ತುಮಕೂರು | ಮಾಜಿ ಡಿಸಿಎಂ ಜಿ ಪರಮೇಶ್ವರ್‌ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ

Date:

  • ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ನಡೆದ ಘಟನೆ
  • ನಾಮಪತ್ರ ಸಲ್ಲಿಕೆ ವೇಳೆಯೂ ಕಲ್ಲು ತೂರಾಟ ನಡೆದಿತ್ತು

ಚುನಾವಣೆ ಪ್ರಚಾರದ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್‌ ಅವರ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಅವರ ತಲೆಗೆ ಪೆಟ್ಟಾಗಿರುವ ಘಟನೆ ನಡೆದಿದೆ.

- Advertisement -

ತುಮಕೂರು ಜಿಲ್ಲೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಜಿ ಪರಮೇಶ್ವರ್‌ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಬೈರೇನಹಳ್ಳಿಯಲ್ಲಿ ಪ್ರಚಾರ ನಡೆಸುವಾಗ ಘಟನೆ ನಡೆದಿದೆ. ಡಾ. ಜಿ ಪರಮೇಶ್ವರ್ ಅವರು ತೆರೆದ ವಾಹನದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ, ಹೂವು ಎರಚುವ ಸಂದರ್ಭದಲ್ಲಿ ದುಷ್ಕರ್ಮಿಯೊಬ್ಬ ಪರಮೇಶ್ವರ್ ಅವರತ್ತ ಕಲ್ಲು ಎಸೆದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಘಟನೆಯಲ್ಲಿ ಪರಮೇಶ್ವರ್ ಅವರ ತಲೆಗೆ ಪೆಟ್ಟಾಗಿದ್ದು, ತಕ್ಷಣ ಅವರಿಗೆ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ, ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ಶಿಫ್ಟ್ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? 56 ಇಂಚಿನ ಎದೆಯ ಪ್ರಧಾನಿಗೆ ದಮ್ಮಿದ್ರೆ ಭರವಸೆಗಳ ಕುರಿತು ಚರ್ಚೆಗೆ ಬರಲಿ: ಸಿದ್ದರಾಮಯ್ಯ ಸವಾಲು

ನಾಮಪತ್ರ ಸಲ್ಲಿಕೆ ವೇಳೆಯೂ ಕಲ್ಲು ತೂರಾಟವಾಗಿತ್ತು

ಡಾ. ಜಿ ಪರಮೇಶ್ವರ್ ಅವರು ಏ. 19 ರಂದು ನಾಮಪತ್ರ ಸಲ್ಲಿಕೆ ವೇಳೆಯೂ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಮಹಿಳಾ ಕಾನ್‌ಸ್ಟೆಬಲ್‌ ತಲೆಗೆ ಪೆಟ್ಟು ಬಿದ್ದಿತ್ತು. ಈ ಸಂಬಂಧ ಕೊರಟಗೆರೆ ತಾಲೂಕಿನ ರೆಡ್ಡಿಹಳ್ಳಿ ವೆಂಕಟಾಪುರ ಗ್ರಾಮದ ರಂಗಧಾಮಯ್ಯ ಎಂಬಾತನನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...