ಬಸವೇಶ್ವರ ವಿಚಾರಧಾರೆ ತಲುಪಿಸಲು ಬಜೆಟ್‌ನಲ್ಲಿ ₹100 ಕೋಟಿ ಇಡಿ: ಸಿಎಂಗೆ ಸ್ವಾಮೀಜಿಗಳ ಒತ್ತಾಯ

Date:

ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿತರಾಗಿರುವ ವಿಶ್ವಗುರು ಬಸವೇಶ್ವರರ ವಿಚಾರಧಾರೆಯನ್ನು ಪರಿಣಾಮಕಾರಿಯಾಗಿ ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ಈ ವರ್ಷದ ಬಜೆಟ್‌ನಲ್ಲಿ 100 ಕೋಟಿ ರೂ. ನೀಡುವ ಜೊತೆಗೆ, ಮುಂದಿನ ನಾಲ್ಕು ವರ್ಷಗಳ ಬಜೆಟ್‌ನಲ್ಲಿ ತಲಾ 100 ಕೋಟಿಯಂತೆ ಒಟ್ಟು 500 ಕೋಟಿ ರೂ. ಅನುದಾನ ನೀಡಬೇಕು ಎಂದು ಸ್ವಾಮೀಜಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಸ್ವಾಮೀಜಿಗಳ ಬೇಡಿಕೆಗಳಲ್ಲಿ ಸಾಧ್ಯ ಇರುವವುದನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮದೇ ಕಾಂಗ್ರೆಸ್ ಸರ್ಕಾರ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ. ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ. ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮ ಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕ.
ನಮ್ಮ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಜಾತಿ ಜಡತ್ವ, ಆರ್ಥಿಕ ಜಡತ್ವ ಇರುವ ಸಮಾಜದಲ್ಲಿ ಚಲನೆ ಸಾಧ್ಯವಿಲ್ಲ.
ಬಸವಣ್ಣನವರ ವಿಚಾರಗಳೇ ಅಂಬೇಡ್ಕರ್ ವಿಚಾರಗಳಾಗಿದ್ದು ಇವೆಲ್ಲವೂ ಸಂವಿಧಾನದಲ್ಲಿ ಅಡಕವಾಗಿವೆ” ಎಂದು ಹೇಳಿದರು.

“ಗೋರುಚ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ವೇದಿಕೆ. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ದೇವರು ಬೇಕಿಲ್ಲ – ಇಚ್ಛಾಶಕ್ತಿ ಸಾಕು

ಸ್ವಾಮೀಜಿಗಳ ನಿಯೋಗದ ಬೇಡಿಕೆಗಳು

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬಸವಣ್ಣನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸಬೇಕು. ಜೊತೆಗೆ, ಬೆಂಗಳೂರಿನಲ್ಲಿ 25 ಎಕರೆ ಪ್ರದೇಶದಲ್ಲಿ ಅಕ್ಷರಧಾಮದ ಮಾದರಿಯಲ್ಲಿ ಬೃಹತ್ ‘ಶರಣ ದರ್ಶನ’ ಕೇಂದ್ರ ಸ್ಥಾಪಿಸಿ, ಅಲ್ಲಿ, ಉದ್ಯಾನ, ಗ್ರಂಥಾಲಯ, ಅತಿಥಿಕೇಂದ್ರ, ದಾಸೋಹ ಭವನ, ಸಭಾಂಗಣ ನಿರ್ಮಿಸಿ ಪ್ರವಾಸಿ ತಾಣವನ್ನಾಗಿಸಬೇಕು ಎಂಬುದನ್ನು ಬಾಲ್ಕಿ ಮಠದ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಅವರು ಎಲ್ಲರ ಪರವಾಗಿ ಮುಖ್ಯಮಂತ್ರಿಯವರ ಗಮನಕ್ಕೆ ತಂದರು.

ಎಲ್ಲ ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ‘ಪ್ರತ್ಯೇಕ ಶರಣ ಸ್ಮಾರಕ ರಕ್ಷಣೆ ಪ್ರಾಧಿಕಾರ’ ರಚಿಸಬೇಕು. ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಸದ್ಬಳಕೆಯಾಗಲು ಅಲ್ಲಿಯೇ ‘ವಚನ ವಿಶ್ವವಿದ್ಯಾಲಯ’ ಮತ್ತು ಸಂಶೋಧನ ಕೇಂದ್ರ ಆರಂಭಿಸಬೇಕು.

