ಸಿಬಿಐ, ಇಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಕೇಜ್ರಿವಾಲ್‌ ಸರ್ಕಾರ

Date:

Advertisements
  • ಏಪ್ರಿಲ್ 16 ರಂದು ಕೇಜ್ರಿವಾಲ್‌ ಹಾಜರಾಗುವಂತೆ ಸಮನ್ಸ್ ನೀಡಿರುವ ಸಿಬಿಐ
  • ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸತ್ಯೇಂದ್ರ ಜೈನ್‌, ಮನೀಶ್ ಸಿಸೋಡಿಯಾ

ತಮ್ಮ ಪಕ್ಷದ ನಾಯಕರ ವಿರುದ್ಧ ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷ್ಯಗಳನ್ನು ಒದಗಿಸಿದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ತಿಳಿಸಿದ್ದಾರೆ.

ದೆಹಲಿಯ ಎಎಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈಗಾಗಲೇ ತಮ್ಮ ಪಕ್ಷದ ಪ್ರಮುಖ ಇಬ್ಬರು ಸಚಿವರನ್ನು ಗುರಿಯಾಗಿಸಲಾಗಿದೆ. ಕೇಂದ್ರೀಯ ತನಿಖಾ ದಳದಿಂದ ಸಮನ್ಸ್ ಪಡೆಯುವ ಸಾಲಿನಲ್ಲಿ ಮುಂದಿನ ಸರದಿ ನನ್ನದು ಎಂದು ನನಗೆ ತಿಳಿದಿದೆ. ದೆಹಲಿ ವಿದಾನಸಭೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಮಾತನಾಡಿದ ದಿನದಿಂದ ನಮ್ಮ ಪಕ್ಷವನ್ನು ಗುರಿ ಮಾಡಲಾಗುತ್ತದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ವ್ಯಂಗ್ಯವಾಡಿದ ದೆಹಲಿ ಮುಖ್ಯಮಂತ್ರಿ, “ಕೇಜ್ರಿವಾಲ್ ಭ್ರಷ್ಟರಾಗಿದ್ದರೆ, ಈ ಜಗತ್ತಿನಲ್ಲಿ ಪ್ರಾಮಾಣಿಕರು ಯಾರೂ ಇಲ್ಲ” ಎಂದರು.

Advertisements

“ತನಿಖಾ ಸಂಸ್ಥೆಗಳು ಬಂಧಿನಕ್ಕೊಳಪಟ್ಟ ಆರೋಪಿಗಳಿಗೆ ಮಾನಸಿಕವಾಗಿ, ದೈಹಿಕವಾಗಿ ಹಿಂಸೆ ನೀಡುತ್ತಿವೆ. ಬಂಧಿತರಲ್ಲಿ ಒಬ್ಬರಾದ ಚಂದನ್ ರೆಡ್ಡಿ ಎಂಬವರ ವೈದ್ಯಕೀಯ ವರದಿಯನ್ನು ಪ್ರಸ್ತುತಪಡಿಸಿದ ಕೇಜ್ರೀವಾಲ್ ‘2022ರ ಸೆಪ್ಟೆಂಬರ್ 16, ಮತ್ತು 17 ನೇ ರಂದು ಇ.ಡಿ ಅಧಿಕಾರಿಗಳು ಚಂದನ್‌ ರೆಡ್ಡಿಯ ಎರಡು ಕಿವಿ ಹಾಗೂ ಮುಖದ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಸೂಚಿಸಿದರು.

“ಚಂದನ್‌ ಅವರನ್ನು ಈ ರೀತಿ ಥಳಿಸಲು ಆತ ಏನು ಮಾಡಿದ್ದಾನೆ? ಯಾವ ಕಾಗದಕ್ಕೆ ಸಹಿ ಹಾಕಿಸಿಕೊಳ್ಳಲು ಈ ರೀತಿ ಮಾಡಲಾಯಿತು? ಅಥವಾ ಅವರು ಸುಳ್ಳು ಹೇಳಲು ನಿರಾಕರಿಸಿದ ಕಾರಣ ಅವರನ್ನು ಥಳಿಸಲಾಗಿದೆಯೇ” ಎಂದು ಕೇಜ್ರಿವಾಲ್ ಪ್ರಶ್ನಿಸಿದರು.

ಅಬಕಾರಿ ನೀತಿಯನ್ನು ಶ್ಲಾಘಿಸಿದ ಕೇಜ್ರಿವಾಲ್, “ಇದು ಅಬಕಾರಿ ವಲಯದಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುತ್ತದೆ. ಇದೇ ನೀತಿಯನ್ನು ಪಂಜಾಬ್‌ ರಾಜ್ಯದಲ್ಲಿ ಜಾರಿಗೆ ತಂದ ನಂತರ ಅಬಕಾರಿ ಆದಾಯವು ಶೇ 50 ರಷ್ಟು ಹೆಚ್ಚಾಗಿದೆ” ಎಂದು ಹೇಳಿದರು.

ಇದಕ್ಕೂ ಮೊದಲು ಮಾತನಾಡಿದ ಎಎಪಿ ಸಂಸದ ಸಂಜಯ್ ಸಿಂಗ್, “ಕೇಜ್ರಿವಾಲ್ ಅವರನ್ನು ಏಪ್ರಿಲ್ 16 ರಂದು ಬಂಧಿಸಿ ಜೈಲಿಗೆ ಕಳುಹಿಸುವ ಪಿತೂರಿಯು ಅವರ ಧ್ವನಿಯನ್ನು ಹತ್ತಿಕ್ಕುವುದಿಲ್ಲ. ದೆಹಲಿಯ ವಿಧಾನಸಭೆಯಲ್ಲಿ ಕೇಜ್ರಿವಾಲ್ ಪ್ರಧಾನಿ ಮೋದಿಯವರ ‘ಸ್ನೇಹಿತ’ರನ್ನು ಪ್ರಶ್ನಿಸಿದ ಮುಂದಿನ ದಿನವೇ ಸಿಬಿಐ ಸಮನ್ಸ್ ಜಾರಿಗೊಳಿಸಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X