ಧಾರವಾಡ | ಕಮ್ಯೂನಿಸ್ಟ್ ಪಕ್ಷವು ಅಧಿಕಾರ ದಾಹದಿಂದ ಚುನಾವಣೆ ಎದುರಿಸುವುದಿಲ್ಲ: ರಾಮಾಂಜನಪ್ಪ ಆಲ್ದಳ್ಳಿ

Date:

  • ಎಸ್‌ಯುಸಿಐ (ಕಮ್ಯೂನಿಸ್ಟ್) ಪಕ್ಷದ 75ನೇ ಸಂಸ್ಥಾಪನಾ ದಿನಚರಣೆ
  • ವೈಚಾರಿಕ, ಸೈದ್ಧಾಂತಿಕ ಹಿನ್ನೆಲೆಯಲ್ಲಿ ಚುನಾವಣೆ ಎದುರಿಸಲು ಕರೆ

ಎಸ್‌ಯುಸಿಐ (ಕಮ್ಯೂನಿಸ್ಟ್) ಪಕ್ಷವು ಅಧಿಕಾರ, ಸಂಪತ್ತಿನ ದಾಹದಿಂದ ಚುನಾವಣೆಯನ್ನು ಎದುರಿಸುವುದಿಲ್ಲ. ಪಕ್ಷದ ವೈಚಾರಿಕತೆ ಹಾಗೂ ಸಿದ್ಧಾಂತವನ್ನು ಜನಸಮುದಾಯದ ಮಧ್ಯೆ ಕೊಂಡೊಯ್ಯುವ ನಿಟ್ಟಿನಲ್ಲಿ ಚುನಾವಣೆಯಲ್ಲಿ ಭಾಗವಹಿಸುತ್ತೇವೆ ಎಂದು ಎಸ್‌ಯುಸಿಐ (ಸಿ) ಪಕ್ಷದ ರಾಜ್ಯ ಕಾರ್ಯಕಾರಿ ಸದಸ್ಯ ಕಾಮ್ರೇಡ್ ರಾಮಾಂಜನಪ್ಪ ಆಲ್ದಳ್ಳಿ ಹೇಳಿದರು.

- Advertisement -

ಧಾರವಾಡ ಜಿಲ್ಲೆಯ ಮುಗಳಿ ಗ್ರಾಮದಲ್ಲಿ ನಡೆದ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ 75ನೇ ಸಂಸ್ಥಾಪನಾ ದಿನ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಪ್ರಸಕ್ತ ವರ್ಷ ಎಸ್‌ಯುಸಿಐ ಪಕ್ಷದ ಸಂಸ್ಥಾಪಕ ಕಾಮ್ರೇಡ್ ಶಿವದಾಸ್ ಘೋಷ್ ಜನ್ಮ ಶತಾಬ್ಧಿ ವರ್ಷ ಕೂಡ ಆಗಿದೆ. ಜನಹೋರಾಟ, ಸಮಾಜವಾದಿ ಕ್ರಾಂತಿಯಲ್ಲಿ ನಂಬಿಕೆಯಿಟ್ಟ ನಾವು 5 ವರ್ಷಕ್ಕೊಮ್ಮೆ ಬಂದು ಮತ ಕೇಳುವವರಲ್ಲ. ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧದ ಹೋರಾಟದ ಮೂಲಕ ಜನತೆಯ ನಡುವೆಯೇ ಸದಾ ಇರುತ್ತೇವೆ. ಇದುವರೆಗೂ ಆಡಳಿತ ನಡೆಸಿದ ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳ ಸ್ವಾರ್ಥ ರಾಜಕೀಯದಿಂದಾಗಿ ಭ್ರಷ್ಟಾಚಾರ, ನಿರುದ್ಯೋಗ, ಶಿಕ್ಷಣದ ವ್ಯಾಪಾರೀಕರಣ ಹೆಚ್ಚಾಗಿ ಜನರ ಜೀವನ ಅಧೋಗತಿಗೆ ಇಳಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳ ಆಸ್ತಿ ಕಳೆದ ಬಾರಿಗಿಂತ 10% ರಿಂದ 20% ಹೆಚ್ಚಳವಾಗಿದೆ. ಜನರು ಈ ಪಕ್ಷಗಳ ಆಡಳಿತದಿಂದ ಭ್ರಮನಿರಸನಗೊಂಡು, ಹೋರಾಟದ ಹಾದಿ ತುಳಿದಿದ್ದಾರೆ. ಕಾಮ್ರೇಡ್ ಶಿವದಾಸ್ ಘೋಷ್ ಅವರ ಚಿಂತನೆಗಳ ಆಧಾರದ ಮೇಲೆ ನಾವು ದೇಶದಲ್ಲಿ ಜನ ಹೋರಾಟಗಳನ್ನು ಕಟ್ಟುತ್ತಿದ್ದೇವೆ” ಕಿಡಿ ಕಾರಿದರು.