ಬಸವೇಶ್ವರ 1

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ‘ಬಸವಭವನ’ ನಿರ್ಮಿಸಿ, ಅಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕು. ವಚನ ಸಾಹಿತ್ಯ ಸಂಗ್ರಹ, ಪ್ರಕಟಣೆ, ಮರು ಪ್ರಕಟಣೆ, ಹಸ್ತಪ್ರತಿಗಳ ದಾಖಲೀಕರಣ, ಶರಣ ಕ್ಷೇತ್ರಗಳ ಅಧ್ಯಯನ ಮತ್ತು ದಾಖಲೀಕರಣ, ವಿಚಾರಸಂಕಿರಣ, ಸಮ್ಮೇಳನಗಳು, ವಚನಾಧಾರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಇತ್ಯಾದಿ ಚಟುವಟಿಕೆಗಳನ್ನು ನಡೆಸಲು ಶರಣ ಸಾಹಿತ್ಯ ಮತ್ತು ಸಂಸ್ಕೃತಿ ಪ್ರಸಾರಕ್ಕಾಗಿಯೇ ಇರುವ ಸಂಸ್ಥೆಗಳಿಗೆ ಅನುದಾನ ಒದಗಿಸಬೇಕು.

ಮುಖ್ಯಮಂತ್ರಿ ಭೇಟಿಗೂ ಮುನ್ನ ಈ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ರೇಸ್ ಕೋರ್ಸ್ ರಸ್ತೆಯ ಅಧಿಕೃತ ನಿವಾಸದಲ್ಲಿ ಬೆಳಿಗ್ಗೆ ಮಠಾಧೀಶರು, ಸಮುದಾಯದ ಸಚಿವರು, ಶಾಸಕರು ಸಭೆ ನಡೆಸಿದರು. ರಾಜ್ಯದೆಲ್ಲೆಡೆಯಿಂದ ಆಗಮಿಸಿದ್ದ ಸಮುದಾಯದ ಸ್ವಾಮೀಜಿಗಳು, ಶಾಸಕರು, ಮಾಜಿ ಶಾಸಕರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಿದರು. ನಂತರ, ಮುಖ್ಯಮಂತ್ರಿಯವರ ಅಧಿಕೃತ ನಿವಾಸ ‘ಕಾವೇರಿ’ಗೆ ತೆರಳಿ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಮರ್ ಖಾಲಿದ್ ಕುರಿತ ‘ಕೈದಿ‌ ನಂ. 626710 ಈಸ್ ಪ್ರೆಸೆಂಟ್’ ಸಾಕ್ಷ್ಯಚಿತ್ರ ಪ್ರದರ್ಶನ ರದ್ದಾಗಿದ್ದು ಯಾಕೆ?

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಜವಾಹರಲಾಲ್...

ಕನಕಪುರ ವಿದ್ಯಾರ್ಥಿ ನಿಲಯಕ್ಕೆ ಸಿಎಂ ದಿಢೀರ್ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚೆ

ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ...

‘ದೇಶದಲ್ಲಿ ಎಲ್ಲವೂ ಸರಿಯಿದೆ ಎನ್ನುತ್ತಾರೆ ಪ್ರಧಾನಿ, ಆದರೆ ಎಲ್ಲವೂ ದುಬಾರಿಯಾಗಿದೆ’

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯಲ್ಲಿನ ಗಣನೀಯ ಏರಿಕೆ ಮತ್ತು ಕುಸಿಯುತ್ತಿರುವ ನೈಜ...

ಬಿಜೆಪಿ ಹೇಳಿದ ತಕ್ಷಣ ಇನ್ಸ್‌ಪೆಕ್ಟರ್ ಅಮಾನತು ಮಾಡೋಕಾಗಲ್ಲ: ಪ್ರಿಯಾಂಕ್ ಖರ್ಗೆ

ಗಣಪತಿ ಮೆರವಣಿಗೆ ವೇಳೆ ಮಸೀದಿ ಮುಂದೆ ದಾಂಧಲೆ-ರಂಪಾಟ ನಡೆಸದಂತೆ ಹಿಂದುತ್ವ ಗುಂಪುಗಳಿಗೆ...