- ನೆಟ್ಟಿಗರ ಕಾಮೆಂಟ್ಗಳಿಗೆ ವಾರೆವ್ಹಾ ಎಂದ ಉಪ್ಪಿ
- ಕುದುರೆ ವ್ಯಾಪಾರದ ಬಗ್ಗೆ ಕಾಮೆಂಟ್ ಮಾಡಿ
ಚುನಾವಣಾ ದಿನಾಂಕ ನಿಗದಿಯಾದ ಬೆನ್ನಲ್ಲೇ ನಟ, ರಾಜಕಾರಣಿ ಉಪೇಂದ್ರ ಟ್ವಿಟರ್ನಲ್ಲಿ ಸದ್ದು ಮಾಡುತ್ತಿದ್ದಾರೆ. ಮತ ಎಣಿಕೆಗೆ ಎರಡು ದಿನ ಬೇಕೆ ಎಂದು ಪ್ರಶ್ನಿಸಿದ್ದ ಉಪೇಂದ್ರ, ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿ ನೆಟ್ಟಿಗರ ಕಾಲೆಳೆದಿದ್ದಾರೆ.
ಮೇ 10ಕ್ಕೆ ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ನಿಗದಿಯಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಈ ಕುರಿತಾಗಿ ಎರಡು ದಿನಗಳ ಕಾಲ ಏಕೆ ಮತ ಎಣಿಕೆ ತಡವಾಗುತ್ತಿದೆ ಎಂದು ಉಪೇಂದ್ರ ಪ್ರಶ್ನಿಸಿದ್ದರು.
“ಮತ ಎಣಿಕೆಗೆ ಎರಡು ದಿನ ಬೇಕೆ?! ಏಕೆಂದು ಬಲ್ಲವರು ತಿಳಿಸುತ್ತೀರಾ?” ಎಂದು ಉಪೇಂದ್ರ ಟ್ವೀಟ್ ಮಾಡಿದ್ದ ಬೆನ್ನಲ್ಲೇ ನೆಟ್ಟಿಗರು ಉಪೇಂದ್ರ ಅವರ ಪೋಸ್ಟ್ಗೆ ಮುಗಿಬಿದ್ದರು.
“ಸ್ವಲ್ಪ ಅರ್ಥ ಮಾಡ್ಕೊಳಿ ಸ್ವಾಮಿ. ಮತಯಂತ್ರಗಳನ್ನು ಮತಗಟ್ಟೆಗಳಿಂದ ಎಣಿಕೆ ಕೇಂದ್ರಗಳಿಗೆ ಕೊಂಡೊಯ್ಯಬೇಕು, ಅದರ ಜೊತೆಗೆ ಸಾಕಷ್ಟು ಭದ್ರತಾ ವ್ಯವಸ್ಥೆಗಳು ಇತ್ಯಾದಿ ಇರುತ್ತೆ ಅಲ್ವಾ? ಇಷ್ಟೆಲ್ಲಾ ಮಾಡೋಕ್ಕೆ 2 ದಿನ ಬೇಕಲ್ವಾ ಸ್ವಾಮಿ?” ಎನ್ನುವ ಕಾಮೆಂಟ್ ಹಿಡಿದು ತರಹೇವಾರಿ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು.
ಕೆಲವು ಕಾಮೆಂಟ್ಗಳಂತೂ ‘ಅತಿ ಬುದ್ಧಿವಂತರಾಗುವುದು ಅಪಾಯ, ಇದು ಸಿನಿಮಾ ಅಲ್ಲ’ ಎನ್ನುವ ಮೂಲಕ ಉಪೇಂದ್ರರ ಕಾಲೆಳೆದರು.
ಉಪೇಂದ್ರ ಅವರ ಟ್ವೀಟ್ಗೆ ಬಂದ ಕಾಮೆಂಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಡಿಜಿಟಲ್ ವೋಟಿಂಗ್ ಅಲ್ವಾ? ಮತ ಎಣಿಕೆಗೆ 2 ದಿನಾ ಬೇಕಾ? ನನಗೆ ಗೊತ್ತಿಲ್ಲಾ, ಗೊತ್ತಿದ್ದರೆ ತಿಳಿಸಿ ಅಂದೆ ಅಷ್ಟೇ. ಅಬ್ಬಬ್ಬಾ ಏನು ಕಾಮೆಂಟ್ಸ್ ಗಳು?! ವಾರೆ ವಾಹ್” ಎಂದು ನೆಟ್ಟಿಗರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ.
“ವ್ಯಾಪಾರೀ ರಾಜಕೀಯ, ಭ್ರಷ್ಟಾಚಾರ, ಕುದುರೆ ವ್ಯಾಪಾರ ಇದರ ಬಗ್ಗೆ ಕಾಮೆಂಟ್ ಮಾಡಿ ನೋಡೋಣ ಅತಿ ಬುದ್ವಂತ್ರು, ದೇಶ ಪ್ರೇಮಿಗಳು, ರಾಜಕೀಯ ಪಕ್ಷಗಳ ಹಿಂ ಬಾಲಕರು” ಎಂದು ವ್ಯಂಗ್ಯವಾಗಿ ಅಣಕವಾಡಿದ್ದಾರೆ.