ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ | ಪೂರ್ಣೇಶ್‌ ಮೋದಿಗೆ ಸುಪ್ರೀಂ ಕೋರ್ಟ್‌ ನೋಟಿಸ್

Date:

Advertisements
  • ರಾಹುಲ್‌ ಗಾಂಧಿ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್
  • ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಾಹುಲ್‌ ಮೇಲ್ಮನವಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮ್ಮ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್‌ ನೀಡಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಶುಕ್ರವಾರ (ಜು 21) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಪೂರ್ಣೇಶ್‌ ಮೋದಿ ಹಾಗೂ ಗುಜರಾತ್‌ ಸರ್ಕಾರಕ್ಕೆ ನೋಟಿಸ್‌ ನೀಡಿದೆ.

ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಅವರಿಗೆ ಎರಡು ವರ್ಷ ಶಿಕ್ಷೆ ವಿಧಿಸಿದ ಗುಜರಾತ್ ಸೂರತ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶಕ್ಕೆ ಗುಜರಾತ್‌ ಹೈಕೋರ್ಟ್‌ ತಡೆ ನೀಡಲು ನಿರಾಕರಿಸಿತ್ತು.

ರಾಹುಲ್‌ ಗಾಂಧಿ ಅವರು ಈ ಆದೇಶ ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠ ವಿಚಾರಣೆ ನಡೆಸಿತು.

Advertisements

ರಾಹುಲ್ ಅವರ ಅರ್ಜಿಗೆ ಸಂಬಂಧಿಸಿ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಮತ್ತು ಗುಜರಾತ್‌ ಸರ್ಕಾರಕ್ಕೆ ಪೀಠ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಿದೆ.

ರಾಹುಲ್ ಗಾಂಧಿ ಅವರ ಪರ ಹಾಜರಾದ ಹಿರಿಯ ವಕೀಲ ಎ ಎಂ ಸಿಂಘ್ವಿ ಮತ್ತು ವಕೀಲ ಪ್ರಸನ್ನ ಎಸ್, ಶಿಕ್ಷೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿರುವ ಗುಜರಾತ್‌ ಹೈಕೋರ್ಟ್‌ನ ಆದೇಶವನ್ನು ಪೀಠದ ಅವಗಾಹನೆಗೆ ತಂದರು.

“ಈ ಹಂತದಲ್ಲಿ ಪ್ರತಿವಾದಿಗಳ ವಾದವನ್ನು ಆಲಿಸದೆ ನಾವು ಹೇಗೆ ತೀರ್ಪು ನೀಡಲು ಸಾಧ್ಯ?” ಎಂದು ನ್ಯಾಯಮೂರ್ತಿ ಬಿ ಆರ್‌ ಗವಾಯಿ ಪ್ರಶ್ನಿಸಿದರು.

ಪ್ರಕರಣದಲ್ಲಿ ಪ್ರತಿವಾದಿಗಳು ತಮ್ಮ ಹೇಳಿಕೆ ನೀಡಲು ನೋಟಿಸ್‌ ನೀಡಿ ಪೀಠ ವಿಚಾರಣೆ ಮುಂದೂಡಿತು.

2019ರಲ್ಲಿ ಲೋಕಸಭೆಗೆ ನಡೆದ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ರಾಹುಲ್ ಅವರು ಅವರು ಏಪ್ರಿಲ್ 13ರಂದು ಕೋಲಾರದಲ್ಲಿ ಭಾಷಣ ಮಾಡಿದ್ದರು. ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, “ಎಲ್ಲ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ?” ಎಂದು ಪ್ರಶ್ನಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕುರುವೈ ಬೆಳೆಗೆ ಕಾವೇರಿ ನೀರು: ಕರ್ನಾಟಕ ಮನವೊಲಿಸಲು ಕೇಂದ್ರಕ್ಕೆ ಎಂ ಕೆ ಸ್ಟಾಲಿನ್ ಪತ್ರ

ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರಾಹುಲ್ ಅವರಿಗೆ ಎರಡು ವರ್ಷ ಶಿಕ್ಷೆ ವಿಧಿಸಿ ಆದೇಶಿಸಿತ್ತು. ಬಳಿಕ ರಾಹುಲ್ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಮ್ಯಾಜಿಸ್ಟ್ರೇಟ್‌ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ಸಲ್ಲಿಸಿದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಜುಲೈ 7 ರಂದು ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X