ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಪ್ರಿಯಾಂಕ್ ಖರ್ಗೆ

Date:

Advertisements
  • ರಾಜ್ಯದ 16 ಜಿಲ್ಲೆಗಳಲ್ಲಿ ನೀರಿನ ಕೊರತೆಯುಂಟಾಗಿರುವ ಹಿನ್ನೆಲೆಯಲ್ಲಿ ಸಭೆ
  • ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಲು ಸಿಇಓಗಳಿಗೆ ನಿರ್ದೇಶನ ನೀಡಿದ ಸಚಿವರು

ರಾಜ್ಯದ ಜನರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು. ಇದಕ್ಕಾಗಿ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ನೀರಿನ ಸಮಸ್ಯೆ ಸಂಬಂಧ ಸಚಿವರು ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ, ಚರ್ಚೆ ನಡೆಸಿದರು.

ರಾಜ್ಯದ ಗ್ರಾಮೀಣ ಭಾಗಗಳ ಕೆಲವು ಸ್ಥಳಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು, ತಕ್ಷಣದ ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಕ್ಷಣವೇ ತಾಲೂಕು ಪ್ರವಾಸ ಕೈಗೊಳ್ಳಬೇಕೆಂದು ತಿಳಿಸಿದರು.

Advertisements

ರಾಜ್ಯದ 16 ಜಿಲ್ಲೆಗಳಲ್ಲಿ ನೀರಿನ ಕೊರತೆಯುಂಟಾಗಿದೆ. ಇವುಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಂದ ನೀರಿನ ತೀವ್ರ ಕೊರತೆಯಿದೆ ಎಂಬ ವಿಚಾರವನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಸಚಿವರ ಗಮನಕ್ಕೆ ತಂದರು.

Meeting photo

ಅಂತರ್ಜಲ ಕುಸಿತದಿಂದ ಬಳಲುತ್ತಿರುವ ಜಿಲ್ಲೆಗಳನ್ನು ಆದ್ಯತೆಯಾಗಿ ಪರಿಗಣಿಸಿ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶಿಸಿದರು.

ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಾರ್ವಜನಿಕರು ನೀಡುವ ದೂರುಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು. ತಾಲೂಕು ಅಧಿಕಾರಿಗಳನ್ನು ದೂರು ನಿರ್ವಹಣೆ ಕಾರ್ಯಕ್ಕೆ ಸಜ್ಜುಗೊಳಿಸಬೇಕು. ನೀರಿನ ಅಭಾವ, ಕಲುಷಿತ ನೀರು ಸರಬರಾಜು ಕುರಿತಂತೆ ಬರುವ ದೂರುಗಳಿಗೆ ಅಧಿಕಾರಿಗಳು ಪ್ರಥಮ ಆದ್ಯತೆ ನೀಡಿ ತಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶಿಸಿದರು.

ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವಲ್ಲಿ ಜಿಲ್ಲಾ ಪಂಚಾಯತಿಗಳಿಗೆ ಹಣಕಾಸು ತೊಂದರೆ ಎದುರಾದಲ್ಲಿ ಅವಶ್ಯವಿರುವ ಹೆಚ್ಚುವರಿ ಅನುದಾನಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ಸಚಿವರು ಸೂಚಿಸಿದರು.

ರಾಜ್ಯದ 31 ಜಿಲ್ಲೆಗಳಲ್ಲಿ, 24 ಜಿಲ್ಲೆಗಳ 424 ಗ್ರಾಮಗಳಿಗೆ 365 ಟ್ಯಾಂಕರ್‌ಗಳ ಮೂಲಕ 969 ಟ್ರಿಪ್‌ ನೀರು ಸರಬರಾಜು ಮಾಡಲಾಗುತ್ತಿದೆ, ಇದರೊಂದಿಗೆ 431 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು, 357 ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ಸಭೆಯಲ್ಲಿ ಅಧಿಕಾರಿಗಳು, ಸಚಿವರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ಉಮಾ ಮಹದೇವನ್, ಕರ್ನಾಟಕ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ಗಂಗಾಧರಸ್ವಾಮಿ, ಮುಖ್ಯ ಅಭಿಯಂತರ ಎಜಾಝ್ ಹುಸೇನ್‌ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X