ಈ ಸುದ್ದಿ ಓದಿದ್ದೀರಾ? : ಸಿದ್ದರಾಮಯ್ಯ ಸೋಲಿಸಲು ರಾಹು-ಕೇತು-ಶನಿ ಒಂದಾಗಿದ್ದಾರೆ: ಶಾಸಕ ಯತೀಂದ್ರ

ಚುನಾವಣೆ ಸಂದರ್ಭದಲ್ಲಿ ಅದಾನಿ, ಅಂಬಾನಿ ಹಾಗೂ ಇತರ ಕಾರ್ಪೋರೇಟ್ ಮನೆತನಗಳು ಪಕ್ಷಗಳಿಗೆ ಹಣಬಲ ಒದಗಿಸುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಹಕರಿಸುತ್ತವೆ. ನಂತರ ತಮಗೆ ಅನುಕೂಲಕರವಾದ ನೀತಿಗಳನ್ನು ಅನುಷ್ಠಾನಗೊಳಿಸಿಕೊಳ್ಳುತ್ತವೆ. ಇದೇ 75 ವರ್ಷಗಳಿಂದ ಪುನರಾವರ್ತನೆಯಾಗಿದೆ. ಈ ಕೊಳೆತ ಬಂಡವಾಳಶಾಹಿ ವ್ಯವಸ್ಥೆ ಬುಡಮೇಲು ಮಾಡಿ, ದುಡಿಯುವ ಜನರು ಸಮರಶೀಲ ಚಳವಳಿಗಳನ್ನು ಬೆಳೆಸುವ, ಸಮಾಜವಾದಿ ವ್ಯವಸ್ಥೆ ಸ್ಥಾಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ಅಭಿಪ್ರಾಯಪಟ್ಟರು.

ಸರ್ಕಾರಿ ಕಾಲೇಜಿನ ಉಪನ್ಯಾಸಕ ಹುದ್ದೆಗೆ ರಾಜೀನಾಮೆ ನೀಡಿ, ಹೋರಾಟದ ಹಾದಿ ತುಳಿದು ಎಸ್‌ಯುಸಿಐ (ಸಿ) ಅಭ್ಯರ್ಥಿಯಾದ ಕಾಮ್ರೇಡ್ ಮಧುಲತಾ ಗೌಡರ ಮಾತನಾಡಿ, “ಕ್ಷೇತ್ರದ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ನಾನು ಭಾಗವಹಿಸಿದ್ದೇನೆ. ನನ್ನನ್ನು ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದರೆ ಈ ಹೋರಾಟಗಳನ್ನು ಇನ್ನೂ ಉನ್ನತಮಟ್ಟಕ್ಕೆ ಕೊಂಡೊಯ್ಯುತ್ತೇನೆ. ಧಾರವಾಡ ಜನರ ಧ್ವನಿಯನ್ನು ವಿಧಾನಸೌಧದಲ್ಲಿ ಮೊಳಗಿಸಲು ತಾವೆಲ್ಲ ನನ್ನನ್ನು ಬೆಂಬಲಿಸಬೇಕು” ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗನ್ನವರ, ಪಕ್ಷದ ಸ್ಥಳೀಯ ಸಮಿತಿ ಸದಸ್ಯ ಮಂಜು ಜೋಡಳ್ಳಿ, ಗೋವಿಂದ ಕೃಷ್ಣಪ್ಪ, ಮಾರುತಿ ಪೂಜಾರ, ಜಗದೀಶ ಪೂಜಾರ, ಹನುಮೇಶ ಹುಡೇದ, ಶಶಿಕಲಾ ಮೇಟಿ ಸೇರಿದಂತೆ ಹಲವು ಜನ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...