ಆಹಾರ ಧಾನ್ಯಗಳ ಗುಣಮಟ್ಟದಲ್ಲಿ ವ್ಯತ್ಯಾಸ ಕಂಡುಬಂದರೆ ಕ್ರಮವಹಿಸಿ: ಕೆ ಹೆಚ್ ಮುನಿಯಪ್ಪ

Date:

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂಎಸ್‌ಪಿ) ರೈತರಿಂದ ಖರೀದಿಸುವ ರಾಗಿ, ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ ಎಂಎಸ್‌ಪಿ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳು ಬೇಕು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಸೂಚಿಸಿದರು.

- Advertisement -

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಸೋಮವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನಸ್ಸಿ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದದ ಮೂಲಕ ನಡೆಸಿದ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಪ್ರತಿ ಕ್ವಿಂಟಾಲ್ ರಾಗಿಗೆ 4,290 ರೂ., ಪ್ರತಿ ಕ್ವಿಂಟಾಲ್ ಹೈಬ್ರೀಡ್ ಜೋಳಕ್ಕೆ 3,371 ರೂ. ಹಾಗೂ ಮಾಲದಂಡಿ ಜೋಳ 3,421, ಭತ್ತಕ್ಕೆ ಸಾಮಾನ್ಯವಾಗಿ ಪ್ರತಿ ಕ್ವಿಂಟಾಲ್ 2300 ರೂ. ದರ ನಿಗದಿಯಾಗಿದ್ದು, ಈ ದರದಲ್ಲಿ ರೈತರಿಂದ ಖರೀದಿಸಿ ಅವರಿಗೆ ಸರಿಯಾದ ಸಮಯಕ್ಕೆ ಹಣ ಸಂದಾಯ ಮಾಡಬೇಕು” ಎಂದರು.

“ಜಿಲ್ಲಾಧಿಕಾರಿಗಳು ಖರೀದಿ ಕೇಂದ್ರಗಳ ಸ್ಥಳಗಳಲ್ಲಿ ರೈತರಿಗೆ ಕುಡಿಯುವ ನೀರು ಹಾಗೂ ಶಾಮಿಯಾಣದ ವ್ಯವಸ್ಥೆಯನ್ನು ಕಲ್ಲಿಸಬೇಕು. ಏಕೆಂದರೆ ಮಾರ್ಚ್ ತಿಂಗಳಲ್ಲಿ ಹೆಚ್ಚಿನ ಬಿಸಿಲಿರಿವುದರಿಂದ ರೈತರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು” ಎಂದು ಹೇಳಿದರು.

“ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ 15 ಕೆಜಿ‌ ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮವಹಿಸಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.

“ಜಿಲ್ಲಾಧಿಕಾರಿಗಳೇ ನೇರವಾಗಿ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡಬೇಕು. ರಾಗಿಯನ್ನು ಖರೀದಿಸುವ ಕೇಂದ್ರಗಳಲ್ಲಿ ತೂಕದಲ್ಲಿ ವ್ಯತ್ಯಾಸಗಳು ಕಾಣದಂತೆ ನಿಗಾವಹಿಸಬೇಕು. ಲೋಪವೆಸಗಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅಮಾನತ್ತು ಮಾಡಬೇಕು” ಎಂದು ಜಿಲ್ಲಾಧಿಕಾರಗಳಿಗೆ ಸೂಚಿಸಿದರು.

ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್,ಆಯುಕ್ತರಾದ ವಾಸಿ ರೆಡ್ಡಿ ವಿಜಯ ಜೋತ್ಸ್ನಾ, ನಿಗಮ ನಿರ್ದೇಶಕ ಚಂದ್ರಕಾತ್,ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರಾದ ಎಂ ಎಸ್ ಎನ್ ಬಾಬು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಪಡಿತರ ಚೀಟಿ ಇ-ಕೆವೈಸಿ ಗಡುವು ವಿಸ್ತರಣೆ: ಸರ್ಕಾರ ಆದೇಶ

ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...