ನಿಜವಾದ ಭಾರತೀಯರಾಗಿದ್ದರೆ ಈ ಹೇಳಿಕೆ ನೀಡುತ್ತಿರಲಿಲ್ಲ: ರಾಹುಲ್ ಗಾಂಧಿ ವಿರುದ್ದ ಸುಪ್ರೀಂ ತರಾಟೆ

Date:

Advertisements

2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ಜೊತೆಗೆ ನಡೆದ ಘರ್ಷಣೆಯ ಬಗ್ಗೆ ಹೇಳಿಕೆ ನೀಡಿದ್ದ, ದೇಶದ ಭೂಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದು ಹೇಳಿಕೆ ನೀಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಜೊತೆಗೆ ಅವರ ಹೇಳಿಕೆಗಳ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸೋಮವಾರ ತಡೆಯನ್ನೂ ನೀಡಿದೆ.

ಮಧ್ಯಂತರ ಪರಿಹಾರ ನೀಡಲಾಗಿದ್ದರೂ, ವಿಚಾರಣೆಯ ಸಮಯದಲ್ಲಿ, ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರನ್ನೊಳಗೊಂಡ ಪೀಠವು ಗಾಂಧಿಯವರ ಹೇಳಿಕೆಗಳಿಗೆ ಅಸಮ್ಮತಿ ವ್ಯಕ್ತಪಡಿಸಿದೆ. “ನೀವು ನಿಜವಾದ ಭಾರತೀಯರಾಗಿದ್ದರೆ ನೀವು ಈ ರೀತಿ ಹೇಳಿಕೆ ನೀಡುತ್ತಿರಲಿಲ್ಲ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ | ಪೂರ್ಣೇಶ್‌ ಮೋದಿಗೆ ಸುಪ್ರೀಂ ಕೋರ್ಟ್‌ ನೋಟಿಸ್

Advertisements

ಆದರೆ ರಾಹುಲ್ ಗಾಂಧಿ ಪರ ವಾದಿಸಿದ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ, ಓರ್ವ ವಿರೋಧ ಪಕ್ಷದ ನಾಯಕರಿಗೆ ಸಮಸ್ಯೆಗಳ ಮಾತನಾಡಲು, ಧ್ವನಿ ಎತ್ತಲು ಸಾಧ್ಯವಿಲ್ಲ ಎಂದಾದರೆ ಅದು ದುರದೃಷ್ಟಕರ ಪರಿಸ್ಥಿತಿ ಎಂದು ವಾದಿಸಿದರು.

“ಪತ್ರಿಕೆಗಳಲ್ಲಿ ಪ್ರಕಟವಾಗುವ ಈ ವಿಷಯಗಳನ್ನು ಹೇಳಲು ಸಾಧ್ಯವಾಗದಿದ್ದರೆ ಅವರು ವಿರೋಧ ಪಕ್ಷದ ನಾಯಕನಾಗಲು ಸಾಧ್ಯವಿಲ್ಲ” ಎಂದೂ ಸಿಂಘ್ವಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ನೀವು ಏನು ಹೇಳುವುದಿದ್ದರೂ ಸಂಸತ್ತಿನಲ್ಲಿ ನೀವು ಏಕೆ ಹೇಳಬಾರದು? ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ನೀವು ಯಾಕೆ ಹೇಳಬೇಕು” ಎಂದು ನ್ಯಾಯಮೂರ್ತಿ ದತ್ತ ಪ್ರಶ್ನಿಸಿದರು.

“2000 ಚದರ ಕಿಲೋಮೀಟರ್ ಭಾರತೀಯ ಪ್ರದೇಶವನ್ನು ಚೀನಿಯರು ಆಕ್ರಮಿಸಿಕೊಂಡಿದ್ದಾರೆಂದು ನಿಮಗೆ ಹೇಗೆ ತಿಳಿಯಿತು? ನೀವು ಅಲ್ಲಿದ್ದೀರಾ? ನಿಮ್ಮ ಬಳಿ ಯಾವುದೇ ವಿಶ್ವಾಸಾರ್ಹ ಸಾಕ್ಷ್ಯವಿದೆಯೇ? ನೀವು ಯಾವುದೇ ಸಾಕ್ಷಿಯಿಲ್ಲದೆ ಈ ಹೇಳಿಕೆಗಳನ್ನು ಏಕೆ ನೀಡುತ್ತೀರಿ… ನೀವು ನಿಜವಾದ ಭಾರತೀಯರಾಗಿದ್ದರೆ ಈ ರೀತಿ ಹೇಳಿಕೆಗಳನ್ನು ನೀಡುತ್ತಿರಲಿಲ್ಲ” ಎಂದಿದ್ದಾರೆ.

“ನಮ್ಮ 20 ಭಾರತೀಯ ಯೋಧರನ್ನು ಥಳಿಸಿ ಕೊಲ್ಲಲಾಗಿದೆ ಮತ್ತು ಅದು ಕಳವಳಕಾರಿ ವಿಷಯ ಎಂದು ನಿಜವಾದ ಭಾರತೀಯನೊಬ್ಬ ಹೇಳುವ ಸಾಧ್ಯತೆಯಿದೆ” ಎಂದೂ ಸಿಂಘ್ವಿ ಹೇಳಿದರು. ಈ ವೇಳೆ, “ಸಂಘರ್ಷ ನಡೆದಾಗ ಎರಡೂ ಕಡೆಗಳಲ್ಲಿ ಸಾವುನೋವುಗಳು ಸಂಭವಿಸುವುದು ಅಸಾಮಾನ್ಯವೇ” ಎಂದು ನ್ಯಾಯಮೂರ್ತಿ ದತ್ತ ಪ್ರಶ್ನಿಸಿದರು.

ರಾಹುಲ್ ಗಾಂಧಿ ಮಾತ್ರವಲ್ಲ ಲಡಾಖ್‌ನ ಹೋರಾಟಗಾರರು ಕೂಡಾ ಚೀನಾ ಭಾರತದ ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂದು ಹಲವು ಬಾರಿ ಆರೋಪಿಸಿದ್ದಾರೆ. 2020ರಿಂದ ಚೀನಾದ ಎಷ್ಟು ಭೂಮಿಯನ್ನು ವಶಪಡಿಸಿಕೊಂಡಿದೆ ಎಂಬುದನ್ನು ತೋರಿಸಲು ಹೋರಾಟಗಾರ, ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಚುಂಗಾತುಂಗ್ ಗಡಿ ಪ್ರದೇಶದಲ್ಲಿ ವಾಸ್ತವಿಕ ನಿಯಂತ್ರಣ ರೇಖೆಗೆ (ಎಲ್‌ಎಸಿ) ಮೆರವಣಿಗೆಗೆ ಕರೆ ನೀಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X