ಚಂಡೀಗಢ ಮೇಯರ್ ಚುನಾವಣಾ ಅಕ್ರಮ: ಆಪ್ ಅಭ್ಯರ್ಥಿಯೇ ವಿಜಯಿ; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Date:

Advertisements

ದೇಶಾದ್ಯಂತ ರಾಜಕೀಯ ಚರ್ಚೆಗೆ ಗ್ರಾಸವಾಗಿರುವ ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಚುನಾವಣಾಧಿಕಾರಿ ನಡೆಸಿದ ಅಕ್ರಮಕ್ಕೆ ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್‌, ಇಂದಿನ ವಿಚಾರಣೆಯ ವೇಳೆ ಅಸಿಂಧು ಮತಗಳನ್ನು ಸಿಂಧುವೆಂದು ಪರಿಗಣಿಸಬಹುದು. ಆದ್ದರಿಂದ ನಿಜವಾದ ವಿಜಯಿ ಅಭ್ಯರ್ಥಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಂದು ಮಂಗಳವಾರ ಮಹತ್ವದ ತೀರ್ಪು ನೀಡಿದೆ.

ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ ಚುನಾವಣಾ ಫಲಿತಾಂಶಕ್ಕೆ ತಕ್ಷಣ ತಡೆ ನೀಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಪಾಲಿಕೆ ಸದಸ್ಯ ಕುಲದೀಪ್ ಕುಮಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿಯನ್ನು ಸಿಜೆಐ ಡಿವೈ ಚಂದ್ರಚೂಡ್ ಅವರಲ್ಲದೆ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್‌ ಮಿಶ್ರಾ ಅವರನ್ನೊಳಗೊಂಡ ಪೀಠ ಕೂಡ ವಿಚಾರಣೆ ನಡೆಸಿ, ಈ ತೀರ್ಪು ಪ್ರಕಟಿಸಿದೆ.

Advertisements

ಚಂಡೀಗಢ ಮೇಯರ್ ಚುನಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿ ಅನಿಲ್ ಮಾಸಿಹ್ ವಿರುದ್ಧ ಸುಪ್ರೀಂ ಕೋರ್ಟ್  ತೀವ್ರ ವಾಗ್ದಾಳಿ ನಡೆಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಬಿಜೆಪಿ ಮತ್ತು ಎಎಪಿ ನಡುವಿನ ವಿವಾದದ ಎಂಟು ‘ಅಸಿಂಧು’ ಮತಗಳನ್ನು ಪರಿಶೀಲಿಸಿತು. ‘ಮರು ಎಣಿಕೆ ಮಾಡಲಾಗುವುದು.ಮಾನ್ಯವೆಂದು ಪರಿಗಣಿಸಲಾಗುವುದು ಮತ್ತು ಈ ಫಲಿತಾಂಶಗಳ ಆಧಾರದ ಮೇಲೆ ಆಮ್ ಆದ್ಮಿಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ವಿಜಯಿ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಮಹತ್ವದ ತೀರ್ಪು ನೀಡಿದೆ.

ಈ ಸಿಂಧುತ್ವದೊಂದಿಗೆ ಆಪ್ ಮತ್ತು ಕಾಂಗ್ರೆಸ್ ಮೈತ್ರಿಗೆ ಸ್ಪಷ್ಟ ಜಯ ಸಿಗಲಿದೆ. ಈ ಮೂಲಕ ಬಿಜೆಪಿ ಭಾರೀ ಮಖಭಂಗದೊಂದಿಗೆ ಪ್ರಜಾಪ್ರಭುತ್ವ ಅತೀ ದೊಡ್ಡ ಅಕ್ರಮಕ್ಕೆ ಚುನಾವಣಾಧಿಕಾರಿ ಕಾರಣವಾಗಿದ್ದಾರೆ.

Anil Masih

ಚುನಾವಣಾಧಿಕಾರಿ ಅನಿಲ್ ಮಾಸಿಹ್‌ ವಿರುದ್ಧ ತನಿಖೆ 

ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಮತಪತ್ರವನ್ನು ವಿರೂಪಗೊಳಿಸಿದ ಚುನಾವಣಾಧಿಕಾರಿ (ರಿಟರ್ನಿಂಗ್‌ ಆಫೀಸರ್‌) ಅನಿಲ್ ಮಾಸಿಹ್ ಅವರನ್ನು ತೀರ್ಪಿನಲ್ಲೂ ತೀವ್ರ ತರಾಟೆಗೆ ತೆಗೆದುಕೊಂಡ ಸಿಜೆಐ ಡಿವೈ ಚಂದ್ರಚೂಡ್ ಅವರ ನೇತೃತ್ವದ ಪೀಠ, ತಮ್ಮ ಸಹಿ ಹಾಕುವ ಕರ್ತವ್ಯ ಮಾತ್ರ ನಿರ್ವಹಿಸುವುದರ ಬದಲು ಟಿಕ್ ಮಾರ್ಕ್ ಮಾಡುವ ಮೂಲಕ ವಿರೂಪಗೊಳಿಸಿದ್ದಾರೆ. ಉದ್ದೇಶಪೂರ್ವಕವಾಗಿ ಟಿಕ್ ಮಾಡುವ ಮೂಲಕ ಚುನಾವಣಾಧಿಕಾರಿ ತಪ್ಪೆಸಗಿದ್ದಾರೆ. ಆ ಮೂಲಕ ಚುನಾವನಾ ಪ್ರಜಾಪ್ರಭುತ್ವಕ್ಕೆ ಅವಮಾನ ಎಸಗಿದ್ದಾರೆ” ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ಅನಿಲ್ ಮಾಸಿಹ್ ವಿರುದ್ಧ ಸೆಕ್ಷನ್ 340 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮಾಡಬೇಕು. ಸೆಕ್ಷನ್ 340 ಸಿಆರ್‌ಪಿಸಿ ಅಡಿಯಲ್ಲಿ ಅವರ ವಿರುದ್ಧ ಏಕೆ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂಬ ಕಾರಣ ಕೇಳಿ ಅನಿಲ್ ಮಸಿಹ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ರಿಜಿಸ್ಟ್ರಾರ್ ಜುಡಿಷಿಯಲ್ ಅವರಿಗೆ ನಿರ್ದೇಶನ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X