ಭೈರಪ್ಪ ಮತ್ತು ಕುತರ್ಕದ ಉರುಳು

ಅಂತಃಕರಣವೇ ಇಲ್ಲದಾತ ಅದು ಹೇಗೆ ಬರಹಗಾರನಾಗಲು ಸಾಧ್ಯ? ತನ್ನ ಸಹಜೀವಿಗಳ ಬಗ್ಗೆ...

ಕೇರಳ ವಿಧಾನಸಭೆಯಲ್ಲಿ SIR ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯವು...

ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು...

Download Eedina App Android / iOS

X