ರಾಜಸ್ಥಾನದ ಶಾಲೆಗಳಲ್ಲಿ ‘ಸೂರ್ಯ ನಮಸ್ಕಾರ’ ಕಡ್ಡಾಯ; ಸರ್ಕಾರದ ಕ್ರಮಕ್ಕೆ ವಿರೋಧ

Date:

Advertisements

ರಾಜಸ್ಥಾನದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ‘ಸೂರ್ಯ ನಮಸ್ಕಾರ’ವನ್ನು ಕಡ್ಡಾಯಗೊಳಿಸಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. ಇದು ಆ ರಾಜ್ಯದಲ್ಲಿ ಭಾರೀ ಗದ್ದಲ-ವಿರೋಧಕ್ಕೆ ಕಾರಣವಾಗಿದೆ. ಹಲವಾರು ಮುಸ್ಲಿಂ ಸಂಘಟನೆಗಳು ಈ ಕ್ರಮದ ವಿರುದ್ಧ ಪ್ರತಿಭಟಿಸಿವೆ. ತಮ್ಮ ಮಕ್ಕಳಿಗೆ ಸೂರ್ಯ ನಮಸ್ಕಾರ ಮಾಡುವಂತೆ ಒತ್ತಾಯಿಸುವ ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿವೆ.

ಭಜನ್‌ಲಾಲ್ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರ, ಫೆಬ್ರವರಿ 15ರಂದು ರಾಜಸ್ಥಾನದ ಎಲ್ಲ ಶಾಲೆಗಳಲ್ಲಿ ಸೂರ್ಯ ನಮಸ್ಕಾರವನ್ನು ಕಡ್ಡಾಯಗೊಳಿಸಿದೆ. ಆದೇಶವನ್ನು ಅನುಸರಿಸದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದೆ.

ಸರ್ಕಾರದ ನಿರ್ಧಾರಕ್ಕೆ ಮುಸ್ಲಿಂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸೂರ್ಯ ನಮಸ್ಕಾರವು ಮಂತ್ರಗಳ ಪಠಣದೊಂದಿಗೆ ಸೂರ್ಯನನ್ನು ಆರಾಧಿಸುವ ಹಲವಾರು ಯೋಗ ಭಂಗಿಗಳನ್ನು ಒಳಗೊಂಡಿರುತ್ತದೆ. ಸೂರ್ಯ ನಮಸ್ಕಾರವನ್ನು ಮಾಡುವುದರಿಂದ ಸೂರ್ಯನನ್ನು ದೇವರೆಂದು ಒಪ್ಪಿಕೊಂಡಂತಾಗುತ್ತದೆ ಎಂದು ಮುಸ್ಲಿಂ ಸಂಘಟನೆಗಳು ವಿರೋಧಿಸಿವೆ. ನಮ್ಮ ಧರ್ಮದಲ್ಲಿ ಸೂರ್ಯನನ್ನು ದೇವರೆಂದು ಕಾಣುವುದಿಲ್ಲ ಎಂದು ಹೇಳಿವೆ.

Advertisements

ರಾಜ್ಯದಲ್ಲಿ ನೂತನ ಬಿಜೆಪಿ ಸರ್ಕಾರವು ಫೆಬ್ರವರಿ 15ರ ಸೂರ್ಯ ಸಪ್ತಮಿಯಂದು ಯೋಜಿಸಿರುವ ಸೂರ್ಯ ನಮಸ್ಕಾರ ಆಚರಣೆಯಲ್ಲಿ ಭಾಗವಹಿಸದಂತೆ ಮುಸ್ಲಿಂ ಸಂಘಟನೆಗಳು ತಮ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಸೂಚಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X