ಚುನಾವಣೆಯಲ್ಲಿ ಕೆ ಸುಧಾಕರ್‌ಗೆ ಬೆಂಬಲ; ನಗರಸಭೆಯ ಐವರು ಕಾಂಗ್ರೆಸ್‌ ಸದಸ್ಯರ ಉಚ್ಚಾಟನೆ

Date:

Advertisements

ವಿಧಾನಸಭಾ ಚುನಾವಣೆಯಲ್ಲಿ ಡಾ.ಕೆ ಸುಧಾಕರ್‌ ಅವರನ್ನು ಬೆಂಬಲಿಸಿದ ಆರೋಪದ ಮೇಲೆ ನಗರಸಭೆಯ ಐದು ಮಂದಿ ಕಾಂಗ್ರೆಸ್‌ ಸದಸ್ಯರನ್ನು ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿದೆ.

ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಐದು ಮಂದಿ ಸದಸ್ಯರ ಸದಸ್ಯತ್ವ ರದ್ದುಪಡಿಸಿ, ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲು ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ. ರೆಹಮಾನ್‌ ಅವರು ಪಕ್ಷದ ಜಿಲ್ಲಾ ಅಧ್ಯಕ್ಷ ಕೆ ಎನ್ ಕೇಶವರೆಡ್ಡಿ ಅವರಿಗೆ ಸೂಚಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ 7ನೇ ವಾರ್ಡ್ ಸದಸ್ಯ ಸತೀಶ್, 13ನೇ ವಾರ್ಡ್‌ನ ನಿರ್ಮಲ ಪ್ರಭು, 15ನೇ ವಾರ್ಡ್‌ನ ಅಂಬರೀಷ್, 20ನೇ ವಾರ್ಡ್‌ನ ನರಸಿಂಹಮೂರ್ತಿ, 27ನೇ ವಾರ್ಡ್‌ನ ಎ.ನೇತ್ರಾವತಿ ಕಾಂಗ್ರೆಸ್‌ನಿಂದ ಉಚ್ಚಾಟಿತ ಸದಸ್ಯರು.

Advertisements

ಬಿಜೆಪಿ ಸರ್ಕಾರದಲ್ಲಿ ಬಿಎಂಟಿಸಿ ಉಪಾಧ್ಯಕ್ಷರಾಗಿದ್ದ ನವೀನ್ ಕಿರಣ್ ಅವರ ತಾಯಿ ಹಾಗೂ 13ನೇ ವಾರ್ಡ್ ಸದಸ್ಯೆ ನಿರ್ಮಲ ಪ್ರಭು ಹಾಗೂ 7ನೇ ವಾರ್ಡ್‌ನ ಸತೀಶ್ ಸಹ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಕೆಲಸ ಮಾಡಿದ್ದರು.

ಕೆಪಿಸಿಸಿ ಸದಸ್ಯ ವಿನಯ್ ಎನ್.ಶ್ಯಾಮ್ ಅವರ ಬೆಂಬಲಿಗರಾಗಿದ್ದ ಅಂಬರೀಷ್, ನೇತ್ರಾವತಿ, ನರಸಿಂಹಮೂರ್ತಿ, ವಿನಯ್ ಶ್ಯಾಮ್ ಅವರಿಗೆ ಟಿಕೆಟ್ ದೊರೆಯದಿರುವುದಕ್ಕೆ ಅಸಮಾಧಾನಗೊಂಡು ಬಿಜೆಪಿ ಸೇರಿದ್ದರು. ವಿಧಾನಸಭೆ ಚುನಾವಣೆ ಸಮಯದಲ್ಲಿ ಈ ಸದಸ್ಯರ ಪಕ್ಷಾಂತರ ಚರ್ಚೆಗೆ ಕಾರಣವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X